2:26 PM Friday26 - April 2024
ಬ್ರೇಕಿಂಗ್ ನ್ಯೂಸ್
ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ…

ಇತ್ತೀಚಿನ ಸುದ್ದಿ

ಡೆಕ್ಕಲ್ : 25 ವರ್ಷಗಳ ಹಿಂದೆ ಮುಚ್ಚಿದ್ದ ಸರಕಾರಿ ಶಾಲೆ ಮತ್ತೆ ತೆರೆಯಲು ಗ್ರಾಮಸ್ಥರ ಒತ್ತಾಯ

01/08/2021, 19:33

ಮೂಡುಬಿದರೆ(reporterkarnataka.com): ಇಲ್ಲಿನ ಪಡುಮಾರ್ನಾಡು ಗ್ರಾಮದ ಡೆಕ್ಕಲ್ ಎಂಬಲ್ಲಿ ಸುಮಾರು 25 ವರ್ಷಗಳ ಹಿಂದೆ ಮುಚ್ಚಿ ಹೋಗಿ ಇದೀಗ ಪಳಿಯುಳಿಕೆ ಮಾತ್ರ ಉಳಿದಿರುವ

ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಮತ್ತೆ ಪ್ರಾರಂಭಿಸಲು ಒತ್ತಾಯಿಸಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಕಲ್ಯಾಣಿ ಅವರ ಅಧ್ಯಕ್ಷತೆಯಲ್ಲಿ ಗ್ರಾಮಸ್ಥರ ಸಭೆ ಭಾನುವಾರ ನಡೆಯಿತು.

ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದಯಾನಂದ ಪೈ ಮತ್ತು ಶ್ರೀನಾಥ್ ಸುವರ್ಣ, ಸದಸ್ಯರಾದ ರಾಜೇಶ್ ಸುವರ್ಣ, ವಾಸುದೇವ ರಾವ್ ಸ್ಥಳೀಯರಾದ ಸೂರಜ್  ಜೈನ್ ಮಾರ್ನಾಡು, ಸತೀಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

 ಶಾಲೆಯನ್ನು ಮತ್ತೆ ಪ್ರಾರಂಭಿಸುವ ಬಗ್ಗೆ ಸಮೂಹ ಸಂಪನ್ಮೂಲ ವ್ಯಕ್ತಿ  ಪ್ರಸನ್ನ ಶೆಣೈ ಅವರು ಇಲಾಖೆಯ ಮಾಹಿತಿಗಳನ್ನು ನೀಡಿದರು. ಈ ಸಾಲಿನಲ್ಲಿ ಶಾಲಾ ವಠಾರದಲ್ಲಿ ಅಂಗನವಾಡಿ ಕೇಂದ್ರ ಪ್ರಾರಂಭಿಸುವ ಬಗ್ಗೆ ಕ್ಷೇತ್ರ ಶಿಕ್ಷಣ ಅಧಿಕಾರಿ ಗಳನ್ನು ಕೇಳಿಕೊಂಡು ಮುಂದಿನ ಸಾಲಿನಲ್ಲಿ ಶಾಲೆ ಪ್ರಾರಂಭಿಸುವ ಬಗ್ಗೆ ನಿರ್ಧರಿಸಲಾಯಿತು. ಸ್ಥಳೀಯರಾದ ಪ್ರೌಢಶಾಲೆ ಅಧ್ಯಾಪಕ ಅಣ್ಣಿ ಎಂ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು