4:09 PM Tuesday23 - April 2024
ಬ್ರೇಕಿಂಗ್ ನ್ಯೂಸ್
ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು… ಕೊಲ್ಯದಿಂದ ಅಬ್ಬಕ್ಕ ರಾಣಿ ಸರ್ಕಲ್‌ ವರೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ… 91ರ ಹರೆಯದ ಮಾಜಿ ಪ್ರಧಾನಿ ದೇವೇಗೌಡರು ಮೋದಿ ಗೆಲ್ಲಿಸಿ ಎನ್ನುತ್ತಿದ್ದಾರೆ; ದಿನಬಳಕೆ ವಸ್ತುಗಳ… ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ: ಪಕ್ಷದ ಧ್ವಜ ನೀಡಿ…

ಇತ್ತೀಚಿನ ಸುದ್ದಿ

ಬೊಮ್ಮಾಯಿ ಸಂಪುಟದಲ್ಲಿ ಕರಾವಳಿಯ ಮೂವರಿಗೆ ಸ್ಥಾನ : ಸುನಿಲ್ ಕುಮಾರ್, ಕೋಟ ಹಾಗೂ ಅಂಗಾರ ಸಂಪುಟಕ್ಕೆ ಸೇರ್ಪಡೆ

04/08/2021, 12:55

ಬೆಂಗಳೂರು(ReporterKarnataka.com)

ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸೇರಲು ಸಚಿವಾಕಾಂಕ್ಷಿಗಳ ಪಟ್ಟಿ ಅಂತಿಮಗೊಂಡಿದ್ದು, ಕರಾವಳಿಯ ಮೂವರು ಶಾಸಕರಿಗೆ ಸಚಿವ ಸ್ಥಾನ ಬಹುತೇಕ ಖಚಿತ ಎನ್ನಲಾಗುತ್ತಿದೆ.

ಮುಖ್ಯಮಂತ್ರಿ ಬೊಮ್ಮಾಯಿ ದೆಹಲಿಯಲ್ಲಿ ಹೈ ಕಮಾಂಡ್​ ಭೇಟಿ ಮಾಡಿ ಸಚಿವರ ಪಟ್ಟಿ ಫೈನಲ್​​​ ಆದ ಬಳಿಕ ನಿನ್ನೆ ರಾತ್ರಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಬಳಿಕ ಸಚಿವ ಸ್ಥಾನ ಫಿಕ್ಸ್ ಆಗಿರುವ ಶಾಸಕರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಸಿಎಂ ಈವರೆಗೆ ಒಟ್ಟು 29 ಶಾಸಕರಿಗೆ ಕರೆ ಮಾಡಿ ಸಚಿವ ಸ್ಥಾನ ನೀಡಿರುವ ವಿಷಯವನ್ನು ಖಚಿತಪಡಿಸಿದ್ದಾರೆ. ಇಂದು ಮಧ್ಯಾಹ್ನ 2.15ಕ್ಕೆ ರಾಜಭವನದಲ್ಲಿ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

ಸಿಎಂ ನೇರವಾಗಿ ಕರೆ ಮಾಡಿ ಪ್ರಮಾಣ ವಚನಕ್ಕೆ ಆಹ್ವಾನ ನೀಡಿರುವ ಶಾಸಕರ ಪಟ್ಟಿಯಲ್ಲಿ
ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಅರವಿಂದ ಲಿಂಬಾವಳಿ, ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಬಿ.ಶ್ರೀ ರಾಮುಲು, ಉಮೇಶ್ ಕತ್ತಿ, ಎಸ್.ಟಿ.ಸೋಮಶೇಖರ್, ಡಾ.ಕೆ.ಸುಧಾಕರ್, ಬೈರತಿ‌ ಬಸವರಾಜ, ಮುರುಗೇಶ್ ನಿರಾಣಿ, ಶಿವರಾಂ ಹೆಬ್ಬಾರ್, ಶಶಿಕಲಾ ಜೊಲ್ಲೆ, ಕೆಸಿ ನಾರಾಯಣ್ ಗೌಡ, ಸುನೀಲ್ ಕುಮಾರ್, ಅರಗ ಜ್ಞಾನೇಂದ್ರ, ಗೋವಿಂದ ಕಾರಜೋಳ, ಮುನಿರತ್ನ, ಎಂ.ಟಿ.ಬಿ ನಾಗರಾಜ್, ಗೋಪಾಲಯ್ಯ, ಮಾಧುಸ್ವಾಮಿ, ಹಾಲಪ್ಪ ಆಚಾರ್, ಶಂಕರ್ ಪಾಟೀಲ್ ಮುನೇನಕೊಪ್ಪ, ಕೋಟಾ ಶ್ರೀನಿವಾಸ ಪೂಜಾರಿ, ಪ್ರಭು ಚೌವ್ಹಾಣ್, ವಿ. ಸೋಮಣ್ಣ, ಎಸ್ ಅಂಗಾರ, ಆನಂದ್ ಸಿಂಗ್, ಸಿ ಸಿ‌ ಪಾಟೀಲ್, ಬಿ.ಸಿ. ನಾಗೇಶ್ ಇದ್ದಾರೆ.

ಹಳೆಯ ಒಟ್ಟು ಏಳು ಮಂದಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಆರ್.ಶಂಕರ್, ಸಿ.ಪಿ.ಯೋಗೇಶ್ವರ್, ಅರವಿಂದ್ ಲಿಂಬಾವಳಿ, ಶ್ರೀಮಂತ ಪಾಟೀಲ್, ಸುರೇಶ್ ಕುಮಾರ್, ಜಗದೀಶ್ ಶೆಟ್ಟರ್ ಮತ್ತು ಲಕ್ಷಣ ಸವದಿಗೆ ಈ ಬಾರಿ ಮಂತ್ರಿ ಸ್ಥಾನವಿಲ್ಲ

ಇತ್ತೀಚಿನ ಸುದ್ದಿ

ಜಾಹೀರಾತು