4:46 AM Friday19 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ಉಳ್ಳಾಲ: ಮಾಜಿ ಶಾಸಕರ ಪುತ್ರನ ನಿವಾಸಕ್ಕೆ ಎನ್ಐಎ ದಾಳಿ;ಐಸಿಸ್‌ ಸಂಘಟನೆಯ ಜತೆ ಸಂಪರ್ಕ ಶಂಕೆ

04/08/2021, 12:48

ಮಂಗಳೂರು(reporterkarnataka.com) : 

ಮಂಗಳೂರು(ಉಳ್ಳಾಲ)ಕ್ಷೇತ್ರದ ಮಾಜಿ ಶಾಸಕರೊಬ್ಬರ ಪುತ್ರನ ಮನೆಯ ಮೇಲೆ ಬುಧವಾರ ಎನ್ ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಐಸಿಸ್‌ ಸಂಘಟನೆಯ ಜತೆ ಇದೆಯೆನ್ನಲಾದ ನಂಟಿನ ಆರೋಪದ ಕುರಿತು ತನಿಖೆ ನಡೆಸುತ್ತಿದ್ದಾರೆ.

ಮಾಜಿ ಶಾಸಕ ಬಿ.ಎಂ. ಇದಿನಬ್ಬ ಪುತ್ರ ಬಿ.ಎಂ.ಬಾಷಾ ಅವರ ಉಳ್ಳಾಲದ ಮಾಸ್ತಿಕಟ್ಟೆ ಬಳಿ ಇರುವ ನಿವಾಸ ಮೇಲೆ ಇಂದು ಮುಂಜಾನೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 20ಕ್ಕೂ ಅಧಿಕ ಮಂದಿ ಇದ್ದ ಅಧಿಕಾರಿಗಳ ತಂಡ ಈ ದಾಳಿಯನ್ನು ನಡೆಸಿದೆ.ಸಿರಿಯಾ ಮೂಲದ ಐಸಿಸ್‌ ಸಂಘಟನೆಯ ಜೊತೆ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ.

ಮಂಗಳೂರು ನಗರ ಪೊಲೀಸರು ಕೂಡ ಎನ್‌ಐಎ ತಂಡಕ್ಕ ಸಾಥ್ ನೀಡಿದ್ದಾರೆ. ಎನ್‌ಐಎ ಅಧಿಕಾರಿಗಳ ತಂಡ ಮನೆಯಲ್ಲಿ ಪರಿಶೀಲನೆಯನ್ನು ನಡೆಸುತ್ತಿದ್ದು, ಕುಟುಂಬಸ್ಥರಿಂದ ಮಾಹಿತಿಯನ್ನು ಕಲೆ ಹಾಕುತ್ತಿದೆ.

ಭಾಷಾ ಅವರ ಮೊಮ್ಮಗಳ ವಿವಾಹ ಕಾಸರಗೋಡು ಮೂಲದ ಸಿಯಾಝ್‌ ಎಂಬಾತನ ಜತೆಗೆ ನಡೆದಿತ್ತು. ಆಕೆಯ ಪತಿ ಸಿರಿಯಾ ಮೂಲದ ಉಗ್ರ ಸಂಘಟನೆಯ ಜತೆಗೆ ಸಂಪರ್ಕ ಹೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಆತ ಮಗು ಹಾಗೂ ಪತಿಯೊಂದಿಗೆ ಶ್ರೀಲಂಕಾ ಮಾರ್ಗವಾಗಿ ಕತಾರ್‌ಗೆ ತೆರಳಿ ಅಲ್ಲಿಂದ ಸಿರಿಯಾದಲ್ಲಿ ಐಸಿಎಸ್‌ ಸಂಘಟನೆ ಸೇರಿಕೊಂಡಿದ್ದಾನೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎನ್ನಲಾಗುತ್ತಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು