7:05 AM Thursday25 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

ಎನ್ ಐಎ ಕಾರ್ಯಾಚರಣೆ: ಮಂಗಳೂರು ಸೇರಿದಂತೆ ದೇಶಾದ್ಯಂತ ಒಟ್ಟು 4 ಮಂದಿ ವಶಕ್ಕೆ; ದಿಲ್ಲಿಯಲ್ಲಿ ವಿಚಾರಣೆ? 

05/08/2021, 09:13

ಬೆಂಗಳೂರು/ಮಂಗಳೂರು(reporterkarnataka.com): ಐಸಿಸ್ ಜತೆಗಿನ ನಂಟಿನ ಆರೋಪದ ಮೇಲೆ ಉಳ್ಳಾಲದ ಮಾಸ್ತಿಕಟ್ಟೆಯ ನಿವಾಸಕ್ಕೆ ಬುಧವಾರ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತಂಡ ಓರ್ವನನ್ನು ವಶಕ್ಕೆ ಪಡೆದಿದ್ದು, ದೇಶದ ವಿವಿಧ ಕಡೆಗಳಿಂದ ಒಟ್ಟು 4 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದೆ.

ಉಳ್ಳಾಲದ ಬಿ.ಎಂ. ಬಾಷಾ ಅವರ ಮನೆಗೆ ದಾಳಿ ನಡೆಸಿದ ಎನ್ ಐಎ ತಂಡ ದಿನವಿಡೀ ವಿಚಾರಣೆ ನಡೆಸಿ ಬಳಿಕ ಓರ್ವನನ್ನು ವಶಕ್ಕೆ ಪಡೆದುಕೊಂಡಿದೆ. ಮಾಸ್ತಿಕಟ್ಟೆ ನಿವಾಸಿಯಾಗಿರುವ ಬಾಷಾ ಅವರ ನಿವಾಸಕ್ಕೆ ಸುಮಾರು 20 ಮಂದಿಯ ಎನ್‌ಐಎ ತಂಡ ಮುಂಜಾನೆ 5.30ಕ್ಕೆ ದಾಳಿ ಮಾಡಿತ್ತು. ಸಂಜೆ ಬಾಷಾ ಅವರ ಕಿರಿಯ ಪುತ್ರ ಅಮ್ಮಾರ್ ಎಂಬಾತನನ್ನು ಹೆಚ್ಚಿನ ವಿಚಾರಣೆಗೆಂದು ವಶಕ್ಕೆ ಪಡೆದುಕೊಂಡಿದೆ.

ಆತನನ್ನು ಮಂಗಳೂರು ನ್ಯಾಯಾಲಯಕ್ಕೆ ಹಾಜರು ಪಡಿಸಿ, ಹೆಚ್ಚಿನ ವಿಚಾರಣೆಗೆ ಬೆಂಗಳೂರು ಅಥವಾ ದಿಲ್ಲಿಗೆ ಕರೆದೊಯ್ಯಲಾಗುತ್ತದೆ ಎನ್ನಲಾಗಿದೆ. 

ಎನ್ಐಎ ತಂಡ ತಲಾ ಒಬ್ಬರನ್ನು ಮಂಗಳೂರು(ಉಳ್ಳಾಲ) ಮತ್ತು ಬೆಂಗಳೂರಿನಿಂದ ಮತ್ತು ಇತರ ಇಬ್ಬರನ್ನು ಜಮ್ಮು-ಕಾಶ್ಮೀರದ ಬಂಡಿಪೋರ ಮತ್ತು ಶ್ರೀನಗರದಿಂದ ವಶಕ್ಕೆ ಪಡೆದಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು