8:45 PM Tuesday16 - April 2024
ಬ್ರೇಕಿಂಗ್ ನ್ಯೂಸ್
ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ… ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ… ವಿಜಯ ಬ್ಯಾಂಕ್, ಕಾರ್ಪೊರೇಶನ್ ಬ್ಯಾಂಕ್‌ ಎಲ್ಲಿಗೆ ಹೋಯಿತು?; ಬಿಜೆಪಿ ನಾಯಕರು ಉತ್ತರಿಸಲಿ: ಮಾಜಿ… ಪ್ರಧಾನಿ ಮೋದಿ ರೋಡ್ ಶೋ: ಏರ್ ಪೋರ್ಟ್ ನಿಂದ ಲೇಡಿಹಿಲ್ ವರೆಗೆ ಎಸ್… ದ.ಕ.ಲೋಕಸಭೆ: ತಗ್ಗಿತೇ ಬಿಜೆಪಿ ಪ್ರಚಾರ?: ದಿನ ಕಳೆದಂತೆ ಸ್ಟ್ರಾಂಗ್ ಆಗುತ್ತಿದೆಯೇ ಪದ್ಮರಾಜ್ ಟೀಮ್… ಪೋಷಕರ ನಿರ್ಲಕ್ಷ್ಯ: ಏರ್ ಗನ್ ನಲ್ಲಿ ಶೂಟ್ ಮಾಡಿಕೊಂಡು 7 ವರ್ಷದ ಬಾಲಕ… ಬಾಳೆಹೊನ್ನೂರು ಭಾಗದಲ್ಲಿ ಭಾರೀ ವರ್ಷಧಾರೆ: ಕಾದ ನೆಲಕ್ಕೆ ತಂಪೆರಚಿದ ಮಳೆ; ಕೃಷಿಕರ ಮೊಗದಲ್ಲಿ…

ಇತ್ತೀಚಿನ ಸುದ್ದಿ

ಕಾಲುಬಾಯಿ ರೋಗ: ಜಾನುವಾರುಗಳ ರಕ್ಷಣೆ ಮಾಡುವಂತೆ ಗೌಳಿಪುರ ಜನ ಆಗ್ರಹ..!; ಪಶು ವೈದ್ಯಾಧಿಕಾರಿಗಳ ನಿರ್ಲಕ್ಷ್ಯ

07/08/2021, 17:58

ಅಮರೇಶ್ ಲಿಂಗಸುಗೂರು ರಾಯಚೂರು

info.reporterkarnataka@gmail.com

ಕೊರೊನಾ ಮಹಾಮಾರಿಯ ನಡುವೆ ಜನರಿಗೆ ಮತ್ತೊಂದು ಏಟು ಬಿದ್ದಿದೆ. ಅದೇನೆಂದರೆ ಜಾನುವಾರುಗಳಿಗೆ ಕಾಲುಬಾಯಿ ರೋಗ . ಲಿಂಗಸುಗೂರು ಪುರಸಭೆ ವ್ಯಾಪ್ತಿಯಲ್ಲಿ ಬರುವ ಗೂಳಿಪೂರದಲ್ಲಿ ಎಮ್ಮೆ ಹಸುಗಳಿಗೆ ಕಾಲುಬಾಯಿ ರೋಗ ಬಂದಿದೆ. ಜಾನುವಾರುಗಳಿ ಕಳೆದ 15 ದಿನಗಳಿಂದ ರೋಗ ಕಾಣಿಸಿಕೊಂಡಿದ್ದು, ಈ ರೋಗ ದಿನೇದಿನೇ  ಹೆಚ್ಚಾಗುತ್ತಿದೆ.ಗೂಳಿಪುರದ ರೈತರು ತಾಲೂಕು ಪಶು ವೈದ್ಯಾಧಿಕಾರಿ ಬಳಿ ತಮ್ಮ ಜಾನುವಾರುಗಳಿಗೆ ಚಿಕಿತ್ಸೆ ನೀಡಿ ರಕ್ಷಣೆ ಮಾಡಿ ಎಂದು ಸುಮಾರು 15 ದಿನಗಳಿಂದ ಅಲೆದಾಡುತ್ತಿದ್ದರೂ ಪ್ರಯೋಜನವಾಗಿಲ್ಲ.

ತಾಲೂಕು ಪಶು ವೈದ್ಯಾಧಿಕಾರಿ ನಮ್ಮತ್ರ ಅದರ ಮೆಡಿಸನ್ ಇಲ್ಲ, ಇಂಜೆಕ್ಷನ್ ಗಳಿಲ್ಲ ಎಂದು ಬೇಜವಾಬ್ದಾರಿ ಹೇಳಿಕೆ ಮಾಡುತ್ತಿರುವುದರಿಂದ ರೈತರಲ್ಲಿ ಆತಂಕ ಉಂಟು ಮಾಡಿದೆ. ದಿನೇದಿನೇ ರೋಗ ಹರಡುವ ಆತಂಕ ಎದುರಾಗಿದೆ. ಸೂಕ್ತ ಕಾಲಕ್ಕೆ ಪಶುಗಳಿಗೆ ಕಾಲು ಬಾಯಿ ರೋಗ ಹರಡದಂತೆ ಪಶು ಸಂಗೋಪನಾ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ರೈತರು ಮಾಧ್ಯಮಗಳ ಮೊರೆ ಹೋಗಿದ್ದಾರೆ. ಆದಷ್ಟು ಬೇಗ ಸಂಬಂಧಪಟ್ಟ ಜಿಲ್ಲಾ, ತಾಲೂಕು ಪಶು ವೈದ್ಯಾಧಿಕಾರಿಗಳು  ತಮ್ಮ ಜಾನುವಾರುಗಳನ್ನು ಚಿಕಿತ್ಸೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಪಶುಸಂಗೋಪನೆ ನಂಬಿಕೊಂಡಿರುವ ರೈತರಿಗೆ ಇದು ಅವರ ಪ್ರಮುಖ ಆದಾಯದ ಮೂಲವಾಗಿದೆ. ಕಾಲುಬಾಯಿ ರೋಗ ಹೈನೋದ್ಯಮಕ್ಕೆ ಪೆಟ್ಟು ನೀಡುವ ಸಾಧ್ಯತೆ ಹೆಚ್ಚಾಗಿದೆ. ಅದಲ್ಲದೆ ಸುಮಾರು 150 ಹೆಚ್ಚು ಎಮ್ಮೆ ಮತ್ತು ಹಸು, ಕುರಿ, ಮೇಕೆಗಳಲ್ಲಿ ರೋಗ ಕಂಡು ಬಂದಿದೆ. ಇನ್ನಾದರೂ ಸಂಬಂಧಪಟ್ಟ ಪಶು ವೈದ್ಯಾಧಿಕಾರಿಗಳು ಎಚ್ಚೆತ್ರುಕೊಳ್ಳುವ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು