2:36 PM Friday26 - April 2024
ಬ್ರೇಕಿಂಗ್ ನ್ಯೂಸ್
ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ…

ಇತ್ತೀಚಿನ ಸುದ್ದಿ

ಮಾಜಿ ಸಿಎಂ ಯಡಿಯೂರಪ್ಪರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ: ಸರಕಾರದಿಂದ ಆದೇಶ

07/08/2021, 20:03

ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಿ ಸರಕಾರ ಆದೇಶ ಹೊರಡಿಸಿದೆ.

ರಾಜ್ಯಪಾಲರ ಆದೇಶದ ಮೇರೆಗೆ ಸರಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಅಧೀನ ಕಾರ್ಯದರ್ಶಿ ರಾಜೇಶ್ ಶಂಕ್ರಪ್ಪ ಎಸ್. ಅವರು ಈ ಕುರಿತು ಆದೇಶ ನೀಡಿದ್ದಾರೆ. ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧಿಕಾರವಧಿ ಇರುವ ತನಕ ನಿಕಟಪೂರ್ವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲ ಸ್ಥಾನಮಾನ ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಒಂದು ಕಡೆ ಪದೇ ಪದೇ  ಕೊರೊನಾ ಲಾಕ್ ಡೌನ್ ನಿಂದ ಜನರು ತತ್ತರಿಸಿ ಹೋಗಿದ್ದಾರೆ. ಕೆಲಸ, ವ್ಯಾಪಾರವಿಲ್ಲದೆ ಮೂರು ಹೊತ್ತಿನ ಊಟಕ್ಕೆ ಪರದಾಡುತ್ತಿದ್ದಾರೆ. ಇನ್ನೊಂದು ಕಡೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿ ಜನರು ಕಾಳಜಿ ಕೇಂದ್ರ ಸೇರಿದ್ದಾರೆ. ಮನೆ ಮಠ ಕಳೆದುಕೊಂಡವರಿಗೆ ಇನ್ನೂ ಸರಕಾರದಿಂದ ತಕ್ಕ ವ್ಯವಸ್ಥೆಯಾಗಿಲ್ಲ. ಕಳೆದ ವರ್ಷದ ಪ್ರವಾಹದಲ್ಲಿ ಸಂತ್ರಸ್ತರಾದವರಿಗೆ ಇನ್ನೂ ಪರಿಹಾರ ನೀಡಿಲ್ಲ. ಕೊರೊನಾ ಪ್ಯಾಕೇಜ್ ನಲ್ಲಿ ಘೋಷಿಸಿದ 2-3 ಸಾವಿರ ಕೂಡ ಹಲವರ ಕೈಸೇರಿಲ್ಲ. ಇವೆಲ್ಲದರ ನಡುವೆ ಹೊಸ ಸಚಿವರುಗಳು ಹಾರ-ತುರಾಯಿ ಹಾಕಿಸಿಕೊಂಡು ಸಂಭ್ರಮಿಸುತ್ತಿದ್ದಾರೆ. ಸಚಿವ ಪದವಿ ಸಿಗದವರು ಅಧಿಕಾರಕ್ಕಾಗಿ ಕೈಹಿಚುಕಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವರು ಸಿಕ್ಕಿದ ಖಾತೆ ಚೆನ್ನಾಗಿಲ್ಲ ಇನ್ನೂ ಹುಲುಸಾಗಿರುವ ಖಾತೆ ಬೇಕೆಂದು ಒದ್ದಾಡುತ್ತಿದ್ದಾರೆ. ಆದರೆ ಜನರು ಮಾತ್ರ ಮನೆ ಬಾಡಿಗೆ/ಮನೆ ಕಂತು, ಸಾಲದ ಕಂತು,ಅಂಗಡಿ ಬಾಡಿಗೆ, ಕರೆಂಟ್ ಬಿಲ್ ಕಟ್ಟಲಾಗದೆ ಒದ್ದಾಡುತ್ತಿದ್ದಾರೆ. ಈ ಜನಪ್ರತಿನಿಧಿಗಳು ಜನರ ಸೇವಕರೋ ಅಲ್ಲ, ಮಾಂಡಲಿಕರೋ ಎನ್ನುವುದು ಅರ್ಥವಾಗದೆ ಜನರು ಗೊಂದಲಕ್ಕೆ ಸಿಲುಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು