5:03 PM Saturday20 - April 2024
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಕರ್ಕಶ ಹಾರ್ನ್ ಗಳ ಕಿರಿಕಿರಿ ತಪ್ಪಿಸಲು ಪೊಲೀಸ್ ಕಾರ್ಯಾಚರಣೆ: ಹಾರ್ನ್ ಕಿತ್ತೆಸೆದು… ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ…

ಇತ್ತೀಚಿನ ಸುದ್ದಿ

ಕಂಬಳ ಕೋಣಗಳ ಯಜಮಾನ ಕೆದುಬರಿ ಗುರುವಪ್ಪ ಪೂಜಾರಿ ಅಪಘಾತದಲ್ಲಿ ನಿಧನ

08/08/2021, 17:59

Photo source : BeautyOfTulunad
ಮಂಗಳೂರು (ReporterKarnataka.com)

ಕಂಬಳ ಕ್ಷೇತ್ರದಲ್ಲಿ ಅಗ್ರಮಾನ್ಯರಾದ ಕಂಬಳದ ಕೋಣಗಳ‌ ಯಜಮಾನ ಗುರುಪುರ ಕೆದುಬರಿ ಗುರುವಪ್ಪ ಪೂಜಾರಿಯವರು ಅಪಘಾತದಲ್ಲಿ ನಿಧನರಾಗಿದ್ದಾರೆ.
ಕಂಬಳ ಕ್ಷೇತ್ರದಲ್ಲಿ ಗುರುಪುರ ಕೆದುಬರಿ ಗುರುವಪ್ಪ ಪೂಜಾರಿಯ ಹೆಸರು ಚಿರಪರಿಚಿತ. ಕಳೆದ 47 ವರ್ಷಗಳಿಂದ ಕಂಬಳ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಇವರು ಕೃಷಿಭೂಮಿ ಹೊಂದಿದ್ದು, ಬಾಲ್ಯದಿಂದಲೇ ಕಂಬಳದ ಆಸಕ್ತಿ ಹೊಂದಿದ್ದರು, ತನ್ನ ಗದ್ದೆ ಉಳಲೆಂದು ಉತ್ತಮ ಜಾತಿಯ ಕೋಣಗಳನ್ನು ತಂದು, ಕೃಷಿ ಕೆಲಸ ಮುಗಿದ ಬಳಿಕ ಕಂಬಳ ಗದ್ದೆಗಳಲ್ಲಿ ಓಡಿಸಿ ಖುಷಿ ಪಡೆಯುತ್ತಿದ್ದರು. ಮುಂದೆ, ದೂರದ ಊರುಗಳಲ್ಲಿ ನಡೆಯುವ ಕಂಬಳಗಳತ್ತ ಗಮನ ಕೇಂದ್ರೀಕರಿಸಿದ ಇವರು ಕಂಬಳಕ್ಕಾಗಿಯೇ ಹುಬ್ಬಳ್ಳಿ, ಕೋಟಾ ಮೊದಲಾದ ಕಡೆಯಿಂದ ಉತ್ತಮ ಜಾತಿಯ ಕೋಣಗಳನ್ನು ತಂದು, ಪಳಗಿಸುವುದರಲ್ಲಿ ಎತ್ತಿದ ಕೈ. ಇವರು ಹಿರಿಕಿರಿಯ ಕಂಬಳಾಸಕ್ತರ ಪ್ರೀತಿಗೆ ಪಾತ್ರರಾಗಿದ್ದಾರೆ. ಪ್ರಥಮ ಬಾರಿಗೆ ಬಾರಾಡಿ ಕಂಬಳದಲ್ಲಿ ಗುರುತಿಸಲ್ಪಟ್ಟಿದ್ದ ಇವರು ಇದಕ್ಕಿಂತ ಮುಂಚೆ ಪೂಕರೆ ಕಂಬಳಗಳಲ್ಲಿ ಪಾಲ್ಗೊಂಡಿದ್ದರು. ಆರಂಭದ ದಿನಗಳಲ್ಲಿ ಕೋಣ ಓಡಿಸಿದ್ದರು. ಬಳಿಕ ಜೋಡಿ ಕೋಣ ಸಾಕಿ, ಅವುಗಳನ್ನು ಕಂಬಳಕ್ಕೆ ಕೊಂಡೊಯ್ಯುವ ಗೀಳು ಬೆಳೆಸಿಕೊಂಡಿದ್ದರು, ದಕ್ಷಿಣ ಕನ್ನಡ ಜಿಲ್ಲೆ ಮತ್ತು ನೆರೆಯ ಉಡುಪಿ ಜಿಲ್ಲೆಯಲ್ಲಿ ನಡೆಯುವ ಎಲ್ಲ ಕಂಬಳಗಳಲ್ಲಿ ಕೋಣ ಇಳಿಸಿದ ಇವರಿಗೆ ಬಹುತೇಕ ಕಡೆಗಳಲ್ಲಿ ಮೆಡಲ್ ಸಿಕ್ಕಿದೆ. ಕದ್ರಿ, ಮೂಲ್ಕಿ, ಮಿಜಾರು, ಬಜಗೋಳಿ, ಪುತ್ತೂರು, ಕಾವಳಕಟ್ಟೆ-ಮೂಡೂರು ಪಡು, ಉಪ್ಪಿನಂಗಡಿ, ಜೆಪ್ಪು, ಕಟಪಾಡಿ, ಮೂಡಬಿದ್ರೆ, ವೇಣೂರು, ಕಾಜೂರು, ಬೋಳಿಯಾರು, ಪಡುಬಿದ್ರಿ, ಐಕಳ ಬಾವ, ತಿರುವೈಲು, ಬೊಳ್ಳೂರು (ಗುರುಪುರ), ಸುರತ್ಕಲ್, ಪಿಲಿಕುಲ, ಹೊಸಬೆಟ್ಟು ಹೀಗೆ ಎಲ್ಲೆಲ್ಲಿ ಕಂಬಳ ನಡೆಯುತ್ತಿದೆಯೋ ಅಲ್ಲಿ ಕೆದುಬರಿ ಗುರುವಪ್ಪನವರ ಕೋಣಗಳು ಹಾಜರಾಗುತ್ತಿದ್ದವು.

ಇತ್ತೀಚಿನ ಸುದ್ದಿ

ಜಾಹೀರಾತು