8:22 AM Wednesday24 - April 2024
ಬ್ರೇಕಿಂಗ್ ನ್ಯೂಸ್
ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು…

ಇತ್ತೀಚಿನ ಸುದ್ದಿ

ಮಸ್ಕಿ: ಸಂಕಲ್ಪ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ವತಿಯಿಂದ ಉಚಿತ ಕಂಪ್ಯೂಟರ್ ಶಿಕ್ಷಣ, ಟೈಲರಿಂಗ್ ತರಬೇತಿ ಉದ್ಘಾಟನೆ 

10/08/2021, 12:12

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com

ರಾಯಚೂರು ಜನ ಶಿಕ್ಷಣ ಸಂಸ್ಥೆ ಆಶ್ರಯದಲ್ಲಿ( ಮಸ್ಕಿಯ
ಸಂಕಲ್ಪ ಶಿಕ್ಷಣ ಮತ್ತು ಗ್ರಾಮಿಣಾಭಿವೃದ್ದಿ ಸಂಸ್ಥೆ) ಮಸ್ಕಿಯ ಹೈ-ಟೆಕ್ ಕಂಪ್ಯೂಟರ್ಸ್  ಶಿಕ್ಷಣ ತರಬೇತಿ ಕೇಂದ್ರ ವತಿಯಿಂದ ಉಚಿತ ಕಂಪ್ಯೂಟರ್ ಮತ್ತು ಟೈಲರಿಂಗ್ ತರಬೇತಿಯ ಉದ್ಘಾಟನೆ ನಡೆಯಿತು.

 ಗಚ್ಚಿನಮಠದಲ್ಲಿ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಆಗಮಿಸಿದ್ದರು.ಶರಣಯ್ಯಸ್ವಾಮಿ ಗುಡದೂರು ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾದ ಸದಾನಂದ ಎಂ.ಪಿ. (ನಿರ್ದೇಶಕರು ಜನ ಶಿಕ್ಷಣ ಸಂಸ್ಥಾನ ರಾಯಚೂರು), ಪೊಮಣ್ಣ (ಕಾರ್ಯಕ್ರಮದ ಅಧಿಕಾರಿಗಳು, ಜನ ಶಿಕ್ಷಣ ಸಂಸ್ಥಾನ ರಾಯಚೂರು), ಯಮನೂರ ಕನ್ನಾರಿ (ಉಪನ್ಯಾಸಕರು ಮತ್ತು ಮಸ್ಕಿಯ ಹೈಟೆಕ್ ಕಂಪ್ಯೂಟರ್ಸ್  ಶಿಕ್ಷಣ ತರಬೇತಿ ಕೇಂದ್ರ ವ್ಯವಸ್ಥಾಪಕರು ), ಅಯ್ಯಮ್ಮ (ಜನ ಶಿಕ್ಷಣ ಸಂಸ್ಥಾನ ರಾಯಚೂರು), ಉಮಾ (ಟೈಲರಿಂಗ್ ಶಿಕ್ಷಕಿಯರು) ಹಾಗೂ ಕಂಪ್ಯೂಟರ್ ಮತ್ತು ಟೈಲರಿಂಗ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಶರಣಯ್ಯಸ್ವಾಮಿ ಗುಡದೂರು ಮಾತನಾಡಿ, ಆನೇಕ ವರ್ಷಗಳಿಂದ ಸಂಕಲ್ಪ ಶಿಕ್ಷಣ ಮತ್ತು ಗ್ರಾಮಿಣಾಭಿವೃದ್ದಿ ಸಂಸ್ಥೆಯಡಿಯಲ್ಲಿ ಅನೇಕ ಸಮಾಜ ಸೇವೆ ಕಾರ್ಯಕ್ರಮಗಳನ್ನು ಮಾಡುತ್ತಿದ್ದೇವೆ. ಹಲವು ವಿದ್ಯಾರ್ಥಿಗಳಿಗೆ ಉಚಿತ ಮತ್ತು ಉದ್ಯೋಗವಕಾಶವನ್ನು ಕಲ್ಪಿಸಲಾಗಿದೆ. ಇನ್ನು ಅನೇಕ ಸೇವೆ ಮಾಡಲು ಸರಕಾರದಿಂದ ಇನ್ನು ಅನೇಕ ಸವಲತ್ತು ಸಿಗಬೇಕಿದೆ ಹಾಗೂ ವಿಧ್ಯಾರ್ಥಿಗಳು ಇಂತಹ ಉಚಿತ ಕೌಶಲ್ಯಗಳನ್ನು ಸರಿಯಾದ ರೀತಿಯಲ್ಲಿ ಉಪಯೊಸಿಕೊಳ್ಳಬೇಕೆಂದು ತಿಳಿಸಿದರು.

ವಿದ್ಯಾರ್ಥಿಗಳು ಕಂಪ್ಯೂಟರ್ ಮತ್ತು ಇತರೆ ತರಬೇತಿಯನ್ನು ಕಲಿಯಲು ಸರಕಾರದಿಂದ ವಿಶೇಷ ಅನದಾನ ನೀಡಬೇಕೆಂದು ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ ಅವರಿಗೆ ಮನವಿ ಪತ್ರ ನೀಡಿದರು. 

ನಂತರ ಮಾತನಾಡಿದ ಪ್ರತಾಪ್ ಗೌಡ ಪಾಟೀಲ್ ಅವರು, ವಿದ್ಯಾರ್ಥಿಗಳ ಮನವಿಗೆ ತಕ್ಕಂತೆ ನಾನು ಪ್ರಮಾಣಿಕವಾಗಿ ಸರಕಾರಕ್ಕೆ ಒತ್ತಡ ಹಾಕಿ ವಿಶೇಷ ಅನುದಾನ ಒದಗಿಸುತ್ತೇನೆ ತಿಳಿಸಿದರು.

ರಾಯಚೂರು ಜನಶಿಕ್ಷಣ ಸಂಸ್ಥಾನ ನಿರ್ದೇಶಕ ಸದಾನಂದ ಎಂ.ಪಿ. ಮಾತನಾಡಿ, ನಮ್ಮ ಜನ ಶಿಕ್ಷಣ ಸಂಸ್ಥಾನ ವತಿಯಿಂದ ಮಸ್ಕಿಯ ಹೈಟೆಕ್ ಕಂಪ್ಯೂಟರ್ಸ್  ಶಿಕ್ಷಣ ತರಬೇತಿ ಕೇಂದ್ರದ ಮೂಲಕ ಮಸ್ಕಿ ತಾಲೂಕಿಗೆ ನಿರಂತರವಾಗಿ ಹಲವು ಕೌಶಲ್ಯ ತರಬೇತಿ ನೀಡುತ್ತಿದ್ದೇವೆ. ಇಂತಹ ತರಬೇತಿಗಳನ್ನು ವಿದ್ಯಾರ್ಥಿಗಳು ಸದುಪಯೊಗ ಪಡೆದುಕೊಳ್ಳಬೇಕು. ನಮ್ಮ ಸಂಸ್ಥೆಯು ಯಾವಾಗಲೂ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಗುರಿ ಹೊಂದಿದ್ದು, ಇದ್ದಕ್ಕೆ ನಿಮ್ಮ ಕಲಿಕೆಯು ಬರಿ ಕಲಿಕೆಗೆ ಮಾತ್ರ ಸಿಮಿತವಾಗಬಾರದು. ಇದರಿಂದ ಉದ್ಯೋಗ ನಿರ್ಮಣವಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ವ್ಯವಸ್ಥಾಪಕರಾದ ಯಮನೂರ ಕನ್ನಾರಿ ಮತ್ತು ಶರಣಯ್ಯ ಸ್ವಾಮಿ ಗುಡದೂರು ಅವರು ಮುಖ್ಯ ಅತಿಥಿಗಳಾದ ಪ್ರತಾಪ್ ಗೌಡ ಪಾಟೀಲ್, ಅತಿಥಿಗಳಾದ ಸದಾನಂದ ಎಂ.ಪಿ.ಪೊಮಣ್ಣ, ಅಯ್ಯಮ್ಮ ಅವರಿಗೆ ಸನ್ಮಾನಿಸಿದರು. ಆಂಜನೇಯ್ಯ ಚಿಗರಿ, ಬಸಲಿಂಗಯ್ಯ ಸ್ವಾಮಿ, ಸರಸ್ವತಿ,  ಪವಿತ್ರ ಕ, ರಮ್ಯ, ರಮೇಶ ಶಿಲ್ಪ ಹಾಗೂ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು