7:48 PM Thursday25 - April 2024
ಬ್ರೇಕಿಂಗ್ ನ್ಯೂಸ್
ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ…

ಇತ್ತೀಚಿನ ಸುದ್ದಿ

ವಂಚನೆ ಆರೋಪ: ಬಾಲಿವುಡ್ ನಟಿ, ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ, ತಾಯಿ ಸುನಂದಾ ಶೆಟ್ಟಿಗೆ ಬಂಧನ ಭೀತಿ?

10/08/2021, 08:48

ಮುಂಬೈ(reporterkarnataka.com): ಬಾಲಿವುಡ್ ಖ್ಯಾತ ನಟಿ, ಕರಾವಳಿ ಮೂಲದ ಬೆಡಗಿ ಶಿಲ್ಪಾ ಶೆಟ್ಟಿ ಹಾಗೂ ಅವರ ತಾಯಿ ಸುನಂದಾ ಶೆಟ್ಟಿ ಅವರಿಗೆ ಬಂಧನ ಭೀತಿ ಎದುರಾಗಿದೆ. ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಆರೋಪದಲ್ಲಿ ತಾಯಿ- ಮಗಳನ್ನು ಬಂಧಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಶಿಲ್ಪಾ ಶೆಟ್ಟಿ ಅವರು ನಡೆಸುತ್ತಿರುವ ಇವೋಸಿಸ್​ ವೆಲ್​ನೆಸ್​ ಫಿಟ್ನೆಸ್​ ಕೇಂದ್ರವೇ ಅವರಿಗೆ ಉರುಳಾಗಿ ಪರಿಣಮಿಸಿದೆ. ಫಿಟ್ನೆಸ್ ಕೇಂದ್ರಕ್ಕೆ ಶಿಲ್ಪಾ ಶೆಟ್ಟಿ ಮುಖ್ಯಸ್ಥೆ. ತಾಯಿ ಸುನಂದಾ ಅವರು ನಿರ್ದೇಶಕಿ ಆಗಿದ್ದಾರೆ. ಅದರ ಶಾಖೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ತೆರೆಯುವುದಾಗಿ ಹೇಳಿ ಇಬ್ಬರು ವ್ಯಕ್ತಿಗಳಿಂದ ಕೋಟ್ಯಂತರ ರೂಪಾಯಿ ಪಡೆದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಕುರಿತು ಜೋಸ್ನಾ ಚೌಹಾಣ್​ ಮತ್ತು ರೋಹಿತ್​ ವೀರ್​ ಸಿಂಗ್​ ಎಂಬುವವರು ಲಖನೌನ ಹಜರತ್​ಗಂಜ್​ ಮತ್ತು ವಿಭೂತಿ ಖಂಡ್​​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಪ್ರಕರಣದ ವಿಚಾರಣೆ ನಡೆಸಲು ಲಖನೌ ಪೊಲೀಸರು ಮುಂಬೈಗೆ ಆಗಮಿಸಿದ್ದಾರೆ ಎಂಬ ಮಾಹಿತಿ ಇದೆ. ಆರೋಪಕ್ಕೆ ಸಂಬಂಧಿಸಿದ್ದಂತೆ ಮೇಲ್ನೋಟಕ್ಕೆ ಸಾಕ್ಷ್ಯ ಗಳು ದೊರೆತರೆ ಅವರನ್ನು ಪೊಲೀಸರು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ನೀಲಿ ಚಿತ್ರ ತಯಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರು ಈಗಾಗಲೇ ಜೈಲಿನಲ್ಲಿದ್ದಾರೆ. 

ಜುಲೈ 19 ರಂದು ಮುಂಬೈ ಪೊಲೀಸರು ಅವರನ್ನು ಬಂಧಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು