2:10 PM Thursday18 - April 2024
ಬ್ರೇಕಿಂಗ್ ನ್ಯೂಸ್
ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ… ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ…

ಇತ್ತೀಚಿನ ಸುದ್ದಿ

ಮತ್ತೊಮ್ಮೆ ಸೆಂಟ್ ಫ್ಯಾಕ್ಟರಿಯಲ್ಲಿ ಬೆಂಕಿ : ಹೊಗೆಮಯ ವಾತಾವರಣಕ್ಕೆ ಬೆಚ್ಚಿದ ಸ್ಥಳೀಯರು

12/08/2021, 20:44

ಬಜಪೆ(reporterkarnataka.com)
ಮಂಗಳೂರು ನಗರದ ಹೊರವಲಯದ ಸುರತ್ಕಲ್ ಸಮೀಪದ ಎಸ್‌ಇಝಡ್‌ನ ಕ್ಯಾಟಸಿಂತ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ಗುರುವಾರ ಮತ್ತೊಮ್ಮೆ ಬೆಂಕಿ ಅವಘಡ ಸಂಭವಿಸಿದೆ


ಭಾರೀ ಪ್ರಮಾಣದ ಹೊಗೆ ಹರಡಿಕೊಂಡು ಸ್ಥಳೀಯರು ಭಯಭೀತರಾದ ಘಟನೆ ನೆಲ್ಲಿದಡಿಯಲ್ಲಿ ಇರುವ ಈ ಫ್ಯಾಕ್ಟರಿಯಲ್ಲಿ ನಡೆದಿದೆ.

ಕಳೆದ ಎಪ್ರಿಲ್‌ಲಲ್ಲಿ ಕೂಡ ಇದೇ ಕಂಪೆನಿಯಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಈ ಬಗ್ಗೆ ದುರಸ್ತಿ ಕಾರ್ಯ ನಡೆಯುತ್ತಿತ್ತು ಎಂದು ಹೇಳಲಾಗಿತ್ತು. ಆದರೆ ಮತ್ತೊಮ್ಮೆ ಈ ರೀತಿಯಾಗಿ ಬೆಂಕಿ ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.

ಘಟನೆಯ ಬಗ್ಗೆ ಸಂಸ್ಥೆಯವರು ಖಚಿತ ಮಾಹಿತಿ ನೀಡಿಲ್ಲ. ಗುರುವಾರವು ಈ ಘಟಕದಲ್ಲಿ ಉದ್ಯೋಗಿಗಳ ಸಂಖ್ಯೆ ಕಡಿಮೆ ಇದ್ದುದರಿಂದ ಹೆಚ್ಚಿನ ಅಪಾಯ ಸಂಭವಿಸಿಲ್ಲ.

ಮಂಗಳೂರು ಕದ್ರಿ ಅಗ್ನಿಶಾಮಕ ದಳ, ಎಚ್‌ಪಿಸಿಎಲ್, ಎನ್‌ಎಂಪಿಟಿ ಸಿಬ್ಬಂದಿ ವರ್ಗ ಬೆಂಕಿ ನಂದಿಸಿದರು.
ಘಟನಾ ಸ್ಥಳಕ್ಕೆ ಬಜೈ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು