7:38 PM Friday19 - April 2024
ಬ್ರೇಕಿಂಗ್ ನ್ಯೂಸ್
ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿಗೆ ಪತ್ರಕರ್ತ ಬಿ.ರವೀಂದ್ರ ಶೆಟ್ಟಿ ಅವರ ‘ನಮ್ಮ ಮಂಗಳೂರು’ ಪುಸ್ತಕ ಹಸ್ತಾಂತರ; ಮೇಯರ್ ಸಮರ್ಪಣೆ

12/08/2021, 13:46

ಮಂಗಳೂರು(reporterkarnataka.com):

ಪತ್ರಕರ್ತ ಬಿ. ರವೀಂದ್ರ ಶೆಟ್ಟಿ ರಚಿಸಿದ ‘ನಮ್ಮ ಮಂಗಳೂರು’ ಪುಸ್ತಕವನ್ನು  ಮಂಗಳೂರು ಮೇಯರ್  ಪ್ರೇಮಾನಂದ ಶೆಟ್ಟಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ನಗರದಲ್ಲಿ ಹಸ್ತಾಂತರಿಸಿದರು.

ಈ ಪುಸ್ತಕ ಮಂಗಳೂರಿನ ಸಮಗ್ರ ಮಾಹಿತಿ ಒಳಗೊಂಡಿದೆ. ಪುಸ್ತಕದ ಬಗ್ಗೆ ಸಿಎಂ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಪುಸ್ತಕ ದಲ್ಲಿ ಏನೇನಿದೆ ?

* ಹಿರಿಯ ಪತ್ರಕರ್ತ ಬಿ. ರವೀಂದ್ರ ಶೆಟ್ಟಿ ಬರೆದಿರುವ ‘ನಮ್ಮ ಮಂಗಳೂರು’ ಅತ್ಯಪೂರ್ವ ಮಾಹಿತಿಗಳಿರುವ ಅಪರೂಪದ ಕೃತಿ. 

*  ಮಂಗಳೂರು ಸುತ್ತಮುತ್ತಲಿನ ಪ್ರವಾಸಿ ತಾಣಗಳ ಪೂರ್ತಿ ಚಿತ್ರಣ.

* ದೇವಸ್ಥಾನ, ದೈವಸ್ಥಾನ, ಮಸೀದಿ, ಚರ್ಚ್ ಹೀಗೆ ಎಲ್ಲಾ ಶ್ರದ್ಧಾ ಕೇಂದ್ರಗಳ ವಿವರಗಳು.

* ಶೈಕ್ಷಣಿಕ ಹಬ್ ಎಂಬ ಹೆಸರುವಾಸಿಯಾಗಿರುವ ಮಂಗಳೂರಿನಲ್ಲಿ ಎಷ್ಟು ಶಾಲೆ, ಕಾಲೇಜು, ವೈದ್ಯಕೀಯ, ಎಂಜೀನಿಯರಿಂಗ್, ವೃತ್ತಿಪರ ಕಾಲೇಜುಗಳಿವೆ ಎಂಬುವುದರ ಡಿಟೈಲ್ಸ್ ನಮ್ಮ ಮಂಗಳೂರು ಗ್ರಂಥದಲ್ಲಿದೆ. 

* ಮಂಗಳೂರು ಸುತ್ತಮುತ್ತ ಎಷ್ಟು ಆಸ್ಪತ್ರೆಗಳಿವೆ, ಹೊಟೇಲ್‌ಗಳಿವೆ ಎಂಬುವುದರ ಚಿತ್ರಣ.

*ಮಂಗಳೂರು ಸುತ್ತಮುತ್ತ ಇರುವ ಕೆರೆ, ಮಾರುಕಟ್ಟೆ, ಮೈದಾನ, ಪಾರ್ಕ್, ಕ್ರೀಡಾಂಗಣ, ಸ್ಮಶಾನಗಳ ಮಾಹಿತಿಗಳು

* ನಮ್ಮ ಸಂಸದರು, ಶಾಸಕರು, ಮೇಯರ್, ಉಪಮೇಯರ್, ಕಾರ್ಪೊರೇಟರ್‌ಗಳ ಸಚಿತ್ರ ವಿವರಗಳು.

*ಕಾರ್ಪೊರೇಶನ್‌ನಿಂದ ನಾಗರಿಕರಿಗೆ ಲಭಿಸುವ ಸೌಲಭ್ಯಗಳೇನು, ಅದನ್ನು ಪಡೆದುಕೊಳ್ಳಲು ಏನೇನು ಮಾಡಬೇಕು ಮಾರ್ಗದರ್ಶಿ ಮಾಹಿತಿ.

*ಮಂಗಳೂರಿನ ಅಪರೂಪದ ಫೋಟೋಗಳ ಸಂಗ್ರಹ.

*ಪೊಲೀಸ್ ಠಾಣೆ, ಮಾಧ್ಯಮ ಸಂಸ್ಥೆಗಳುಗಳ ದೂರವಾಣಿ ಸಂಖ್ಯೆಗಳು.

*ಯಾವ ನಂಬರ್‌ನ ಬಸ್ ಎಲ್ಲಿ ಸಂಚರಿಸುತ್ತೆ ಎಂಬುದರ ಮಾಹಿತಿಗಳು.

ಸಂಗ್ರಹಯೋಗ್ಯ ಅಪರೂಪದ ಕೃತಿ ನಮ್ಮ ಮಂಗಳೂರು.
ನಮ್ಮ ಮಂಗಳೂರು ಕೃತಿಗಾಗಿ ಸಂಪರ್ಕಿಸಿರಿ :  9343381791/ 9731976777

ಇತ್ತೀಚಿನ ಸುದ್ದಿ

ಜಾಹೀರಾತು