9:38 AM Wednesday24 - April 2024
ಬ್ರೇಕಿಂಗ್ ನ್ಯೂಸ್
ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು…

ಇತ್ತೀಚಿನ ಸುದ್ದಿ

ಉಡುಪಿಯ ಉಸ್ತುವಾರಿಯಾದದ್ದು ನನ್ನ ಸೌಭಾಗ್ಯ; ಶ್ರೀಕೃಷ್ಣನ ಆಶೀರ್ವಾದಿಂದ ಮುಖ್ಯಮಂತ್ರಿಯಾಗಿದ್ದೇನೆ: ಬೊಮ್ಮಾಯಿ

12/08/2021, 19:46

ಉಡುಪಿ(reporterkarnataka.com): ಎರಡು ವರ್ಷಗಳ ಕಾಲ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಕೆಲಸ ಮಾಡಿದ್ದು ನನ್ನ ಸೌಭಾಗ್ಯ. ನಾನು ಗ್ರಹಿಸದ, ಎಣಿಸದ, ನಾನು ಬಯಸದ ಮುಖ್ಯಮಂತ್ರಿ ಹುದ್ದೆ ಸಿಕ್ಕಿದೆ. ಎಲ್ಲವೂ ದೈವೇಚ್ಛೆ ಹಾಗೂ ಶ್ರೀಕೃಷ್ಣ ಪರಮಾತ್ಮನ ಆಶೀರ್ವಾದ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ 250 ಹಾಸಿಗೆಗಳ ನೂತನ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಆರೋಗ್ಯ ಚಿಕಿತ್ಸೆಗಾಗಿ ಉಡುಪಿ ಜಿಲ್ಲೆಗೆ ಉತ್ತರ ಕನ್ನಡ ಕಡೆಯಿಂದ ತುಂಬಾ ಜನರು ಬರುತ್ತಿದ್ದಾರೆ. ಸರಕಾರದ ಕಡೆಯಿಂದ ಆಸ್ಪತ್ರೆಯ ಅವಶ್ಯಕತೆ ಇದೆ. ಉಡುಪಿ ಜಿಲ್ಲೆಯಲ್ಲಿಯೂ ಜನಸಂಖ್ಯೆ ಹೆಚ್ಚಾಗುತ್ತಿದೆ. ಜನರ ಆಶೋತ್ತರಗಳು ಕೂಡ ಹೆಚ್ಚುತ್ತಿದೆ. ಜನರ ಆಶೋತ್ತರ ಈಡೇರಿಸುವುದು ಸರಕಾರದ ಆದ್ಯ ಕರ್ತವ್ಯವಾಗಿದೆ. ಜನರ ಪ್ರಾಣ ರಕ್ಷಣೆ ಸರಕಾರದ ಆದ್ಯ ಕರ್ತವ್ಯ ಎಂದು ಅವರು ನುಡಿದರು.

ಸಚಿವರಾದ ಡಾ.ಕೆ. ಸುಧಾಕರ್, ಸುನಿಲ್ ಕುಮಾರ್, ಶಾಸಕ ಕೆ. ರಘುಪತಿಭಟ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು