8:27 AM Friday19 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ…

ಇತ್ತೀಚಿನ ಸುದ್ದಿ

ಬಟ್ಟೆ, ರೆಡಿಮೇಡ್, ಚಪ್ಪಲಿಯನ್ನು ಅಗತ್ಯ ವಸ್ತುಗಳ ಸಾಲಿಗೆ ಸೇರಿಸಿ: ರಾಜ್ಯ ಸರಕಾರಕ್ಕೆ ವ್ಯಾಪಾರಿಗಳ ಮನವಿ

13/08/2021, 17:52

ಮಂಗಳೂರು(reporterkarnataka.com):ಇತರ ಅಗತ್ಯ ವಸ್ತುಗಳಂತೆ ಬಟ್ಟೆ , ರೆಡಿಮೇಡ್ ಚಪ್ಪಲಿಗಳನ್ನು ಪರಿಗಣಿಸಬೇಕೆಂದು ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗಿದೆ ಎಂದು ವ್ಯಾಪಾರಿಗಳ ಸಂಘಟನೆಯ ನಿರ್ದೇಶಕಿ ಸುಲೋಚನಾ ಭಟ್ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್ ಡೌನ್  ಅವಧಿಯಲ್ಲಿ ಬಟ್ಟೆ, ರೆಡಿಮೇಡ್ , ಚಪ್ಪಲಿ ಅಂಗಡಿದಾರರು ಕೋವಿದ್ ನಿಯಮ ಪ್ರಕಾರ ವ್ಯಾಪಾರ ಮಾಡಲು ಸರಕಾರ ಅವಕಾಶ ನೀಡದೆ ವ್ಯಾಪಾರಸ್ಥರು ಮಾತ್ರವಲ್ಲದೆ ಅವರ ಅಧೀನದಲ್ಲಿ ಕೆಲಸ ನಿರ್ವಹಿಸುವ ಸಾವಿರಾರು ಕುಟುಂಬಗಳು ನಿರ್ಗತಿಕರಾಗಿದ್ದಾರೆ ಎಂದರು.

ಸಂಘದ ಅಧ್ಯಕ್ಷ ಸಂತೋಷ್ ಕಾಮತ್ ಮಾತನಾಡಿ, ಸರಕಾರವು ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಅಥವಾ ಪರ್ಯಾಯ ದಿನಗಳಲ್ಲಿ ವ್ಯಾಪಾರಕ್ಕೆ ಅವಕಾಶ ಒದಗಿಸಬೇಕು. ಇಲ್ಲವೇ ಮೆಡಿಕಲ್, ಹಾಲು, ಆಸ್ಪತ್ರೆ, ಪತ್ರಿಕೆ ಇವುಗಳಿಗೆ ಮಾತ್ರ ಅನುಮತಿಸಿ, ಉಳಿದ ಎಲ್ಲಾ ವ್ಯಾಪಾರ ಗಳನ್ನು ಮಾಡದಂತೆ ಸಂಪೂರ್ಣ ಎರಡು ವಾರಗಳ ಕಾಲ ಲಾಕ್ ಡೌನ್ ಹೇರಿ ಕೊವಿಡ್  ಸಂಪೂರ್ಣ ನಿಯಂತ್ರಣಕ್ಕೆ ಬರುವಂತೆ ಸರ್ಕಾರ ಪ್ರಯತ್ನಿಸಬೇಕು ಎಂದು ಒತ್ತಾಯಿಸಿದರು.


ಸಂತೋಷ್  ಕಾಮತ್, ಎಂ. ಪಿ. ದಿನೇಶ್, ಪ್ರಸಾದ್  ನೈರ್,  ಸಂತೋಷ್ ಶೆಟ್ಟಿ, ಜನಾಬ್ ಸಯೀದ್,  ಇಸ್ಮಾಯಿಲ್, ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು