7:40 PM Friday19 - April 2024
ಬ್ರೇಕಿಂಗ್ ನ್ಯೂಸ್
ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ…

ಇತ್ತೀಚಿನ ಸುದ್ದಿ

ಯಕ್ಷಗಾನ ಸವ್ಯಸಾಚಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜರಿಗೆ ಶಿಷ್ಯರಿಂದ ಭಾಗವತಿಗೆಯ ನುಡಿನಮನ: ಕಣ್ಣಂಚಿನಲ್ಲಿ ಒಸರಿದ ಆಶ್ರುಧಾರೆ

15/08/2021, 19:54

ಮಂಗಳೂರು (Reporterkarnataka.com) ಅಭಿನವ ವಾಲ್ಮೀಕಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ಅವರಿಗೆ ಅಭಿಮಾನಿಗಳು ಮತ್ತು ಮೂವರು ಭಾಗವತ ಶಿಷ್ಯರಿಂದ ಭಾಗವತಿಗೆ ಮೂಲಕ ನುಡಿ ನಮನ ಸಲ್ಲಿಸಲಾಯಿತು.

ಧೀರಜ್ ರೈ ಸಂಪಾಜೆ, ರಾಜಾರಾಮ್ ಹೊಳ್ಳ ಕೈರಂಗಳ ಹಾಗೂ ದೇವಿ ಪ್ರಸಾದ್ ಆಳ್ವ ತಲಪಾಡಿ ಭಾಗವತಿಕೆಯ ಮೂಲಕ ನುಡಿನಮನ ಸಲ್ಲಿಸಿದಾಗ ಅಭಿಮಾನಿಗಳ ಕಣ್ಣಂಚಲ್ಲಿ ಅಶ್ರುಧಾರೆ ಧಾರಾಕಾರವಾಗಿ ಇಳಿತು. ಇನ್ನೊಂದು ಕಡೆಯಿಂದ ಪೂಂಜ ಅವರ ಬಂಧು ಮಿತ್ರರ ಆಕ್ರಂಧನ ಕೇಳಿ ಬರುತ್ತಿತ್ತು.

ಅಭಿನವ ವಾಲ್ಮೀಕಿ, ಯಕ್ಷಗಾನದ ಸವ್ಯಸಾಚಿ ಎಂದೇ ಪ್ರಖ್ಯಾತರಾದ ಪ್ರಸಂಗಕರ್ತ, ಭಾಗವತ ಬೊಟ್ಟಿಕೆರೆ ಪುರುಷೋತ್ತಮ ಪೂಂಜರು ಶನಿವಾರ ತಡರಾತ್ರಿ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಪೂಂಜರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.

ಪದವೀಧರರಾಗಿದ್ದ ಅವರು, ನಾಲ್ಕೂವರೆ ದಶಕದಿಂದ ಯಕ್ಷಗಾನದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಕಟೀಲು ಮೇಳದ ಪ್ರಧಾನ ಭಾಗವತರಾಗಿದ್ದ ಅವರಿಗೆ ಈ ಬಾರಿಯ ತಿರುಗಾಟದ ಆರಂಭದಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಖ್ಯಾತ ಯಕ್ಷಗಾನ ಪ್ರಸಂಗ ‘ಮಾನಿಷಾದ’ದ ಪ್ರಸಂಗಕರ್ತರು.

ಇತ್ತೀಚಿನ ಸುದ್ದಿ

ಜಾಹೀರಾತು