2:16 PM Wednesday24 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ…

ಇತ್ತೀಚಿನ ಸುದ್ದಿ

ನಾನು ಯಾವುದೇ ತಪ್ಪು ಮಾಡಿಲ್ಲ, ದೇವರ‌ ದಯೆ ನನ್ನ ಮೇಲಿದೆ: ಸಚಿವೆ ಶಶಿಕಲಾ ಜೊಲ್ಲೆ 

16/08/2021, 17:27

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ನನ್ನ ಮೇಲಿನ ಆರೋಪ ಬಗ್ಗೆ ನಾನು ಗಮನ ಕೊಟ್ಟಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ, ತಪ್ಪು ಮಾಡುವ ಪರಿಸ್ಥಿತಿಯೂ ನನಗಿಲ್ಲ. ದೇವರ‌ ದಯೆ ನನ್ನ ಮೇಲಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಬುದ್ಧಿಮಾಂದ್ಯ ನನ್ನ ಮಗುವಿಗಾಗಿ ಈ ಸಮಾಜ ಸೇವೆ ಕ್ಷೇತ್ರಕ್ಕೆ ಬಂದಿದ್ದೇನೆ. ಆ ಮಗುವಿನ ನೋವನ್ನ ತಾಯಿಯಾಗಿ ಅನುಭವಿಸಿದ್ದೇನೆ. ಯಾರೋ ಏನೋ ಅಪಾದನೆ ಮಾಡಿದರೆ ಅದನ್ನ ಬೇಜಾರು ಮಾಡಿಕೊಳ್ಳದೇ ಸವಾಲಾಗಿ ಸ್ವೀಕರಿಸಿದ್ದೇನೆ ಎಂದು ಅವರು ನುಡಿದರು.

ಸಚಿವ ಸ್ಥಾನದಿಂದ ಕೆಳಗಿಳಿಸುವ ನಿಟ್ಟಿನಲ್ಲಿ ನನ್ನ ಮೇಲೆ ಆಪಾದನೆ ಮಾಡಿರಬಹುದು. ಯಾರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಎನ್ನುವ ಕುರಿತು ಸಾಕ್ಷಾಧಾರ ಇಲ್ಲ. ಹಾಗಾಗಿ ಯಾರ ಮೇಲೂ ಆರೋಪ ಮಾಡುವುದಿಲ್ಲ. ಯಾರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೋ ಅವರು ಅನುಭವಿಸುತ್ತಾರೆ. ಪ್ರಾಮಾಣಿಕವಾಗಿ ಕೆಲಸ ಮಾಡುವವರಿಗೆ ಏನಾದ್ರೂ ಷಡ್ಯಂತ್ರ ಮಾಡಿದ್ದರೆ ದೇವರು ನೋಡಿಕೊಳ್ಳುತ್ತಾನೆ. ಬಡವರ ಕಣ್ಣೀರು ಒರೆಸಿದ ಆಶೀರ್ವಾದ ನನ್ನ ಜತೆ ಇದೆ.

ಇದೇ ಕಾರಣಕ್ಕಾಗಿ ಎರಡನೇ ಬಾರಿ ಸಚಿವೆಯಾಗಿ ಅಧಿಕಾರವಹಿಸಿಕೊಂಡಿದ್ದೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು