4:02 PM Saturday20 - April 2024
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಕರ್ಕಶ ಹಾರ್ನ್ ಗಳ ಕಿರಿಕಿರಿ ತಪ್ಪಿಸಲು ಪೊಲೀಸ್ ಕಾರ್ಯಾಚರಣೆ: ಹಾರ್ನ್ ಕಿತ್ತೆಸೆದು… ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ…

ಇತ್ತೀಚಿನ ಸುದ್ದಿ

ಮೂಡುಬಿದಿರೆಯಲ್ಲೊಂದು ಹೃದಯ ವಿದ್ರಾವಕ ಘಟನೆ : ಸಂಶಯಪಟ್ಟು ಪತ್ನಿಯನ್ನೇ ಹೊಡೆದು ಕೊಂದ ಪತಿರಾಯ

18/08/2021, 14:34

ಮೂಡಬಿದ್ರಿ (Reporterkarnataka.com)

ಮೂಡುಬಿದಿರೆ ತಾಲೂಕಿನ ದರೆಗುಡ್ಡೆ ಗ್ರಾ.ಪಂ. ವ್ಯಾಪ್ತಿಯ ಮಠ ಎಂಬಲ್ಲಿ ಪತ್ನಿಯ ಮೇಲೆ ಸಂಶಯಪಟ್ಟು ಕೊಲೆ ಮಾಡಿದ ಪ್ರಕರಣ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಮಂಗಳವಾರ ಸಂಜೆ ಪತಿ ಪತ್ನಿಯರ ನಡುವೆ ಜಗಳ ನಡೆದಿದ್ದು, ದಿನರಾಜ್ ಹೆಂಡತಿಯ ತಲೆಗೆ ಬಲಾಯಿ ಎನ್ನುವ ಸಲಾಕೆ ಹಿಡಿಯಲ್ಲಿ ಹೊಡೆದಿದ್ದಾನೆ. ತಲೆ, ಮುಖ, ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದು ರಕ್ತ ಸೋರತೊಡಗಿತ್ತು. ಸುನೀತಾ ನೆಲಕ್ಕೆ ಉರುಳಿದ ಬಳಿಕ ಆಕೆಯ ತಾಯಿ ಬೊಬ್ಬೆ ಹೊಡೆದಿದ್ದರಿಂದ ಪತ್ನಿಯನ್ನು ದಿನರಾಜನೇ ಬೆಳುವಾಯಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲು ತಂದಿದ್ದಾನೆ.

ಆದರೆ, ಆಸ್ಪತ್ರೆಯಲ್ಲಿ ಪತ್ನಿ ಮಹಡಿ ಮೇಲಿಂದ ಬಿದ್ದು ಗಾಯವಾಗಿದ್ದೆಂದು ಸುಳ್ಳು ಹೇಳಿದ್ದಾನೆ. ಆದರೆ, ವೈದ್ಯರು ನೋಡಿ, ಈಕೆಯ ಸ್ಥಿತಿ ಗಂಭೀರ ಆಗಿರುವುದರಿಂದ ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಸೂಚಿಸಿದ್ದಾರೆ. ಹಾಗೂ ಸಂಶಯಗೊಂಡು ಮೂಡುಬಿದ್ರೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಭಾರೀ ರಕ್ತಸ್ರಾವದ ಜೊತೆಗೆ ಮುಖ, ಕುತ್ತಿಗೆಯ ಭಾಗಕ್ಕೆ ಕಡಿದ ರೀತಿಯ ಗಾಯ ಆಗಿದ್ದರಿಂದ ವೈದ್ಯರು ಸಂಶಯಪಟ್ಟು ಪೊಲೀಸರಿಗೆ ಮಾಹಿತಿ ನೀಡಿದ್ದರು.

ನಿನ್ನೆ ರಾತ್ರಿ ಮಂಗಳೂರಿನ ಎಜೆ ಆಸ್ಪತ್ರೆಗೆ ತರುವಷ್ಟರಲ್ಲಿ ಭಾರೀ ರಕ್ತಸ್ರಾವದಿಂದಾಗಿ ಅಲ್ಲಿಗೆ ತಲುಪುವ ಮೊದಲೇ ಮೃತಪಟ್ಟಿದ್ದಾಳೆ. ಇಂದು ಬೆಳಗ್ಗೆ ಮೂಡಬಿದಿರೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು ವಿಚಾರಣೆ ವೇಳೆ ತಾನೇ ಹೊಡೆದಿದ್ದನ್ನು ಒಪ್ಪಿಕೊಂಡಿದ್ದಾನೆ.

ಬಡ ಕುಟುಂಬದ ಸುನೀತಾ ತನ್ನ ತಾಯಿಯೊಂದಿಗೆ ಬಾಡಿಗೆ ಮನೆಯಲ್ಲಿ ಜೀವನ ನಡೆಸುತ್ತಿದ್ದರು. ಒಂದೂವರೆ ವರ್ಷಗಳ ಹಿಂದೆ ಸಂಬಂಧಿಕರು ಸೇರಿ ಮದುವೆ ಮಾಡಿಸಿದ್ದರು. ತಾಯಿ ಒಬ್ಬಳೆ ಮನೆಯಲ್ಲಿ ಇದ್ದುದರಿಂದ ಸುನೀತಾ ಅಲ್ಲಿಯೇ ಉಳಿದುಕೊಂಡಿದ್ದು, ದಿನ್‌ರಾಜ್ ಕೂಡಾ ಅಲ್ಲಿಯೇ ಇದ್ದು ಮೂಡುಬಿದಿರೆಯಲ್ಲಿ ಬ್ಯಾಟರಿ ಅಂಗಡಿಗೆ ಕೆಲಸಕ್ಕೆ ಬರುತ್ತಿದ್ದಾನೆನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು