6:26 PM Saturday20 - April 2024
ಬ್ರೇಕಿಂಗ್ ನ್ಯೂಸ್
ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ: ಪಕ್ಷದ ಧ್ವಜ ನೀಡಿ… ಮಂಗಳೂರಿನಲ್ಲಿ ಕರ್ಕಶ ಹಾರ್ನ್ ಗಳ ಕಿರಿಕಿರಿ ತಪ್ಪಿಸಲು ಪೊಲೀಸ್ ಕಾರ್ಯಾಚರಣೆ: ಹಾರ್ನ್ ಕಿತ್ತೆಸೆದು… ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್…

ಇತ್ತೀಚಿನ ಸುದ್ದಿ

ಲವ್ ಕಹಾನಿ: ಮಹಾರಾಷ್ಟ್ರದಲ್ಲಿ ತಂದೆಯಿಂದಲೇ  ದೂಧ್ ಗಂಗಾ ನದಿಗೆ ತಳ್ಳಲ್ಪಟ್ಟ ಟೀನೇಜ್ ಪುತ್ರಿ: ಶವ ಕರ್ನಾಟಕದಲ್ಲಿ ಪತ್ತೆ !

19/08/2021, 15:39

ಕೊಲ್ಹಾಪುರ(reporterkarnataka.com): ನೆರೆಯ ಮಹಾರಾಷ್ಟ್ರದಲ್ಲಿ ಜೀವಂತವಾಗಿ ನದಿಗೆ ತಳ್ಳಲ್ಪಟ್ಟ ಆ ಅಪ್ರಾಪ್ತ ವಯಸ್ಸಿನ ಹೆಣ್ಣು ಮಗಳ ಮೃತದೇಹ ತೇಲಿಕೊಂಡು ಕರ್ನಾಟಕಕ್ಕೆ ಬಂದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಶವ ಪತ್ತೆಯಾಗಿದೆ. ಆಕೆಯನ್ನು ನದಿಗೆ ತಳ್ಳಿದ್ದು ಬೇರೆ ಯಾರೂ ಅಲ್ಲ, ಬದಲಿಗೆ ಜನ್ಮಕೊಟ್ಟ ತಂದೆಯೇ ಈ ಕೃತ್ಯ ಎಸಗಿದ್ದ.

ಅದೊಂದು ಟೀನೇಜ್ ಲವ್ ಕಹಾನಿಗೆ ಸಂಬಂಧಿಸಿದ ಮರ್ಯಾದಾ ಹತ್ಯೆಯಾಗಿದೆ.

ಮಹಾರಾಷ್ಟ್ರ ಕೊಲ್ಹಾಪುರದ ಶಿರೋಲ್ ತಾಲೂಕಿನ ದತ್ತವಾಡ ನಿವಾಸಿಯಾದ ದಶರಥ್ ಕಾಟ್ಕರ್ ಎಂಬಾತ ತನ್ನ ಪುತ್ರಿ 17ರ ಹರೆಯದ ಸಾಕ್ಷಿ ಕಾಣೆಯಾಗಿದ್ದಾಳೆ ಎಂದು ಆಗಸ್ಟ್ 14ರಂದು ಕುರುಂದ್ವಾಡ್ ಪೊಲೀಸರಿಗೆ ದೂರು ನೀಡಿದ್ದ.

ಪೊಲೀಸರು ತನಿಖೆ ನಡೆಸಿದಾಗ ಯಾರೂ ಆಕೆಯನ್ನು ಅಪಹರಣ ಮಾಡಿದ ಬಗ್ಗೆ ಸುಳಿವು ದೊರಕಲಿಲ್ಲ. ಇದರಿಂದ ಸಂಶಯಗೊಂಡ ಪೊಲೀಸರು ತಂದೆಯನ್ನೇ ವಿಚಾರಣೆಗೆ ಗುರಿಪಡಿಸಿದರು. ಆ ವೇಳೆಗೆ ತಂದೆಯೇ ಮಗಳನ್ನು ನದಿಗೆ ತಳ್ಳಿ ಕೊಂದಿರುವ ವಿಚಾರ ಬೆಳಕಿಗೆ ಬಂತು.

ಮಗಳ ಪ್ರೇಮ ಪ್ರಕರಣದಿಂದ ಸಿಟ್ಟುಗೊಂಡು ತಾನೇ ಆಕೆಯನ್ನು ದೂಧಗಂಗಾ ನದಿಯ ದನ್ವಾಡ್ ಸೇತುವೆಯಿಂದ ತಳ್ಳಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಸಾಕ್ಷಿಯ ಶವ ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ಪತ್ತೆಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು