2:31 PM Tuesday16 - April 2024
ಬ್ರೇಕಿಂಗ್ ನ್ಯೂಸ್
ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ… ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ… ವಿಜಯ ಬ್ಯಾಂಕ್, ಕಾರ್ಪೊರೇಶನ್ ಬ್ಯಾಂಕ್‌ ಎಲ್ಲಿಗೆ ಹೋಯಿತು?; ಬಿಜೆಪಿ ನಾಯಕರು ಉತ್ತರಿಸಲಿ: ಮಾಜಿ… ಪ್ರಧಾನಿ ಮೋದಿ ರೋಡ್ ಶೋ: ಏರ್ ಪೋರ್ಟ್ ನಿಂದ ಲೇಡಿಹಿಲ್ ವರೆಗೆ ಎಸ್… ದ.ಕ.ಲೋಕಸಭೆ: ತಗ್ಗಿತೇ ಬಿಜೆಪಿ ಪ್ರಚಾರ?: ದಿನ ಕಳೆದಂತೆ ಸ್ಟ್ರಾಂಗ್ ಆಗುತ್ತಿದೆಯೇ ಪದ್ಮರಾಜ್ ಟೀಮ್… ಪೋಷಕರ ನಿರ್ಲಕ್ಷ್ಯ: ಏರ್ ಗನ್ ನಲ್ಲಿ ಶೂಟ್ ಮಾಡಿಕೊಂಡು 7 ವರ್ಷದ ಬಾಲಕ… ಬಾಳೆಹೊನ್ನೂರು ಭಾಗದಲ್ಲಿ ಭಾರೀ ವರ್ಷಧಾರೆ: ಕಾದ ನೆಲಕ್ಕೆ ತಂಪೆರಚಿದ ಮಳೆ; ಕೃಷಿಕರ ಮೊಗದಲ್ಲಿ… ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ…

ಇತ್ತೀಚಿನ ಸುದ್ದಿ

ಮಂಡ್ಯದಲ್ಲಿ ಮನೆ ಮನೆಗೆ ಕುಡಿಯುವ ನೀರು ಕುಮಾರಸ್ವಾಮಿ ಕನಸು: ಶಾಸಕ ಸುರೇಶ್ ಗೌಡ

20/08/2021, 09:30

ಜಗದೀಶ್ ದೇವಲಾಪುರ ಮಂಡ್ಯ

info.reporterkarnataka@gmail.com

ಮನೆಮನೆಗೆ ಕುಡಿಯುವ ನೀರಿನ ಯೋಜನೆಯನ್ನು ಮಾಜಿ ಪ್ರಧಾನಿ ದೇವೇಗೌಡರ ಮಾರ್ಗದರ್ಶನದಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಚಾಲನೆಗೆ ನೀಡುವ ಮುಖಾಂತರ ಮಂಡ್ಯ ಜಿಲ್ಲೆಗೆ ಪ್ರಥಮ ಆದ್ಯತೆ ನೀಡಿದ ಕೊಡುಗೆ ಇದಾಗಿದೆ ಎಂದು ಶಾಸಕ ಸುರೇಶ್ ಗೌಡ ಹೇಳಿದರು.

ನಾಗಮಂಗಲ ತಾಲೂಕಿನ ದೇವಲಾಪುರ ಹೋಬಳಿಯ ದೇವರಮಾದಹಳ್ಳಿ ಗ್ರಾಮದಲ್ಲಿ ನಂಜಮ್ಮ ಹಾಗೂ ನರಸಿಂಹಯ್ಯನವರ ಸ್ಮರಣಾರ್ಥ ಅವರ ಹೆಸರಿನಲ್ಲಿ ನೂತನವಾಗಿ ಶುದ್ಧ ನೀರು ಘಟಕವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ಪ್ರಸ್ತುತ ಪ್ರತಿ ಮನೆ ಮನೆಗೂ ಕುಡಿಯುವ ನೀರಿನ ಯೋಜನೆಯನ್ನು ದೇವೇಗೌಡರು ಮಾರ್ಗದರ್ಶನದೊಂದಿಗೆ ಮುಖ್ಯಮಂತ್ರಿಗಳಾಗಿದ್ದ ಕುಮಾರಸ್ವಾಮಿ ಚಾಲನೆ ನೀಡಿದ್ದು, ಮಂಡ್ಯ ಜಿಲ್ಲೆಗೆ ಪ್ರಥಮ ಆದ್ಯತೆ ನೀಡುವ ಮುಖಾಂತರ ಯೋಜನೆಗೆ ಚಾಲನೆ ದೊರೆತಿದೆ. ಇದರಿಂದ ಪ್ರತಿಯೊಬ್ಬರ ಕುಡಿಯುವ ನೀರಿನ ಯೋಜನೆ ಸಾಕಾರಗೊಳ್ಳುವುದು ಎಂದು ತಿಳಿಸಿದರು.

ನನ್ನ ಅವಧಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಆಗುವ ಕೆಲಸಗಳು ಸಾಗುತ್ತಿದ್ದು ಪೂರ್ಣಪ್ರಮಾಣದಲ್ಲಿ ಆಗಿದೆ ಎಂದು ಹೇಳುವುದಿಲ್ಲ. ಆಗಬೇಕಾದ ಕೆಲಸಗಳು ಹಂತಹಂತವಾಗಿ ಮಾಡುವ ಭರವಸೆ ನೀಡುತ್ತಾ ಮುಂದಿನ ದಿನಗಳಲ್ಲಿ ಪ್ರಾದೇಶಿಕ ಪಕ್ಷದ ಅನಿವಾರ್ಯತೆ ವಾಗಿದ್ದು ತಮಗೆಲ್ಲ ಗೊತ್ತಿರುವ ವಿಚಾರವಾಗಿದೆ. ಮುಂಬರುವ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಬೇಕೆಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಸರ್ಕಾರದ ಯೋಜನೆಗಳನ್ನು ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಪಂಚಾಯಿತಿ ಅಧಿಕಾರಿಗಳು ಸಾರ್ವಜನಿಕರಿಗೆ ಸವಲತ್ತುಗಳ ಸಿಗುವ ಯೋಜನೆಯ ಬಗ್ಗೆ ಸದುಪಯೋಗಪಡಿಸಿಕೊಳ್ಳುವಂತೆ ಜನರಿಗೆ ಮುಟ್ಟುವಂತೆ  ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರತಿಯೊಬ್ಬರು ಬದ್ಧವಾಗಿರಬೇಕು ಎಂದು ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ
ಅಪ್ಪಾಜಿಗೌಡ ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಮಂಡ್ಯ  ಹಾಲು ಒಕ್ಕೂಟದ ನಿರ್ದೇಶಕರಾದ ಕೋಟಿ ರವಿ, ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಯೋಗೇಶ್, ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ನರಸಿಂಹಮೂರ್ತಿ, ಸಿ.ಜೆ ಕುಮಾರ್ ಮಾತನಾಡಿದರು.

ಇದೇ ವೇಳೆಯಲ್ಲಿ ನೂತನ ನೀರಿನ ಘಟಕದ ಪ್ರಾಯೋಜಕರಾದ ರಾಜಣ್ಣ, ಗ್ರಾಮ ಪಂಚಾಯಿತಿ ಸದಸ್ಯರಾದ ಸುರೇಶ್ ಸವಿತಾ ಬಸವರಾಜು, ದೇವರಾಜು. ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರಾದ ನಿತೀಶ್ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು