9:31 PM Friday26 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’…

ಇತ್ತೀಚಿನ ಸುದ್ದಿ

ಎನ್ ಎಸ್ ಯುಐ ರಾಜ್ಯ ಜಂಟಿ ಕಾರ್ಯದರ್ಶಿ ಆಗಿ ಕಾಂಗ್ರೆಸ್ ಯುವ ನಾಯಕ ಜಿಂಕಲರ ಶಶಾಂಕ ನೇಮಕ 

24/08/2021, 13:12

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಕಾಂಗ್ರೇಸ್ ಯುವ ನಾಯಕ ಜಿಂಕಲರ ಶಶಾಂಕ ಅವರು ಎನ್.ಎಸ್.ಯು.ಐ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ.

ಈ ಕುರಿತು ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿ ಎರಿಕ್ ಸ್ಟಿಫನ್  ಅವರು, ಶಶಾಂಕ ಅವರನ್ನು ರಾಷ್ಟ್ರೀಯ ವಿದ್ಯಾರ್ಥಿ ಕಾಂಗ್ರೆಸ್

ಸಂಘಟನೆಯ ಜಂಟಿ ಕಾರ್ಯದರ್ಶಿಗಳನ್ನಾಗಿ ಆಗಸ್ಟ್ 18ರಂದು ನೇಮಿಸಿರುವುದಾಗಿ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ಅಭಿನಂದನೆ; ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳು ರಾಷ್ಟ್ರ ಹಾಗೂ ರಾಜ್ಯ ರಾಜಕೀಯದಲ್ಲಿ, ತಮ್ಮದೇ ಆದ ವಿಶಿಷ್ಟ ವಾದ ಪ್ರಭಾವ ಮತ್ತು ತನ್ನದೇ ಆದ ಛಾಪನ್ನು ಮೂಡಿಸುತ್ತಲೇ ಬಂದಿವೆ. ಅದು ಯಾವುದೇ ಪಕ್ಷವಾಗಿರಬಹುದು ಅಥವಾ ಎರಡೂ ಜಿಲ್ಲೆಗಳ ಯಾವುದೇ ಭಾಗದ ಮುಖಂಡರಿರಬಹುದು. ಅಂತೆಯೇ ಕೂಡ್ಲಿಗಿ ಪಟ್ಟಣ ಜಿಂಕಲರ ಶಶಾಂಕರವರು ರಾಷ್ಟ್ರೀಯ ಕಾಂಗ್ರೇಸ್ ಮುಖಂಡರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಅವರು ಪಕ್ಷದ ವಿದ್ಯಾರ್ಥಿ ಸಂಘಟನೆಯ ರಾಜ್ಯ ಜಂಟಿ ಕಾರ್ಯದರ್ಶಿಗಳಾಗಿ ತಾವು ನೇಮಕ ವಾಗೋ ಮೂಲಕ ಸಮಾಜಕ್ಕೆ ಪ್ರಸ್ತುತ ಪಡಿಸಿದ್ದಾರೆ.ಅದಕ್ಕಾಗಿ ಅವರಿಗೆ ಪಕ್ಷದ ಮುಖಂಡರಿಂದ ಕಾರ್ಯಕರ್ತರಿಂದ ಅಭಿನಂದನೆಗಳ ಮಹಾಪೂರ ಹರಿದು ಬಂದಿದೆ.

ಪ್ರವಾಸಿ ಮಂದಿರದಲ್ಲಿ ಜರುಗಿದ ಪತ್ರಿಕಾ ಗೋಷ್ಠಿ ಯಲ್ಲಿ, ಶಶಾಂಕ ಅವರನ್ನು ಮುಖಂಡರು ಹಾಗೂ ಕಾರ್ಯಕರ್ತರು ಅಭಿನಂದಿಸಿ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ಮಹಿಳಾ ಕಾಂಗ್ರೇಸ್ ಮಹಿಳಾ ಮುಖಂಡರಾದ ಜಿಂಕಲರ ನಾಗಮಣಿ, ಎಚ್.ಕೆ.ಕುಂಟೆ ಛಲುವಾದಿ ಉಮೇಶ, ಪಪಂ ಸದಸ್ಯ ಕಾವಲ್ಲಿ ಶಿವಪ್ಪ, ಪ್ರದೀಪ, ಕೆ.ಕೆ.ಹಟ್ಟಿ ಬಸವರಾಜ, ಮೊರಬದ ವೀರಭದ್ರಪ್ಪ, ಚಾಂದಭಾಷಾ, ಮುನ್ನಾಬಯ್ಯ, ಮಾಳ್ಗಿ ಮಂಜುನಾಥ, ಸಾಲುಮನಿ ರಾಘವೇಂದ್ರ ಸೇರಿದಂತೆ ಪಟ್ಟಣ ಹಾಗೂ ತಾಲೂಕಿನ ವಿವಿದ ಭಾಗದಿಂದ ಆಗಮಿಸಿದ್ದ ಕಾಂಗ್ರೇಸ್ ಮುಖಂಡರು ಮತ್ತು ಕಾರ್ಯಕರ್ತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು