5:10 AM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ಅಫ್ಘಾನ್  ಭಯೋತ್ಪಾದಕರ ದಾಳಿ: ಸಾವಿನ ಸಂಖ್ಯೆ 103 ಏರಿಕೆ; ಅಮೆರಿಕದಿಂದ ಹೆಚ್ಚುವರಿ ಪಡೆ ನಿಯೋಜನೆ? 

28/08/2021, 10:06

ಅಫ್ಘಾನಿಸ್ತಾನ(reporterkarnataka.com): ರಾಜಧಾನಿ ಕಾಬೂಲ್‌ನಲ್ಲಿ ನಡೆದ ಸರಣಿ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 103ಕ್ಕೆ ಏರಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ.

ಭೀಕರ ಸ್ಫೋಟದಲ್ಲಿ ಕನಿಷ್ಠ 90 ಅಫ್ಘಾನ್ ನಾಗರಿಕರು ಸಾನ್ನಪ್ಪಿದ್ದಾರೆ. 13 ಸೈನಿಕರ ಸಾವನ್ನು ಅಮೆರಿಕದ ಪೆಂಟಗನ್  ದೃಢಪಡಿಸಿದೆ.

ಕಾಬೂಲ್ ವಿಮಾನ ನಿಲ್ದಾಣ ಮತ್ತು ಅದರ ಸುತ್ತಮುತ್ತಲಿನ ಪ್ರದೇಶವನ್ನು ಗುರಿಯಾಗಿಸಿಕೊಂಡು ಸ್ಫೋಟ ನಡೆಸಲಾಗಿದೆ.

ಕನಿಷ್ಠ ನಾಲ್ಕು ಸ್ಫೋಟಗಳು ನಡೆದಿವೆ. ಇಸ್ಲಾಮಿಕ್ ಸ್ಟೇಟ್-ಖೋರಾಸನ್ ಭಯೋತ್ಪಾದಕ ಗುಂಪು ಈ ದಾಳಿಯ ಹೊಣೆ ಹೊತ್ತಿದೆ ಎಂದು ವರದಿಯಾಗಿದೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್, ಅಮೆರಿಕದ ಜನರನ್ನು ನಾವು ರಕ್ಷಿಸುತ್ತೇವೆ, ನಮ್ಮ ಕಾರ್ಯಾ ಚರಣೆ ಮುಂದುವರೆಯಲಿದೆ ಎಂದು ಹೇಳಿದ್ದಾರೆ. ದಾಳಿ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನದಲ್ಲಿ ಹೆಚ್ಚುವರಿ ಮಿಲಿಟರಿ ನಿಯೋಜನೆ ಕುರಿತಂತೆ ಒಂದು ವೇಳೆ ಹೆಚ್ಚುವರಿ ಮಿಲಿಟರಿ ಪಡೆ ಅಗತ್ಯವಾದರೆ ಅದಕ್ಕೆ ಅನುಮೋದನೆ ನೀಡುವುದಾಗಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು