12:50 PM Tuesday23 - April 2024
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ಸೃಷ್ಟಿ ಕಲಾ ವಿದ್ಯಾಲಯದಲ್ಲಿ ಯಕ್ಷೋತ್ಸವ: ಸುಬ್ರಹ್ಮಣ್ಯ ಧಾರೇಶ್ವರ ಸೃಷ್ಟಿ ಕಲಾಭೂಷಣ ಪ್ರಶಸ್ತಿಗೆ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು… ಕೊಲ್ಯದಿಂದ ಅಬ್ಬಕ್ಕ ರಾಣಿ ಸರ್ಕಲ್‌ ವರೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ… 91ರ ಹರೆಯದ ಮಾಜಿ ಪ್ರಧಾನಿ ದೇವೇಗೌಡರು ಮೋದಿ ಗೆಲ್ಲಿಸಿ ಎನ್ನುತ್ತಿದ್ದಾರೆ; ದಿನಬಳಕೆ ವಸ್ತುಗಳ…

ಇತ್ತೀಚಿನ ಸುದ್ದಿ

ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ನಾಳೆ ಮಂಗಳೂರಿಗೆ: ರಾಷ್ಟ್ರೀಯ ಶಿಕ್ಷಣ ನೀತಿ 2020 ಉದ್ಘಾಟನೆ

29/08/2021, 11:23

ಮಂಗಳೂರು (reporterkarnataka.com): ಉನ್ನತ ಶಿಕ್ಷಣ,  ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ, ವಿದ್ಯುನ್ಮಾನ, ಐಟಿ ಹಾಗೂ ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ. ಅಶ್ವಥ್ ನಾರಾಯಣ ಸಿ.ಎನ್. ಅವರು ಇದೇ ಆ. 30ರ ಸೋಮವಾರ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ.

30ರ ಸೋಮವಾರ ಬೆಳಗ್ಗೆ ಬೆಂಗಳೂರಿನಿಂದ ವಿಮಾನದ ಮೂಲಕ 10.50ಕ್ಕೆ ದಕ್ಷಿಣ ಕನ್ನಡ ವಿಮಾನನಿಲ್ದಾಣಕ್ಕೆ ಆಗಮಿಸುವರು.

ಬೆಳಿಗ್ಗೆ 11ಗಂಟೆಗೆ ಅಲ್ಲಿಂದ ಹೊರಟು 11.45ಕ್ಕೆ ಮಂಗಳೂರು ವಿಶ್ವವಿದ್ಯಾಲಯಕ್ಕೆ ಆಗಮಿಸುವರು. 12 ರಿಂದ 1.30 ರವರೆಗೆ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿ 2020 ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 2.30 ರಿಂದ 3 ಗಂಟೆಯವರೆಗೆ ಕನ್ನಡ ಸಾಹಿತ್ಯ ದಿಗ್ಗಜರೊಂದಿಗೆ ಸಮಾಲೋಚನೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ರಿಂದ 3.45 ರವರೆಗೆ ಐಟಿ-ಬಿಟಿ ಉದ್ದಿಮೆದಾರರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು. 3.45ಕ್ಕೆ ಮಂಗಳೂರು ವಿಶ್ವವಿದ್ಯಾಲಯದಿಂದ ರಸ್ತೆ ಮೂಲಕ ಮುಡಿಪು ಗ್ರಾಮಕ್ಕೆ ತೆರಳುವರು.  ಸಂಜೆ 4 ಗಂಟೆಗೆ ಮುಡುಪು ಗ್ರಾಮದಲ್ಲಿ ಮಾದರಿ ಸ್ವಸಹಾಯ ಸಂಘ ಕರುನಾಡು ಗ್ರಾಮ ಪಂಚಾಯಿತಿ ಭೇಟಿ ನೀಡುವರು. ಸಂಜೆ 4.30ಕ್ಕೆ ಆರೆಸ್ಸೆಸ್ ಕಚೇರಿಗೆ ಪ್ರಯಾಣಿಸುವರು. ಸಂಜೆ 4.45 ರಿಂದ 5.15ರವರೆಗೆ ಆರೆಸ್ಸೆಸ್ ಕಚೇರಿಗೆ ಭೇಟಿ ನೀಡುವರು.  ಸಂಜೆ  5.15ರಿಂದ 5.45 ರವರೆಗೆ ಬಿಜೆಪಿ ಕಚೇರಿಗೆ ಭೇಟಿ ನೀಡುವರು. 5. 45ಕ್ಕೆ ವಿಮಾನ ನಿಲ್ದಾಣಕ್ಕೆ  ಪ್ರಯಾಣಿಸಿ 6.55 ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು