6:46 PM Sunday5 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಅಪ್ರಾಪ್ತ ಬಾಲಕಿಗೆ ಕಿರುಕುಳ ಆರೋಪ: ಬಂಧಿತ ಯುವಕ ಕೋರ್ಟ್ ಕಟ್ಟಡದ 6 ಮಹಡಿಯಿಂದ ಜಿಗಿದು ಆತ್ಮಹತ್ಯೆ

31/08/2021, 19:56

ಮಂಗಳೂರು(reporterkarnataka.com): ಪೋಸ್ಕೊ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಆರೋಪಿಯೊಬ್ಬರು ಕೋರ್ಟ್ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ಕಿನ್ಯಾ ನಿವಾಸಿ ರವಿರಾಜ್‌ (31) ಎಂದು ಗುರುತಿಸಲಾಗಿದೆ. ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ್ದ ಆರೋಪದ ಹಿನ್ನೆಲೆ ಆರೋಪಿ ರವಿರಾಜ್‌‌‌‌ ಅವರನ್ನು ಬಂಧಿಸಲಾಗಿತ್ತು. ತಾನು ಯಾವುದೇ ತಪ್ಪು ಮಾಡಿಲ್ಲ ಎಂದು ಮನನೊಂದು ಜಿಲ್ಲಾ ನ್ಯಾಯಾಲಯದ 6ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಆರೋಪಿಯನ್ನು ಇಂದು ಉಳ್ಳಾಲ ಪೊಲೀಸರು ಕೋರ್ಟಿಗೆ ಹಾಜರುಪಡಿಸಿದ್ದರು. ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಹೊರಗೆ ತಂದು ಕುಳಿತಿರುವಂತೆ ಪೊಲೀಸರು ಸೂಚಿಸಿದ್ದರು. ಆತನ ಪರವಾಗಿ ಹಾಜರಾಗಿದ್ದ ವಕೀಲರು ರವಿರಾಜ್ ಬಳಿ ಮಾತನಾಡಿದ್ದು ಅಲ್ಲಿಯೇ ಇದ್ದರು‌. ಆದರೆ, ಅದೇ ವೇಳೆಗೆ ಹಠಾತ್ತಾಗಿ ಆರೋಪಿ ರವಿರಾಜ್ ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಆರನೇ ಮಹಡಿಯಿಂದ ಕೆಳಕ್ಕೆ ಹಾರಿದ್ದಾನೆ. ಕೋರ್ಟ್ ಒಳಗಡೆಯೇ ಲಿಫ್ಟ್ ಇರುವ ಜಾಗದಲ್ಲಿ ಮೇಲಿನಿಂದ ಕೆಳಕ್ಕೆ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು ಕಂಡಿದ್ದಾನೆ.

ಪ್ರಕರಣದಲ್ಲಿ ರವಿರಾಜ್, ತಾನೇನು ಹಾಗೆ ಮಾಡಿಲ್ಲ. ಪರಿಚಯದ ಹುಡುಗಿ ಎಂದು ಹತ್ತಿರ ಹೋಗಿದ್ದೆ ಎಂದು ವಕೀಲರಲ್ಲಿ ಹೇಳಿದ್ದರು. ಆದರೆ, ಕುಡಿದ ಮತ್ತಿನಲ್ಲಿದ್ದ ವ್ಯಕ್ತಿ ಸಾರ್ವಜನಿಕ ಪ್ರದೇಶದಲ್ಲಿ ಸೈಕಲಿನಲ್ಲಿ ಬಂದಿದ್ದ ಅನ್ಯಕೋಮಿನ ಹುಡುಗಿಯನ್ನು ಮುಟ್ಟಲು ಹೋಗಿದ್ದು ಸ್ಥಳೀಯರನ್ನು ಕೆರಳಿಸಿತ್ತು. ಸ್ಥಳೀಯರು ಸೇರಿ, ರವಿರಾಜ್ ಮೇಲೆ ಥಳಿಸಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಪೊಲೀಸರ ಕೈಗೆ ಒಪ್ಪಿಸಿದ್ದರು. ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದರು. ತಾನು ಮಾಡದ ತಪ್ಪಿಗೆ ಈ ರೀತಿ ಆಯ್ತಲ್ಲಾ ಎಂಬ ನೋವಿನಲ್ಲಿ ರವಿರಾಜ್ ಕೋರ್ಟ್ ಮಹಡಿಯಿಂದ ಹೊರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು