6:10 AM Saturday20 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

74ನೇ ಸಾರ್ವಜನಿಕ ಗಣೇಶೋತ್ಸವ: ಮಂಗಳೂರಿನ ಸಂಘನಿಕೇತನಕ್ಕೆ ಪಾರ್ವತಿತನಯ ವಿಗ್ರಹ; ನಮಿಸಿದ ಭಕ್ತ ಜನ

09/09/2021, 19:24

ಚಿತ್ರ : ಮಂಜು ನೀರೇಶ್ವಾಲ್ಯ
ಮಂಗಳೂರು(reporterkarnataka.com):

ನಗರದ ಮಣ್ಣಗುಡ್ಡೆಯ ಪ್ರತಾಪ್ ನಗರದಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ನಡೆಯಲಿರುವ 74ನೇ ಸಾರ್ವ ಜನಿಕ ಶ್ರೀ ಗಣೇಶೋತ್ಸವ ಅಂಗವಾಗಿ ವಿನಾಯಕನ ವಿಗ್ರಹವನ್ನು ಗುರುವಾರ ಸಂಜೆ ಸಂಘನಿಕೇತನಕ್ಕೆ ಸರಳ ಮೆರವಣಿಗೆಯಲ್ಲಿ ವೈಭವದಿಂದ ತರಲಾಯಿತು.

 

 

ಕೋವಿಡ್ ಹಿನ್ನೆಲೆಯಲ್ಲಿ ಗಣೇಶೋತ್ಸ ಈ ಬಾರಿ ಅತ್ಯಂತ ಸರಳ ರೀತಿಯಲ್ಲಿ ಜರಗ ಲಿರುವುದು. ಶುಕ್ರವಾರ ಬೆಳೆಗ್ಗೆ ಸಾರ್ವಜನಿಕ ಗಣೇಶೋತ್ಸವದ ಉದ್ಘಾಟನೆಯು ದೀಪ ಬೆಳಗಿಸುವುದರ ಮುಖೇನ ಚಾಲನೆ ನೀಡಲಾಗುವುದು  ಬಳಿಕ ಶ್ರೀ ದೇವರ ವಿಗ್ರಹ ಪ್ರತಿಷ್ಠಾಪನೆ , ಗಣಹೋಮ ರಾತ್ರಿ ಮೂಡಗಣಪತಿ ಸೇವೆ , ರಂಗ ಪೂಜೆ ಬಳಿಕ ಮಂಗಳಾರತಿ ನಡೆಯಲಿದೆ . ಐದು ದಿನಗಳ ಪರ್ಯಂತ ಸಂಘನಿಕೇತನದಲ್ಲಿ ನಡೆಯಲಿದ್ದು , ಮಹಾಮಾರಿ ತಡೆಗಟ್ಟುವ ಹಿನ್ನೆಲೆಯಲ್ಲಿ ಸರಕಾರದ ಆದೇಶ ಪ್ರಕಾರ ಎಲ್ಲ ರೀತಿಯಲ್ಲಿ ನಿಯಮ ಪಾಲಿಸಿ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದ್ರೆಯಾಗದಂತೆ ಕಾರ್ಯಕ್ರಮ ಆಯೋಜಿಸಲಾಗಿದೆ . ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್ , ರಘುವೀರ್ ಕಾಮತ್ , ವಿನೋದ್ ಶೆಣೈ , ಜೀವನರಾಜ್ ಶೆಣೈ , ಸತೀಶ್ ಪ್ರಭು , ಸುರೇಶ ಕಾಮತ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು