6:01 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯುವ ದಿನಾಚರಣೆ: ಭಿತ್ತಿಚಿತ್ರ ರಚನೆ ಸ್ಪರ್ಧೆ

10/09/2021, 16:45

ಮಂಗಳೂರು(reporterkarnatakanews): ಮಂಗಳೂರು  ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಹಾಗೂ ಏಡ್ಸ್ ನಿಯಂತ್ರಣ ಮತ್ತು ತಡೆ ಘಟಕದ ನೇತೃತ್ವದಲ್ಲಿ ಹಾಗೂ  ವಿಶ್ವವಿದ್ಯಾನಿಲಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಯುವ ದಿನಾಚರಣೆ- 2021 ನ್ನು ವಿವಿ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಗುರುವಾರ ಜರುಗಿತು.


ಕಾರ್ಯಕ್ರಮ ಉದ್ಘಾಟಿಸಿದ ಪ್ರಾಂಶುಪಾಲರಾದ ಡಾ. ಅನುಸೂಯ ರೈ ಮಾತನಾಡಿ, ಕೊವಿಡ್-19 ಸಾಂಕ್ರಾಮಿಕದ ಅವಧಿಯಲ್ಲಿರುವ ಮಿತಿಯೊಳಗೆ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳನ್ನು ಆಯೋಜಿಸಿ ಅವರಲ್ಲಿನ ಕ್ರಿಯಾಶೀಲತೆಯನ್ನು ಜೀವಂತವಾಗಿರಿಸಬೇಕಿದೆ ಎಂದು ಅಭಿಪ್ರಾಯಪಟ್ಟರು. 






ಅತಿಥಿ ಉಪನ್ಯಾಸ ನೀಡಿದ ನೆಹರು ಯುವ ಕೇಂದ್ರದ ಜಿಲ್ಲಾ ಸಮನ್ವಯ ಅಧಿಕಾರಿ ರಘುವೀರ್ ಸೂಟರ್ ಪೇಟೆ,  ಸ್ವಯಂಸೇವೆ ಜನರೊಂದಿಗೆ ಬೆರೆತು ನಾಯಕತ್ವ ಗುಣ, ಸಂವಹನ ಕಲೆ ರೂಢಿಸಿಕೊಳ್ಳಲು ಇರುವ ಅವಕಾಶ. ಉತ್ತಮ ರಾಷ್ಟ್ರೀಯ ಸೇವಾ ಯೋಜನೆಯ  ಸ್ವಯಂ ಸೇವಕನಿಗೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚುವ ಅವಕಾಶವಿದೆ. ದಕ್ಷಿಣ ಕನ್ನಡದ ನಾಲ್ವರು ಸ್ವಯಂಸೇವಕರು ವಿಶ್ವಸಂಸ್ಥೆಗಾಗಿ ದುಡಿಯುತ್ತಿರುವುದು ಹೆಮ್ಮೆಯ ವಿಷಯ ಎಂದರು. 


ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಬದ್ರುದ್ದೀನ್ ಎಂ.ಎನ್ . ಯುವಜನತೆ ಹಾದಿ ತಪ್ಪದೆ ಇರುವ ಅಪಾರ ಅವಕಾಶಗಳನ್ನು ಬಳಸಿಕೊಂಡು ಬೆಳೆಯಬೇಕು ಎಂದು ಹೇಳಿದರು.




ಭಿತ್ತಿಚಿತ್ರ ರಚನೆ ಸ್ಪರ್ಧೆಯಲ್ಲಿ ರೋಶನಿ ನಿಲಯ ಕಾಲೇಜಿನ ನವ್ಯಾ ವಿ. ಆರ್. ಪ್ರಥಮ ಬಹುಮಾನ ಪಡೆದುಕೊಂಡರೆ, ಎಸ್. ಡಿ. ಎಂ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಕಾಲೇಜಿನ ಪಂಚಮಿ ಕೆ ಮತ್ತು ಚೈತನ್ಯ ಎಸ್.  ದ್ವಿತೀಯ ಮತ್ತು ತೃತೀಯ ಬಹುಮಾನ ಪಡೆದುಕೊಂಡರು.



ಮಂಗಳೂರು ವಿಶ್ವವಿದ್ಯಾನಿಲಯದ ಎನ್ಎಸ್ಎಸ್ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ. ಕಾರ್ಯಕ್ರಮದ ನೇತೃತ್ವ ವಹಿಸಿ  ಅತಿಥಿಗಳನ್ನು ಸ್ವಾಗತಿಸಿದರು. ಕಾಲೇಜಿನ ಎನ್ಎಸ್ಎಸ್ ಅಧಿಕಾರಿ ಡಾ. ಗಾಯತ್ರಿ ಎನ್ ವಂದಿಸಿದರು. ಏಡ್ಸ್ ನಿಯಂತ್ರಣ  ಘಟಕದ ಮೇಲ್ವಿಚಾರಕ ಮಹೇಶ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು