4:10 PM Thursday18 - April 2024
ಬ್ರೇಕಿಂಗ್ ನ್ಯೂಸ್
ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ… ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ…

ಇತ್ತೀಚಿನ ಸುದ್ದಿ

Sad News: ಗಂಡು ಮಗುವಿಗೆ ಜನ್ಮ ನೀಡಿದ ಅವಿವಾಹಿತ ಯುವತಿ ಸಾವು; ಇಬ್ಬರು ಪ್ರೇಮಿಗಳಲ್ಲಿ ತಂದೆ ಯಾರು ಎನ್ನುವುದೇ ಪ್ರಶ್ನೆ !!

14/09/2021, 17:12

ಶಿವಮೊಗ್ಗ(reporterkarnataka.com): ಅವಿವಾಹಿತ ಯುವತಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿ, ತಾಯಿ- ಮಗು ಇಬ್ಬರೂ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಇಲ್ಲಿನ ವೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. 

ಯುವತಿ ಹೆರಿಗೆಯಾದ ಎರಡು ತಾಸಿನೊಳಗೆ ಕೊನೆಯುಸಿರೆಳೆದಿದ್ದಾಳೆ. ಜತೆಗೆ ಹಸುಗೂಸು ಕೂಡ ಸಾವನ್ನಪ್ಪಿದೆ. ಇದೀಗ ಅವಿವಾಹಿತ ಯುವತಿಯ ಮಗುವಿನ ತಂದೆ ಯಾರು? ಎಂಬ ಪ್ರಶ್ನೆ ಉದ್ಭವವಾಗಿದೆ. ಇದರ ಜತೆಗೆ ಒಂದಿಷ್ಟು ಪ್ರೇಮ ಕಹಾನಿ ಹೊರ ಬಿದ್ದಿದೆ.

ಶಿವಮೊಗ್ಗ ತಾಲೂಕು ಕುಂಸಿ ಗ್ರಾಮದ ಉಪ್ಪಾರ ಕೇರಿಯ ಅಶ್ವಿನಿ ಮೃತ ಯುವತಿ. ಈಕೆ ಆಯನೂರು ಸಮೀಪದ ಗ್ರಾಮದ ಮಧುಸೂದನ್ ಎಂಬಾತನನ್ನು ಪ್ರೀತಿಸುತ್ತಿದ್ದಳು.

ಉದ್ಯೋಗ ಅರಸಿ ಮೈಸೂರಿಗೆ ತೆರಳಿದ್ದ ಯುವತಿ ಅಲ್ಲಿ ಬಸವರಾಜ್ ಎಂಬಾತನೊಂದಿಗೆ ಪ್ರೀತಿ, ಪ್ರೇಮ ಶುರು ಮಾಡಿದ್ದಳು ಎನ್ನಲಾಗಿದೆ. ಇದೇ ವೇಳೆಗೆ ಕೊರೊನಾ ಲಾಕ್ ಡೌನ್ ಆಗಿದ್ದರಿಂದ ಸ್ವಗ್ರಾಮಕ್ಕೆ ಬರುವಾಗ ತನ್ನೊಂದಿಗೆ ಬಸವರಾಜನನ್ನೂ ಕರೆದು ಕೊಂಡು ಬಂದಿದ್ದಳು. ಬಸವರಾಜ್ ಬಗ್ಗೆ ಮನೆಯವರು ವಿಚಾರಿಸಿದಾಗ ಆತ ನನ್ನ ಸ್ನೇಹಿತ, ಲಾಕ್ ಡೌನ್ ಹಿನ್ನೆಲೆಯಲ್ಲಿ ನನ್ನೊಂದಿಗೆ ಬಂದಿದ್ದಾನೆ, ಕೆಲ ದಿನದಲ್ಲೇ ಮತ್ತೆ ಮೈಸೂರಿಗೆ ಹೋಗುತ್ತಾನೆ ಎಂದಿದ್ದಳು. ಆದರೆ, ಮನೆಯವರು ಬಸವರಾಜ್ ಬಗ್ಗೆ ಪದೇಪದೆ ಪ್ರಶ್ನೆ ಮಾಡಲಾರಂಭಿಸಿದಾಗ ಬಸವರಾಜ್ ವಾಪಸ್ ಮೈಸೂರಿಗೆ ತೆರಳಿದ್ದ. ಬಸವರಾಜ್ ಮೈಸೂರಿಗೆ ತೆರಳಿದ ಕೆಲ ದಿನಗಳ ಬಳಿಕ ಅಶ್ವಿನಿ ಆರೋಗ್ಯದಲ್ಲಿ ಏರುಪೇರಾಗಲಾರಂಭಿಸಿತ್ತು. ಒಂದು ದಿನ ವಿಪರೀತ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅಶ್ವಿನಿಯನ್ನು ಪಾಲಕರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ಆಕೆ ಗರ್ಭಿಣಿ ಎಂದು ಗೊತ್ತಾಗಿದೆ. ಅಂದೇ ಹೊಟ್ಟೆ ನೋವು ಹೆಚ್ಚಾಗಿ ಅವಧಿ ಪೂರ್ವ ಹೆರಿಗೆಯೂ ಆಗಿದೆ. ಮುಂದೆ ನಡೆದಿದ್ದು ದುರಂತ ಅಂತ್ಯ.

ಇತ್ತೀಚಿನ ಸುದ್ದಿ

ಜಾಹೀರಾತು