4:31 PM Friday19 - April 2024
ಬ್ರೇಕಿಂಗ್ ನ್ಯೂಸ್
ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ…

ಇತ್ತೀಚಿನ ಸುದ್ದಿ

ಮಂಗಳೂರು: ವಾಹನ ಸಂಚಾರಕ್ಕೆ ನಿಷೇಧ; ಯಾವ ರಸ್ತೆ? ಕಾರಣ ಏನು? ಪರ್ಯಾಯ ಮಾರ್ಗ ವ್ಯವಸ್ಥೆ ಯಾವುದು?

14/09/2021, 09:04

ಮಂಗಳೂರು (reporterkarnataka.com.): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ನವಭಾರತ ಜಂಕ್ಷನ್‍ನಿಂದ ನಾಗರಕಟ್ಟೆ ವರೆಗೆ (ಡೊಂಗರಕೇರಿ ವೆಂಕಟರಮಣ ದೇವಸ್ಥಾನ ರಸ್ತೆ) ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದರಿಂದ ಆ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಿ ಆದೇಶ ಹೊರಡಿಸುವುದರೊಂದಿಗೆ ಸಾರ್ವಜನಿಕರ ಓಡಾಟಕ್ಕೆ ಮತ್ತು ವಾಹನಗಳ ಸುಗಮ ಸಂಚಾರಕ್ಕಾಗಿ ಬದಲಿ ಮಾರ್ಗದ ವ್ಯವಸ್ಥೆ ಮಾಡಬೇಕಾದ ಅವಶ್ಯಕತೆ ಇರುವುದನ್ನು ಮನಗಂಡು ಕಾಮಗಾರಿ ಮುಕ್ತಾಯವಾಗುವ ವರೆಗೆ ಮಂಗಳೂರಿನ ಪೊಲೀಸ್ ಆಯುಕ್ತ ಹಾಗೂ ಅಡಿಷನಲ್ ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್ ಶಶಿಕುಮಾರ್  ಅವರು ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮಾವಳಿಗಳು 1989 ರ ನಿಯಮ 221 ರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ನವಭಾರತ ಜಂಕ್ಷನ್‍ನಿಂದ ನಾಗನಕಟ್ಟೆ ವರೆಗೆ (ಡೊಂಗರಕೇರಿ ವೆಂಕಟರಮಣ ದೇವಸ್ಥಾನ ರಸ್ತೆ) ರಸ್ತೆಯಲ್ಲಿ ಇದೇ ಸೆಪ್ಟೆಂಬರ್ 9 ರಿಂದ ನವೆಂಬರ್ 7 ರವರೆಗೆ 60 ದಿನಗಳ ಕಾಲ ವಾಹನಗಳ ಸಂಚಾರದಲ್ಲಿ ತಾತ್ಕಾಲಿಕವಾಗಿ ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. 

ನಾಗನಕಟ್ಟೆ ಕಡೆಯಿಂದ ಬರುವ ವಾಹನಗಳು ಗದ್ದಕೇರಿ ಜಂಕ್ಷನ್ ಮೂಲಕ ಮುಂದುವರೆದು ರಮಣ ಪೈ ಹಾಲ್ ಸಮೀಪದ ರಸ್ತೆಯಲ್ಲಿ ಬಂದು ನವಭಾರತ್ ಸರ್ಕಲ್ ಮುಖಾಂತರ ಸಂಚರಿಸುವುದು.
ನವಭಾರತ್ ಜಂಕ್ಷನ್‍ನಿಂದ ಡೊಂಗರಕೇರಿಗೆ ಹೋಗುವ ವಾಹನಗಳು ರಮಣ ಪೈ ಹಾಲ್ ಮೂಲಕ ಗದ್ದೆಕೇರಿ ಜಂಕನ್ ಕಡೆಗೆ ಸಂಚರಿಸುವುದು.
ಕಾಮಗಾರಿ ವೇಳೆ ನವಭಾರತ ಜಂಕ್ಷನ್ ನಿಂದ ನಾಗನಕಟ್ಟೆ ವರೆಗೆ (ಡೊಂಗರಗೇರಿ ವೆಂಕಟರಮಣ ದೇವಸ್ಥಾನ ರಸ್ತೆ) ರಸ್ತೆಯಲ್ಲಿ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. 

ಈ ಆದೇಶದನ್ವಯ ಈ ರಸ್ತೆಯಲ್ಲಿ ಅವಶ್ಯವುಳ್ಳ ಸೂಚನಾ ಫಲಕಗಳನ್ನು ಮಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ಅಳವಡಿಸುವುದು ಹಾಗೂ ಸುಗಮ ಸಂಚಾರ ನಿಯಂತ್ರಣಕ್ಕೆ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದು ಮಂಗಳೂರು ಉಪ ವಿಭಾಗದ ಮಂಗಳೂರು ಸಂಚಾರ ಸಹಾಯಕ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.    

ಇತ್ತೀಚಿನ ಸುದ್ದಿ

ಜಾಹೀರಾತು