3:38 AM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಕೃಷಿ ಅಧ್ಯಯನಕ್ಕಾಗಿ ಬಂದ ಯುವತಿ ನೀರಿನ ಹೊಂಡದಲ್ಲಿ ಮುಳುಗಿ ಸಾವು

15/09/2021, 14:04

ಮಂಗಳೂರು(Reporterkarnataka.com)

ಕೃಷಿ ಅಧ್ಯಯನಕ್ಕಾಗಿ ಫಾರ್ಮ್ ಹೌಸಿಗೆ ಬಂದಿದ್ದ ಯುವತಿ ಸಾಹಸಕ್ರೀಡೆಗಳನ್ನಾಡುವ ನೀರಿನ ಹೊಂಡದಲ್ಲಿ ಮುಳುಗಿ ಸಾವನ್ಬಪ್ಪಿದ ಘಟನೆ ಕೇಪುವಿನಲ್ಲಿ ನಡೆದಿದೆ.

ಮಂಗಳೂರಿನ ಪ್ರಶಾಂತ ನಗರ ನಿವಾಸಿ ಡಾ. ಮೈಜಿ ಕರೋಲ್ (31) ಕೃಷಿ ಬಗ್ಗೆ ಸಂಶೋಧನೆ ನಡೆಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕೇಪು ಗ್ರಾಮದಲ್ಲಿ ವಾರಣಾಸಿ ಪಾರ್ಮ್ ಹೌಸಿಗೆ ಕೆಲವು ದಿನಗಳ ಹಿಂದೆ ಆಗಮಿಸಿದ್ದರು.

ಫಾರ್ಮ್​ ಹೌಸ್​ನಲ್ಲಿ ನೀರಿನ ಕೆರೆ ನೋಡಿದ ಮೈಜಿ ಸ್ವಿಮ್ಮಿಂಗ್​ ಡ್ರೆಸ್​ ಧರಿಸಿ ಈಜಲೆಂದು ನೀರಿಗೆ ಇಳಿದಿದ್ದು, ಬಹಳ ಸಮಯ ಕಳೆದರೂ ಮರಳಿ ಬಾರದ ವೇಳೆ ಈಜು ಕಲಿಯುವ ವಿದ್ಯಾರ್ಥಿಗಳು ಆತಂಕಗೊಂಡಿದ್ದಾರೆ. ಬಳಿಕ ಕೆರೆಯ ಬಳಿ ಬಂದು ಕೆರೆಯಲ್ಲಿ ಹುಡುಕಾಡಿದಾಗ ದೇಹ ಪತ್ತೆಯಾಗಿದೆ.

ಡಾ.ಮೈಜೀ ಕರೋಲ್ ಫರ್ನಾಂಡಿಸ್ ಸಾವಿನ ಬಗ್ಗೆ ಆಕೆಯ ಸಹೋದರಿ ಡಯಾನ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವಿಟ್ಲ ಠಾಣಾ ಪೊಲೀಸರು ಮಾಹಿತಿ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು