11:53 AM Tuesday19 - March 2024
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ: ಇಬ್ಬರು ಬಿಜೆಪಿ ಮುಖಂಡರ ಅಮಾನತು ಆದೇಶ ವಾಪಸ್; ಭಿನ್ನಮತ ಉಪಶಮನಕ್ಕೆ ಹಿರಿಯ… ಭಾರತದ ಕಾರು ಮಾಲೀಕರ ನೆಚ್ಚಿನ ಸೂಪರ್ ಆ್ಯಪ್ ಪಾರ್ಕ್+: ಪ್ರಸ್ತುತ ದೇಶದಲ್ಲಿ 1.5… ಕರ್ನಾಟಕವನ್ನು ಲೂಟಿಕೋರರಿಂದ ರಕ್ಷಿಸುತ್ತೇನೆ: ಕಲಬುರಗಿ ಸಂಕಲ್ಪ ಸಮಾವೇಶದಲ್ಲಿ ಪ್ರಧಾನಿ ಮೋದಿ ಘೋಷಣೆ ದೇಶದ ಗದ್ದುಗೆಗೆ ಬಿಗ್ ಫೈಟ್: ಮತ್ತೊಮ್ಮೆ ಮೋದಿ- ರಾಹುಲ್ ಮುಖಾಮುಖಿ; ರಾಜ್ಯದಲ್ಲಿ ಏ.26… ಸಂಸತ್ ಚುನಾವಣೆಯ ದಿನಾಂಕ ನಾಳೆ ಪ್ರಕಟ: ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಲಿದ್ದಾರೆ ಚೀಫ್ ಎಲೆಕ್ಷನ್… ಕಡೂರಿಗೆ ಆಗಮಿಸಿದ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ: ಮೊಮ್ಮಗ ಪ್ರಜ್ವಲ್ ಪರ… ಹಿಂದುತ್ವ ಮತ್ತು ಅಭಿವೃದ್ಧಿಗೆ ನನ್ನ ಆದ್ಯತೆ: ದ.ಕ. ಲೋಕಸಭೆ ಕ್ಷೇತ್ರ ಬಿಜೆಪಿ ಅಭ್ಯರ್ಥಿ… ಮಂಗಳೂರು: ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಅಮಾನತಿಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಂಜನಗೂಡು ದೇಬೂರು ಗ್ರಾಮದಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ ಕೂಡ್ಲಿಗಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ 550 ಕೋಟಿ ರೂ.ಅನುದಾನ: ಶಾಸಕ ಡಾ. ಎನ್.ಟಿ.…

ಇತ್ತೀಚಿನ ಸುದ್ದಿ

ಮುಜರಾಯಿ ಸಚಿವೆಯಾಗಿದ್ದರೂ ದೇವಸ್ಥಾನ ಧ್ವಂಸ ಮಾಡಿದ ಬಗ್ಗೆ ಬಾಯಿ ಬಿಡದ ಸಚಿವೆ ಬೇಕಾಗಿಲ್ಲ : ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧದ ಪೋಸ್ಟ್ ವೈರಲ್

16/09/2021, 20:24

ಮಂಗಳೂರು (ReporterKarnataka.com)

ಮುಜರಾಯಿ ಸಚಿವೆಯಾಗಿದ್ದರೂ ದೇವಸ್ಥಾನ ಧ್ವಂಸ ಮಾಡಿದ ಬಗ್ಗೆ ಬಾಯಿ ಬಿಡದ ಸಚಿವೆ ಬೇಕಾಗಿಲ್ಲ ಎನ್ನುವ ಪೋಸ್ಟ್ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ರಾಜ್ಯದಲ್ಲಿ ದೇವಾಲಯಗಳ ನೆಲಸಮ ಮಾಡಲು ಆದೇಶ ಹೊರಡಿಸಿದ ನ್ಯಾಯಲಯ ಹಾಗೂ ದೇವಾಲಯಗಳನ್ನು ನೆಲಸಮ ಮಾಡಲು ಅವಕಾಶ ಒದಗಿಸಿಕೊಟ್ಟ ಆಡಳಿತರೂಢ ಬಿಜೆಪಿ ಸರಕಾರದ ವಿರುದ್ಧ ವಿವಿಧ ಸಂಘಟನೆಗಳು ಹಲವು ನಗರಗಳಲ್ಲಿ ಪ್ರತಿಭಟನೆಗಳನ್ನು ಕೈಗೊಂಡು ಆಕ್ರೋಶವನ್ನು ಹೊರಹಾಕುತ್ತಿದೆ.

ಮಂಗಳೂರು, ಮೈಸೂರು ದಾವಣಗೆರೆ ಸೇರಿದಂತೆ ಹಲವೆಡೆ ಹಿಂದೂ ಸಂಘಟನೆಗಳು ಪ್ರತಿಭಟನೆಗಳನ್ನು ಹಮ್ಮಿಕೊಂಡಿತ್ತು ಏತನ್ಮಧ್ಯೆ ರಾಜ್ಯ ಮುಖ್ಯಮಂತ್ರಿ ಅವಸರ ಅವಸರವಾಗಿ ದೇವಾಲಯಗಳನ್ನು ನೆಲಸಮಗೊಳಿಸಬೇಡಿ ಎಂದು ಹೇಳಿಕೆಯನ್ನು ನೀಡಿದ್ದಾರೆ.

ಹಾಗೆಯೆ ಅನೇಕ ಯುವ ಹಿಂದೂ ಕಾರ್ಯಕರ್ತರು ಬಿಜೆಪಿಯ ಸ್ಥಾನಮಾನಕ್ಕೆ ರಾಜೀನಾಮೆ ನೀಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ ಆದರೆ ಇಷ್ಟೆಲ್ಲ ಘಟನೆಗಳ ನಡುವೆ ಮುಜರಾಯಿ ಸಚಿವರಾಗಿರುವ ಶಶಿಕಲ್ಲಾ ಜೊಲ್ಲೆ ಮಾತ್ರ ತುಟಿಕ್ ಪಿಟಿಕ್ ಅಂದಿಲ್ಲ.
ಈಗ ಹಿಂದೂ ಕಾರ್ಯಕರ್ತರ ಕೆಂಗಣ್ಣಿಗೆ ಶಶಿಕಲಾ ಜೊಲ್ಲೆ ಅವರೂ ಗುರಿಯಾಗಿದ್ದು, ಐತಿಹಾಸಿಕ ಚೋಳರ ಕಾಲದ ನಂಜನಗೂಡು ದೇವಾಲಯಗಳನ್ನು ನೆಲಸಮಗೊಳಿಸಿದಾಗಲೂ ಮುಜಾರಾಯಿ ಸಚಿವರು ಯಾವುದೇ ರೀತಿಯ ಪ್ರತಿಕ್ರಿಯೆಯನ್ನು ನೀಡದೆ ಸುಮ್ಮನಿರುವುದು ಹಲವಾರು ಪ್ರಶ್ನೆಗಳಿಗೆ ಎಡೆ ಮಾಡಿಕೊಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು