12:15 AM Wednesday24 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

ಮುಜರಾಯಿ ಸಚಿವೆಯಾಗಿದ್ದರೂ ದೇವಸ್ಥಾನ ಧ್ವಂಸ ಮಾಡಿದ ಬಗ್ಗೆ ಬಾಯಿ ಬಿಡದ ಸಚಿವೆ ಬೇಕಾಗಿಲ್ಲ : ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧದ ಪೋಸ್ಟ್ ವೈರಲ್

16/09/2021, 20:24

ಮಂಗಳೂರು (ReporterKarnataka.com)

ಮುಜರಾಯಿ ಸಚಿವೆಯಾಗಿದ್ದರೂ ದೇವಸ್ಥಾನ ಧ್ವಂಸ ಮಾಡಿದ ಬಗ್ಗೆ ಬಾಯಿ ಬಿಡದ ಸಚಿವೆ ಬೇಕಾಗಿಲ್ಲ ಎನ್ನುವ ಪೋಸ್ಟ್ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ರಾಜ್ಯದಲ್ಲಿ ದೇವಾಲಯಗಳ ನೆಲಸಮ ಮಾಡಲು ಆದೇಶ ಹೊರಡಿಸಿದ ನ್ಯಾಯಲಯ ಹಾಗೂ ದೇವಾಲಯಗಳನ್ನು ನೆಲಸಮ ಮಾಡಲು ಅವಕಾಶ ಒದಗಿಸಿಕೊಟ್ಟ ಆಡಳಿತರೂಢ ಬಿಜೆಪಿ ಸರಕಾರದ ವಿರುದ್ಧ ವಿವಿಧ ಸಂಘಟನೆಗಳು ಹಲವು ನಗರಗಳಲ್ಲಿ ಪ್ರತಿಭಟನೆಗಳನ್ನು ಕೈಗೊಂಡು ಆಕ್ರೋಶವನ್ನು ಹೊರಹಾಕುತ್ತಿದೆ.

ಮಂಗಳೂರು, ಮೈಸೂರು ದಾವಣಗೆರೆ ಸೇರಿದಂತೆ ಹಲವೆಡೆ ಹಿಂದೂ ಸಂಘಟನೆಗಳು ಪ್ರತಿಭಟನೆಗಳನ್ನು ಹಮ್ಮಿಕೊಂಡಿತ್ತು ಏತನ್ಮಧ್ಯೆ ರಾಜ್ಯ ಮುಖ್ಯಮಂತ್ರಿ ಅವಸರ ಅವಸರವಾಗಿ ದೇವಾಲಯಗಳನ್ನು ನೆಲಸಮಗೊಳಿಸಬೇಡಿ ಎಂದು ಹೇಳಿಕೆಯನ್ನು ನೀಡಿದ್ದಾರೆ.

ಹಾಗೆಯೆ ಅನೇಕ ಯುವ ಹಿಂದೂ ಕಾರ್ಯಕರ್ತರು ಬಿಜೆಪಿಯ ಸ್ಥಾನಮಾನಕ್ಕೆ ರಾಜೀನಾಮೆ ನೀಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ ಆದರೆ ಇಷ್ಟೆಲ್ಲ ಘಟನೆಗಳ ನಡುವೆ ಮುಜರಾಯಿ ಸಚಿವರಾಗಿರುವ ಶಶಿಕಲ್ಲಾ ಜೊಲ್ಲೆ ಮಾತ್ರ ತುಟಿಕ್ ಪಿಟಿಕ್ ಅಂದಿಲ್ಲ.
ಈಗ ಹಿಂದೂ ಕಾರ್ಯಕರ್ತರ ಕೆಂಗಣ್ಣಿಗೆ ಶಶಿಕಲಾ ಜೊಲ್ಲೆ ಅವರೂ ಗುರಿಯಾಗಿದ್ದು, ಐತಿಹಾಸಿಕ ಚೋಳರ ಕಾಲದ ನಂಜನಗೂಡು ದೇವಾಲಯಗಳನ್ನು ನೆಲಸಮಗೊಳಿಸಿದಾಗಲೂ ಮುಜಾರಾಯಿ ಸಚಿವರು ಯಾವುದೇ ರೀತಿಯ ಪ್ರತಿಕ್ರಿಯೆಯನ್ನು ನೀಡದೆ ಸುಮ್ಮನಿರುವುದು ಹಲವಾರು ಪ್ರಶ್ನೆಗಳಿಗೆ ಎಡೆ ಮಾಡಿಕೊಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು