ಇತ್ತೀಚಿನ ಸುದ್ದಿ
ಕಬಡ್ಡಿ: ಬಾಲಕ – ಬಾಲಕಿಯರ ಕ್ರೀಡಾ ವಸತಿ ನಿಲಯ ಸ್ಥಾಪನೆಗೆ ಸಚಿವರಿಗೆ ಶಾಸಕ ವೇದವ್ಯಾಸ ಕಾಮತ್ ಮನವಿ
21/09/2021, 20:13
ಮಂಗಳೂರು(reporterkarnataka.com):ಸ್ಟ್ರಾಂಗ್ ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾಂಗಣದಲ್ಲಿ ಕಬಡ್ಡಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಬಾಲಕ - ಬಾಲಕಿಯರ ಕ್ರೀಡಾ ವಸತಿ ನಿಲಯ ಮಾಡುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣ ಗೌಡ ಅವರಿಗೆ ಶಾಸಕ ವೇದವ್ಯಾಸ್ ಕಾಮತ್ ಮನವಿ ಸಲ್ಲಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಅನೇಕ ಪ್ರತಿಭಾನ್ವಿತ ಕಬಡ್ಡಿ ಪಟುಗಳು ರಾಜ್ಯ,ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಿ ರಾಜ್ಯ ಹಾಗೂ ರಾಷ್ಟ್ರಕ್ಕೆ ಕೀರ್ತಿ ತಂದಿದ್ದಾರೆ. ಆದರೆ ನಮ್ಮ ಜಿಲ್ಲಾ ಕ್ರೀಡಾ ವಸತಿ ನಿಲಯದಲ್ಲಿ ಕಬಡ್ಡಿಗೆ ಸಂಬಂಧಿಸಿದ ಯಾವುದೇ ಮಕ್ಕಳ ಸೇರ್ಪಡೆಯಾಗಿಲ್ಲ. ಹಾಗಾಗಿ ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾಂಗಣದಲ್ಲಿ ಕಬಡ್ಡಿಯ ಬಾಲಕ - ಬಾಲಕಿಯರ ಕ್ರೀಡಾ ವಸತಿ ನಿಲಯ ಮಾಡುವಂತೆ ಸಚಿವರಿಗೆ ಮನವಿಯಲ್ಲಿ ಒತ್ತಾಯಿಸಿದರು.