ಇತ್ತೀಚಿನ ಸುದ್ದಿ
ನಾಗಮಂಗಲ: ವಿದ್ಯುತ್ ಸ್ಪರ್ಶದಿಂದ ಮನೆಗೆ ಬೆಂಕಿ ಅನಾಹುತ; ಕೈಚೆಲ್ಲಿ ಕೂತ ತಾಲೂಕು ಆಡಳಿತ ವಿರುದ್ಧ ಮಾಜಿ ಸಚಿವ ಆಕ್ರೋಶ
23/09/2021, 07:57
ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ
info.reporterkarnataka@gmail.com
ನಾಗಮಂಗಲ ಪುರಸಭಾ ವ್ಯಾಪ್ತಿಯ ಒಂದನೇ ವಾರ್ಡ್ ನ ಮುಳ್ಳುಕಟ್ಟೆ ಗ್ರಾಮಕ್ಕೆ ತೆರಳುವ ಮುಖ್ಯರಸ್ತೆಯಲ್ಲಿ ವಾಸವಿರುವ ಚೆನ್ನಮ್ಮ ಅವರ ಮನೆಯಲ್ಲಿ ವಿದ್ಯುತ್ ಸ್ಪರ್ಶದಿಂದ ಬೆಂಕಿ ಅನಾಹುತ ಸಂಭವಿಸಿ ಸುಮಾರು ಒಂದು ವಾರಗಳೇ ಕಳೆದರೂ ಯಾವುದೇ ಪರ್ಯಾಯ ವ್ಯವಸ್ಥೆ ಮಾಡದಿರುವುದನ್ನು ಮಾಜಿ ಸಚಿವ ಚೆಲುವರಾಯಸ್ವಾಮಿ ಖಂಡಿಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಅವರು ತಾಲೂಕು ಆಡಳಿತ ಯಾವುದೇ ಪರಿಯಾಯ ವ್ಯವಸ್ಥೆ ಕಲ್ಪಿಸಿ ಕೊಡದಿರುವುದನ್ನು ಖಂಡಿನೀಯ. ತಮ್ಮ ಕೈಲಾದ ಸಹಾಯವನ್ನು ಮಾಡುವುದಾಗಿ ಭರವಸೆ ನೀಡಿದರು.
ಅಲ್ಲಿನ ನಿವಾಸಿಗಳ ಕಷ್ಟಕ್ಕೆ ಅರಿತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹಾಗೂ ಪುರಸಭಾ ಮುಖ್ಯಾಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಮಾಹಿತಿ ಪಡೆದು ಸೂಕ್ತ ಪರಿಹಾರ ಒದಗಿಸಿ ಕೊಡುವಂತೆ ಮನವಿ ಮಾಡಿದರು.