11:50 AM Thursday25 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

ಅಥಣಿ: ಹುಲಿ ಹುಡುಕಿಕೊಂಡು ಹೋದ ಗ್ರಾಮಸ್ಥರಿಗೆ ಸಿಕ್ಕಿದ್ದು ಕಾಡುಕೋಣ!: 4 ದಿನಗಳ ಸತತ ಕಾರ್ಯಾಚರಣೆ ಬಳಿಕ ಸೆರೆ!

25/09/2021, 14:45

ರಾಹುಲ್ ಅಥಣಿ ಬೆಳಗಾವಿ 

info.reporterkarnataka@gmail.com

ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಕಾಡು ಕೋಣವನ್ನು ಬಂಧಿಸುವಲ್ಲಿ, ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಗ್ರಾಮದಲ್ಲಿ ಕಾಡುಕೋಣ ಕಾಣಿಸಿಕೊಂಡು ಭಯ ಭೀತಿ ಉಂಟು ಮಾಡಿತ್ತು. ಸ್ಥಳಿಯರು ಹಾಗೂ ಅರಣ್ಯ ಇಲಾಖೆ ಅಧಿಕಾರಿ ನೇತೃತ್ವದಲ್ಲಿ ಕಾಡು ಕೋಣವನ್ನು ಸೆರೆಹಿಡಿಯಲಾಗಿದೆ. ಗ್ರಾಮದಲ್ಲಿ ಇತ್ತೀಚಿಗೆ ಹುಲಿ ಬಂದಿದೆಯೆಂದು ಶಂಕೆ ವ್ಯಕ್ತವಾಗಿದ್ದು, ಹುಲಿ ಹುಡುಕಾಟದಲ್ಲಿ ಕಾಡುಕೋಣ ಪತ್ತೆಯಾಗಿದೆ. ಹರಸಾಹಸಪಟ್ಟು ಗ್ರಾಮಸ್ಥರು ಅರಣ್ಯ ಸಿಬ್ಬಂದಿ ನೇತೃತ್ವದಲ್ಲಿ ಕಾಡುಕೋಣ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

1.5 ಟನ್ ತೂಕದ ಬೃಹತಾಕಾರದ ಕಾಡುಕೋಣ ಗ್ರಾಮದಲ್ಲಿ ಕಾಣಿಸಿಕೊಂಡಿತ್ತು, ಹಲವಾರು ಬೆಳೆಗಳನ್ನು ನಾಶಪಡಿಸುತ್ತಿರುವ ಹಿನ್ನೆಲೆಯಲ್ಲಿ, ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಮೈಸೂರಿನ ಮೃಗಾಲಯದ

ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಬೆಳಗಾವಿ ಅರಣ್ಯ ಇಲಾಖೆ ಅರಣ್ಯಾಧಿಕಾರಿಗಳಾದ ಅಂಥೋನಿ ಮರಿಯಪ್ಪ, ಮತ್ತು ಪ್ರಶಾಂತ್ ಗಾಣಿಗೇರ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿಗಳು ಸತತ ನಾಲ್ಕು ದಿನ ಕಾರ್ಯಾಚರಣೆ ನಡೆಸಿ ಕಾಡು ಕೋಣವನ್ನು ಸೆರೆಹಿಡಿದಿದ್ದಾರೆ. 

ಈ ಭಾಗದಲ್ಲಿ ಕಾಡುಕೋಣ ಕಾಣಿಸಿಕೊಳ್ಳುವುದು ಅಪರೂಪ. ಸುತ್ತಮುತ್ತ 100 ಕಿಲೋಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಕಾಡುಕೋಣ ಕಾಣಿಸಿಸುದಿಲ್ಲ, ಖಾನಾಪುರ ಕಾಡಿನಲ್ಲಿ ಕಾಡು ಕೋಣಗಳಿವೆ, ಆದರೂ ಅಥಣಿ ತಾಲೂಕಿನ ಬಯಲುಸೀಮೆಯಲ್ಲಿ ಕಾಡುಕೋಣ ಬಂದಿರೋದು ಅಪರೂಪದ ಘಟನೆಯೆಂದು ಅಥಣಿ ಅರಣ್ಯ ಇಲಾಖೆ ಪ್ರಶಾಂತ ಗಾಣಿಗೇರ್ ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಂಡರು. ಸದ್ಯ ಕಾಡುಕೋಣ ಆರೋಗ್ಯವಂತ ಆಗಿದೆ, ಮೈಸೂರು ಮೃಗಾಲಯಕ್ಕೆ ಕಾಡುಕೋಣವನ್ನು ರವಾನೆ ಮಾಡಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು