2:43 AM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ಇಚ್ಛಾಶಕ್ತಿ ಮತ್ತು ಅವಕಾಶಗಳನ್ನು ಅಳವಡಿಸಿಕೊಳ್ಳಿ: ಮಂಗಳೂರು ವಿವಿ ಕುಲಪತಿ ಪ್ರೊ.ಯಡಪಡಿತ್ತಾಯ ವಿದ್ಯಾರ್ಥಿಗಳಿಗೆ ಕರೆ

25/09/2021, 13:33

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ, ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ  ಸಹ ಭಾಗಿತ್ವದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆಯು ನಗರ ಕೆನರಾ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಜರುಗಿತು. 




ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.  ಪಿ. ಎಸ್. ಯಡಪಡಿತ್ತಾಯ  ಗಿಡ ನೆಡುವ ಮೂಲಕ  ಕಾರ್ಯಕ್ರಮವನ್ನು ಉದ್ಘಾಟಿಸಿದರು. 

ಮುಖ್ಯ ಅತಿಥಿಯಾಗಿ ಅವರು ಮಾತನಾಡಿ, ನಮ್ಮ ಜೀವನದಲ್ಲಿ ಇಚ್ಛಾಶಕ್ತಿ, ಸಾಮರ್ಥ್ಯ, ಹಾಗೂ ಅವಕಾಶಗಳನ್ನು ಅವಳಡಿಸಿಕೊಂಡು ನಡೆಯಿರಿ, ಯಶಸ್ಸು ನಿಮ್ಮದಾಗುತ್ತದೆ. ರಾಷ್ಟ್ರೀಯ ಸೇವಾ ಯೋಜನೆ ಜೀವನದ  ಮೌಲ್ಯಗಳನ್ನು ತಿಳಿಸಿಕೊಡುತ್ತದೆ. ಪಠ್ಯಕ್ರಮದ ಜೊತೆ ಸೇವೆಯನ್ನು ಮೈಗೂಡಿಸಿಕೊಳ್ಳಿ. ಸಾಂಸ್ಥಿಕ,  ಸಾಮಾಜಿಕ ಜವಾಬ್ದಾರಿಯನ್ನು ಕೆನರಾ ಕಾಲೇಜಿನ ವಿದ್ಯಾರ್ಥಿಗಳು ಹೊಂದಿರುವುದು ಹೆಮ್ಮೆಯ ವಿಷಯ ಎಂದರು. 

ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯಧಿಕಾರಿ ಡಾ. ಕಿಶೋರ್ ಮಾತನಾಡಿ, ಬೇರೆಯವರ ಮುಖದಲ್ಲಿ ನಗು ತರಿಸುವುದು ಶ್ರೇಷ್ಠ ಕೆಲಸ ಹಾಗೂ ಇನ್ನೊಬ್ಬರಿಗೋಸ್ಕರ  ಬದುಕುವ  ಬದುಕು  ಅಮೂಲ್ಯ ವಾದದ್ದು ಎಂದು ಹೇಳಿದರು.


ಕಾರ್ಯಕ್ರಮದ ಆಯೋಜಕರಾದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ ಅವಕಾಶಗಳನ್ನು ಬಳಸಿ ಕೊಳ್ಳಿ. ಸಮಾಜದಲ್ಲಿ ಉತ್ತಮ ವ್ಯಕ್ತ್ತಿಗಳಾಗಿ ಬಾಳಲು ರಾ.ಸೆ.ಯೋ ಉತ್ತಮ ವೇದಿಕೆ ಎಂದರು 


ಅಧ್ಯಕ್ಷತೆಯನ್ನು ಕೆನರಾ ಹೈಸ್ಕೂಲ್ ಅಸೋಸಿಯೇಷನ್ ನ ಕಾರ್ಯದರ್ಶಿ ಎಂ. ರಂಗನಾಥ್ ಭಟ್ ವಹಿಸಿದ್ದರು. 


ಕೆನರಾ ಕಾಲೇಜಿನ ಪ್ರಿನ್ಸಿಪಾಲ್ ಡಾ. ಪ್ರೇಮಲತಾ ವಿ., ಕೆನರಾ ಕಾಲೇಜಿನ ರಾ.ಸೆ.ಯೋ ಯೋಜನಾಧಿಕಾರಿಗಳಾದ ಸೀಮಾ ಪ್ರಭು ಹಾಗೂ ಕಾವ್ಯಶ್ರೀ ಕೆ. ಉಪಸ್ಥಿತರಿದ್ದರು.



ಕರ್ನಾಟಕ ಸರಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯೆನಪೋಯ ವಿಶ್ವವಿದ್ಯಾನಿಲಯ ಕೊಡಮಾಡುವ ಯುವ ಸೇನಾ ಪ್ರಶಸ್ತಿಯನ್ನು ಪಡೆದ ಕಾಲೇಜಿನ ವಿದ್ಯಾರ್ಥಿ  ಅಭಿನ್ ಬಂಗೇರ ಅವರನ್ನು ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು