4:09 PM Tuesday19 - March 2024
ಬ್ರೇಕಿಂಗ್ ನ್ಯೂಸ್
ಲೋಕಸಭಾ ಚುಣಾವಣೆ: ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಪೂರ್ವಾನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಸೂಚನೆ ದೇವರಮನೆಯಲ್ಲಿ ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ಪ್ರವಾಸಿಗರು ಮೂಡಿಗೆರೆ: ಇಬ್ಬರು ಬಿಜೆಪಿ ಮುಖಂಡರ ಅಮಾನತು ಆದೇಶ ವಾಪಸ್; ಭಿನ್ನಮತ ಉಪಶಮನಕ್ಕೆ ಹಿರಿಯ… ಭಾರತದ ಕಾರು ಮಾಲೀಕರ ನೆಚ್ಚಿನ ಸೂಪರ್ ಆ್ಯಪ್ ಪಾರ್ಕ್+: ಪ್ರಸ್ತುತ ದೇಶದಲ್ಲಿ 1.5… ಕರ್ನಾಟಕವನ್ನು ಲೂಟಿಕೋರರಿಂದ ರಕ್ಷಿಸುತ್ತೇನೆ: ಕಲಬುರಗಿ ಸಂಕಲ್ಪ ಸಮಾವೇಶದಲ್ಲಿ ಪ್ರಧಾನಿ ಮೋದಿ ಘೋಷಣೆ ದೇಶದ ಗದ್ದುಗೆಗೆ ಬಿಗ್ ಫೈಟ್: ಮತ್ತೊಮ್ಮೆ ಮೋದಿ- ರಾಹುಲ್ ಮುಖಾಮುಖಿ; ರಾಜ್ಯದಲ್ಲಿ ಏ.26… ಸಂಸತ್ ಚುನಾವಣೆಯ ದಿನಾಂಕ ನಾಳೆ ಪ್ರಕಟ: ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಲಿದ್ದಾರೆ ಚೀಫ್ ಎಲೆಕ್ಷನ್… ಕಡೂರಿಗೆ ಆಗಮಿಸಿದ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ: ಮೊಮ್ಮಗ ಪ್ರಜ್ವಲ್ ಪರ… ಹಿಂದುತ್ವ ಮತ್ತು ಅಭಿವೃದ್ಧಿಗೆ ನನ್ನ ಆದ್ಯತೆ: ದ.ಕ. ಲೋಕಸಭೆ ಕ್ಷೇತ್ರ ಬಿಜೆಪಿ ಅಭ್ಯರ್ಥಿ… ಮಂಗಳೂರು: ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಅಮಾನತಿಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಇತ್ತೀಚಿನ ಸುದ್ದಿ

ಇಚ್ಛಾಶಕ್ತಿ ಮತ್ತು ಅವಕಾಶಗಳನ್ನು ಅಳವಡಿಸಿಕೊಳ್ಳಿ: ಮಂಗಳೂರು ವಿವಿ ಕುಲಪತಿ ಪ್ರೊ.ಯಡಪಡಿತ್ತಾಯ ವಿದ್ಯಾರ್ಥಿಗಳಿಗೆ ಕರೆ

25/09/2021, 13:33

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ, ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ  ಸಹ ಭಾಗಿತ್ವದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆಯು ನಗರ ಕೆನರಾ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಜರುಗಿತು. 




ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.  ಪಿ. ಎಸ್. ಯಡಪಡಿತ್ತಾಯ  ಗಿಡ ನೆಡುವ ಮೂಲಕ  ಕಾರ್ಯಕ್ರಮವನ್ನು ಉದ್ಘಾಟಿಸಿದರು. 

ಮುಖ್ಯ ಅತಿಥಿಯಾಗಿ ಅವರು ಮಾತನಾಡಿ, ನಮ್ಮ ಜೀವನದಲ್ಲಿ ಇಚ್ಛಾಶಕ್ತಿ, ಸಾಮರ್ಥ್ಯ, ಹಾಗೂ ಅವಕಾಶಗಳನ್ನು ಅವಳಡಿಸಿಕೊಂಡು ನಡೆಯಿರಿ, ಯಶಸ್ಸು ನಿಮ್ಮದಾಗುತ್ತದೆ. ರಾಷ್ಟ್ರೀಯ ಸೇವಾ ಯೋಜನೆ ಜೀವನದ  ಮೌಲ್ಯಗಳನ್ನು ತಿಳಿಸಿಕೊಡುತ್ತದೆ. ಪಠ್ಯಕ್ರಮದ ಜೊತೆ ಸೇವೆಯನ್ನು ಮೈಗೂಡಿಸಿಕೊಳ್ಳಿ. ಸಾಂಸ್ಥಿಕ,  ಸಾಮಾಜಿಕ ಜವಾಬ್ದಾರಿಯನ್ನು ಕೆನರಾ ಕಾಲೇಜಿನ ವಿದ್ಯಾರ್ಥಿಗಳು ಹೊಂದಿರುವುದು ಹೆಮ್ಮೆಯ ವಿಷಯ ಎಂದರು. 

ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯಧಿಕಾರಿ ಡಾ. ಕಿಶೋರ್ ಮಾತನಾಡಿ, ಬೇರೆಯವರ ಮುಖದಲ್ಲಿ ನಗು ತರಿಸುವುದು ಶ್ರೇಷ್ಠ ಕೆಲಸ ಹಾಗೂ ಇನ್ನೊಬ್ಬರಿಗೋಸ್ಕರ  ಬದುಕುವ  ಬದುಕು  ಅಮೂಲ್ಯ ವಾದದ್ದು ಎಂದು ಹೇಳಿದರು.


ಕಾರ್ಯಕ್ರಮದ ಆಯೋಜಕರಾದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ ಅವಕಾಶಗಳನ್ನು ಬಳಸಿ ಕೊಳ್ಳಿ. ಸಮಾಜದಲ್ಲಿ ಉತ್ತಮ ವ್ಯಕ್ತ್ತಿಗಳಾಗಿ ಬಾಳಲು ರಾ.ಸೆ.ಯೋ ಉತ್ತಮ ವೇದಿಕೆ ಎಂದರು 


ಅಧ್ಯಕ್ಷತೆಯನ್ನು ಕೆನರಾ ಹೈಸ್ಕೂಲ್ ಅಸೋಸಿಯೇಷನ್ ನ ಕಾರ್ಯದರ್ಶಿ ಎಂ. ರಂಗನಾಥ್ ಭಟ್ ವಹಿಸಿದ್ದರು. 


ಕೆನರಾ ಕಾಲೇಜಿನ ಪ್ರಿನ್ಸಿಪಾಲ್ ಡಾ. ಪ್ರೇಮಲತಾ ವಿ., ಕೆನರಾ ಕಾಲೇಜಿನ ರಾ.ಸೆ.ಯೋ ಯೋಜನಾಧಿಕಾರಿಗಳಾದ ಸೀಮಾ ಪ್ರಭು ಹಾಗೂ ಕಾವ್ಯಶ್ರೀ ಕೆ. ಉಪಸ್ಥಿತರಿದ್ದರು.



ಕರ್ನಾಟಕ ಸರಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯೆನಪೋಯ ವಿಶ್ವವಿದ್ಯಾನಿಲಯ ಕೊಡಮಾಡುವ ಯುವ ಸೇನಾ ಪ್ರಶಸ್ತಿಯನ್ನು ಪಡೆದ ಕಾಲೇಜಿನ ವಿದ್ಯಾರ್ಥಿ  ಅಭಿನ್ ಬಂಗೇರ ಅವರನ್ನು ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು