5:00 PM Thursday25 - April 2024
ಬ್ರೇಕಿಂಗ್ ನ್ಯೂಸ್
ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ…

ಇತ್ತೀಚಿನ ಸುದ್ದಿ

ಮಂಗಳೂರು: ಭಾರತ್‌ ಬಂದ್ ಬೆಂಬಲಿಸಿ  ಬಂದರು ಶ್ರಮಿಕರ‌‌ ಸಂಘದಿಂದ ಪ್ರತಿಭಟನೆ

27/09/2021, 17:16

ಮಂಗಳೂರು(reporterkarnataka.com): ದೇಶವ್ಯಾಪಿ ಭಾರತ ಬಂದ್ ಬೆಂಬಲಿಸಿ ಮಂಗಳೂರಿನ ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಸೋಮವಾರ ಕಾರ್ಮಿಕರು ಕೆಲ‌ ಸಮಯ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.


ಪ್ರತಿಭಟನೆ ಉದ್ದೇಶಿಸಿ‌ ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕ ಫೆಡರೇಶನ್ ರಾಜ್ಯ ಅಧ್ತಕ್ಷ ಹಾಗೂ‌ ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಮಹಾಂತೇಶ ಮಾತನಾಡಿ, ಕಳೆದ‌ 10 ತಿಂಗಳಿಂದ‌ ಮೂರು ಕೃಷಿ‌ ಕಾನೂನುಗಳ ವಿರುದ್ದ ರೈತರು ದೆಹಲಿ ಸುತ್ತಮುತ್ತ ಹೋರಾಟ ನಿರತರಾಗಿದ್ದಾರೆ. ‌ಆದರೆ ನರೇಂದ್ರ‌ ಮೋದಿ‌ ನೇತೃತ್ವದ ಬಿಜೆಪಿ ಸರ್ಕಾರ ರೈತರ ಜತರ ಮಾತುಕತೆ ನಡೆಸದೆ ಹೋರಾಟವನ್ನು ಹತ್ತಿಕ್ಕಲು ಹಲವು ಯತ್ನಗಳನ್ನು ನಡೆಸಿರುವುದು ಖಂಡನಾರ್ಹ. ಈ ನೂತನ ಕೃಷಿ‌ ಕಾನೂನುಗಳು ಕೃಷಿ‌ ಕ್ಷೇತ್ರದ ಕಂಪನೀಕರಣಕ್ಕೆ ಅವಕಾಶ ನೀಡಲಿವೆ ಇದರಿಂದ ಫಲವತ್ತಾದ ಕೃಷಿ‌ಭೂಮಿ ಕಾರ್ಪೊರೇಟ್ ಕೈ ವಶವಾಗಲಿದೆ. ಇದರಿಂದ ಭವಿಷ್ಯದಲ್ಲಿ ದೇಶದಲ್ಲಿ ಆಹಾರ ಸಮಸ್ಯೆ ಎದುರಿಸಲಿದೆ. ಕೋಟ್ಯಂತರ ಜನರು ಬೆಲೆ ಏರಿಕೆ ಹಾಗೂ ಹಸಿವಿನಿಂದ 

ತತ್ತರಿಸಲಿದ್ದಾರೆ. ಹೀಗಾಗಿ ದೇಶದ‌ಭವಿಷ್ಯದ ದೃಷ್ಟಿಯಿಂದ ರೈತರ ಈ‌ ಹೋರಾಟವನ್ನು ಕಾರ್ಮಿಕರು ಬೆಂಬಲಿಸಬೇಕು ಎಂದು ಕರೆ ನೀಡಿದರು.

ಮತ್ತೊಂದು ಕಡೆ ದೇಶದಲ್ಲಿ ಜಾರಿಯಲ್ಲಿದ್ದ 29 ಕಾರ್ಮಿಕ‌ ಕಾನೂನುಗಳನ್ನು ನಾಲ್ಕು ಸಂಹಿತೆಗಳನ್ನಾಗಿ ರೂಪಿಸಿದೆ. ಇದರಿಂದ ಸ್ವಾತಂತ್ರ್ಯ ಪೂರ್ವದಿಂದಲೂ ಜಾರಿಯಲ್ಲಿದ್ದ ಹಲವು ಹಕ್ಕುಗಳು ಮತ್ತು ಸಾಮಾಜಿಕ ಸುರಕ್ಷತೆಗಳಿಂದ ಕಾರ್ಮಿಕರು ವಂಚಿತರಾಗಲಿದ್ದಾರೆ. ಈ ಹಿನ್ನಲೆಯಲ್ಲಿ ರೈತ ಕಾರ್ಮಿಕರ‌ ಈ‌ ಐಕ್ಯ ಚಳವಳಿ ‌ಮೂಲಕ ಈ ನೀತಿಗಳನ್ನು ಹಿಮ್ಮೆಟ್ಟಿಸಲು ಅವರು ಕರೆ ನೀಡಿದರು.

ಬಂದರು ಶ್ರಮಿಕರ‌ ಸಂಘದ ಅಧ್ಯಕ್ಷ

ವಿಲ್ಲಿ ವಿಲ್ಸನ್, ಕಾರ್ಯದರ್ಶಿ ಇಮ್ತೀಯಾಜ್, ಆದಿವಾಸಿ ಹಾಗೂ ದಲಿತ ಹಕ್ಕುಗಳ‌ ಸಮಿತಿಯ ಯೋಗಿಶ್ ಜಪ್ಪಿನ ಮೊಗರು, ಹರೀಶ ಕೆರೆಬೈಲ್, ಹಂಜಾ ತಂದೊಲಗಿ, ಸಿದ್ದಿಕ್ ಫಾರುಕ್ ಉಳ್ಳಾಲ, ಮಜೀದ್ ಉಳ್ಳಾಲ, ಮಾಧವ ಕಾವೂರು, ಮೊಯಿದಿನ್ ಕಲ್ಕಟ್ಟ,ಯಲ್ಲಪ್ಪ, ಡಿವೈಎಫ್ಐ ಮುಖಂಡರಾದ ಎ.ಬಿ ನೌಶಾದ್, ಹನೀಫ್ ಬೆಂಗ್ರೆ, ಅಸ್ಲಾಂ ಬೆಂಗ್ರೆ ಮೊದಲಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು