4:08 PM Friday19 - April 2024
ಬ್ರೇಕಿಂಗ್ ನ್ಯೂಸ್
ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ…

ಇತ್ತೀಚಿನ ಸುದ್ದಿ

ತಪ್ಪು ಕಲ್ಪನೆಯಿಂದ ಭಾರತ ಬಂದ್ ಮಾಡಲಾಗಿದೆ, ಕೃಷಿ ಕಾಯ್ದೆಯಿಂದ ರೈತರಿಗೆ ಅನುಕೂಲವಾಗಲಿದೆ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ

27/09/2021, 17:09

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೃಷಿ ಕಾನೂನು ರೈತರಿಗೆ ಅನುಕೂಲ ಮಾಡಲೆಂದು 
ಕೇಂದ್ರ ಸರಕಾರ ರೂಪಿಸಿದೆ. ಭಾರತ ಬಂದ್ ಮಾಡಿರುವುದು ತಪ್ಪು ಕಲ್ಪನೆಯಿಂದ ಎಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷಣ ಸವದಿ ಅಭಿಪ್ರಾಯಪಟ್ಟರು.
ಅಥಣಿ ಪಟ್ಟಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕೃಷಿ ಕಾನೂನು ರೈತರಿಗೆ ಅನುಕೂಲ ಮಾಡಲೆಂದು ಸರ್ಕಾರ ರೂಪಿಸಿದೆ.
ದಲ್ಲಾಳಿಗಳಿಗೆ ಬಾರಿ ನಷ್ಟವಾಗುವುದರಿಂದ ತಪ್ಪು ಸಂದೇಶ ಸಾರುತ್ತಿದ್ದಾರೆ. 2008ರಿಂದ ಕರ್ನಾಟಕದಲ್ಲಿ ಈ ಕಾನೂನು ಜಾರಿ ಇದೆ. ಕೇಂದ್ರ ಸರ್ಕಾರ ಈಗಷ್ಟೇ ಕಾನೂನು ತಿದ್ದುಪಡಿ ಮಾಡಿದೆ ಎಂದು ಅವರು ನುಡಿದರು.
ಹರಿಯಾಣ, ಉತ್ತರ ಪ್ರದೇಶ, ಜಾರ್ಖಂಡ್ ರಾಜ್ಯದಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಾಗಿದೆ. ರೈತರನ್ನು ಅವರ ಕಪಿಮುಷ್ಟಿಯಲ್ಲಿ ಇಟ್ಟುಕೊಂಡಿದ್ದಾರೆ. ಅವರಿಗೆ ಭಾರಿ ನಷ್ಟ ಸಂಭವಿಸುವುದರಿಂದ ಕೃಷಿ ಕಾನೂನು ಬಗ್ಗೆ ತಪ್ಪು ಸಂದೇಶ ಸಾರುತ್ತಿದ್ದಾರೆ ಎಂದರು.
ರೈತರಿಗೆ ಅನ್ಯಾಯವಾಗುತ್ತದೆ ಎಂದಾದರೆ ಬಹಿರಂಗ ಸವಾಲಕ್ಕೆ ಬರಲಿ. ಯಾರಾದರೂ ಸಾಬೀತುಪಡಿಸಿದರೆ ಕಾನೂನನ್ನು ಹಿಂಪಡೆಯುತ್ತೇವೆ ಎಂದು ಸವದಿ ಪ್ರತಿಕ್ರಿಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು