11:00 PM Wednesday24 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ…

ಇತ್ತೀಚಿನ ಸುದ್ದಿ

ಗುಂಡ್ಮಿ: ಭಗವತಿ ಜ್ಞಾನ ವಿಕಾಸ ಕೇಂದ್ರದಲ್ಲಿ ಮಹಿಳಾ ವಿಚಾರಗೋಷ್ಠಿ

30/09/2021, 08:42

ಕುಂದಾಪುರಕ್ಕೆ(reporterkarnataka.com): ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್(ರಿ ) ಬ್ರಹ್ಮಾವರ ಹಾಗೂ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಗುಂಡ್ಮಿ  ಶ್ರೀ ಭಗವತಿ ಅಮ್ಮ ದೇವಸ್ಥಾನದಲ್ಲಿ ಭಗವತಿ ಜ್ಞಾನ ವಿಕಾಸ ಕೇಂದ್ರದಲ್ಲಿ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ನಿವೃತ್ತ ಶಿಕ್ಷಕ ರಾಮಚಂದ್ರ ಐತಾಳ್ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ನಾಗರತ್ನ ಹೇರಳೆ ಅವರು ಕುಟುಂಬ ನಿರ್ವಹಣೆಯಲ್ಲಿ ಮಹಿಳೆ ಮತ್ತು ಪುರುಷರ ಪಾತ್ರ ಏನು, ಮಕ್ಕಳಿಗೆ ಸಂಸ್ಕಾರವನ್ನು ನೀಡುವಲ್ಲಿ ತಾಯಿಯ ಪಾತ್ರ ಏನು? ಮಕ್ಕಳನ್ನು ಹೆಣ್ಣು ಮತ್ತು ಗಂಡು ಎಂಬ ಭೇದಭಾವವಿಲ್ಲದೆ ಬೆಳೆಸಬೇಕು ಎಂದು ಹೇಳಿದರು. 

ಮುಖ್ಯ ಅತಿಥಿಗಳಾಗಿ ಆಗಮಿಸಿದ ಬ್ರಹ್ಮಾವರ ತಾಲೂಕು ಯೋಜನಾಧಿಕಾರಿ ದಿನೇಶ್ ಶೇರಿಗಾರ್ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ತಿಳಿಸುತ್ತಾ ಸದಸ್ಯರು ವ್ಯವಹಾರದಲ್ಲಿ ಶಿಸ್ತನ್ನು ಯಾವ ರೀತಿ ಬೆಳೆಸಿಕೊಳ್ಳಬೇಕು ಎಂಬುದರ ಬಗ್ಗೆ ಅರಿವು ನೀಡಿದರು. ಇನ್ನೋರ್ವ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಲತಾ ಹೆಗ್ಡೆ ಅವರು ಮಹಿಳೆಯರು ಸಂಸ್ಕಾರಯುತವಾಗಿ ಯಾವ ರೀತಿ ಕುಟುಂಬವನ್ನು ನಡೆಸಿ ಕೊಂಡು ಹೋಗ ಬೇಕು ಎನ್ನುವುದರ ಬಗ್ಗೆ ತಿಳಿಸಿದರು. 

ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಕನಕ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಲಯದ ಅಧ್ಯಕ್ಷರಾದ ರಾಧಾ ಹಾಗೂ ಕೇಂದ್ರದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು. 

ಕಾರ್ಯಕ್ರಮವನ್ನು ಬ್ರಹ್ಮಾವರ ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ
ನೇತ್ರಾವತಿ ನಿರೂಪಿಸಿ, ವಲಯದ ಮೇಲ್ವಿಚಾರಕರ ನಾಗೇಂದ್ರ ಸ್ವಾಗತಿಸಿದರು. ಶಶಿಕಲಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು