6:53 PM Friday19 - April 2024
ಬ್ರೇಕಿಂಗ್ ನ್ಯೂಸ್
ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ…

ಇತ್ತೀಚಿನ ಸುದ್ದಿ

ಸಾಧನಾ ಜಿ. ಆಶ್ರೀತ್ ರಿಗೆ ರಾಜ್ಯಮಟ್ಟದ ಗೋಲ್ಡನ್ ವುಮೆನ್ಸ್ ಅಚೀವರ್ಸ್ ಅವಾರ್ಡ್

30/09/2021, 08:53

ಕಾರ್ಕಳ(reporterkarnataka.com):  ಕಾರ್ಕಳ ಸುಮೇಧ ಫ್ಯಾಶನ್ ಇನ್ಸ್ ಟ್ಯೂಟ್ ಹಾಗೂ 
ಸುಮೇಧ ಡಿಸೈನರ್ ಬುಟಿಕ್ ಸಂಸ್ಥಾಪಕಿ  ಸಾಧನ ಜಿ. ಆಶ್ರೀತ್ ಅವರಿಗೆ ಗೋಲ್ಡನ್ ವುಮೆನ್ಸ್ ಅಚೀವರ್ಸ್ ಅವಾರ್ಡ್ ದೊರೆತಿದೆ.

ಸರ್ವಸಂತ್ರಪ್ತಿ ವೆಂಚರ್ಸ್ ಬೆಂಗಳೂರು ಆಶ್ರಯದಲ್ಲಿ ಬೆಂಗಳೂರಿನ ಆರ್ ಜಿ ರೋಯಲ್ ಹೋಟೆಲ್ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಚಿತ್ತಾರ ಮ್ಯಾಗಜೀನ್ ಸಂಪಾದಕ ಶಿವಕುಮಾರ್ ಪ್ರಶಸ್ತಿ ನೀಡಿ ಗೌರವಿಸಿದರು.

ಫ್ಯಾಶನ್ ಡಿಸೈನಿಂಗ್ ಕಾಲೇಜ್ ಗಳಲ್ಲಿ 12 ವರ್ಷದ ಅನುಭವಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿದ್ದು, ಧಾರಾವಾಹಿಗಳಿಗೆ, ಪ್ಯಾಷನ್ ಇವೆಂಟ್ ಗಳಿಗೆ, ಕಾಸ್ಟ್ಯೂಮ್ ಡಿಸೈನರಾಗಿ ಮತ್ತು ಅನೇಕ ಹೆಣ್ಣು ಮಕ್ಕಳಿಗೆ ಉಚಿತ ತರಬೇತಿಗಳನ್ನು ನೀಡಿ ಅವರಲ್ಲಿ ಆತ್ಮ ಸ್ಥೈರ್ಯ ಕೊಟ್ಟು  ಸ್ವಂತ ಉದ್ಯೋಗ ಮಾಡಲು ಅವಕಾಶ ಮಾಡಿಕೊಡುತ್ತಿದ್ದಾರೆ. 

ತಮ್ಮಲ್ಲಿ ಕಲಿತ ಅನೇಕ ವಿದ್ಯಾರ್ಥಿಗಳಿಗೆ ಹಾಗೂ ಫ್ಯಾಶನ್ ಡಿಸೈನಿಂಗ್ ಆಗಿರುವಂತಹ ಬೇರೆ ಕಾಲೇಜು ವಿದ್ಯಾರ್ಥಿಗಳಿಗೆ ಉದ್ಯೋಗ ದೊರಕಿಸಿ ಕೊಡುವ ಜೊತೆಗೆ ಅನೇಕ ಮಹಿಳೆಯರಿಗೆ ತಮ್ಮಲ್ಲಿ ಉದ್ಯೋಗವನ್ನು ನೀಡಿರುತ್ತಾರೆ  ಇವರ ಸಾಧನೆಗೆ ಗುರುತಿಸಿ ಇವರಿಗೆ  ಬೆಂಗಳೂರಿನಲ್ಲಿ ನಡೆದ ಗೋಲ್ಡನ್ ವುಮೆನ್ಸ್ ಅಚೀವರ್ಸ್ ಅವಾರ್ಡ್ (Golden Women’s Achievers Award) ಕಾರ್ಯಕ್ರಮದಲ್ಲಿ ಇವರಿಗೆ ಗೋಲ್ಡನ್ ವುಮೆನ್ಸ್ ಅಚಿವರ್ಸ್ ಅವರ್ಡ್ ಪ್ರಶಸ್ತಿ ದೊರಕಿದೆ ಹಾಗೂ ಇವರು ಹೆಣ್ಣು ಮಕ್ಕಳಿಗೆ ಮಾದರಿಯಾಗಿದ್ದಾರೆ

ಈ ಸಂದರ್ಭದಲ್ಲಿ ಕಾರ್ಲ್ಟನ್ ಇವೆಂಟ್ ಮ್ಯಾನೇಜ್ಮೆಂಟ್ ಮುಖ್ಯಸ್ಧ ಬಸವರಾಜ್ , ಕಿರುತೆರೆ ನಟ ನಟಿ ಯರು ನಿರ್ದೇಶಕರು , ಕಿರುತೆರೆಯ ತಾಂತ್ರಿಕ ವರ್ಗದವರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು