9:22 AM Friday19 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ…

ಇತ್ತೀಚಿನ ಸುದ್ದಿ

2 ವರ್ಷ ಕಳೆದರೂ ಅಲುಗಾಡದ ಫೈಲ್:  ಪತಿಯನ್ನು ಕಳೆದುಕೊಂಡ ಮಹಿಳಾ ಸಿಬ್ಬಂದಿಗೂ ಕರುಣೆ ತೋರದ ಶಿಕ್ಷಣ ಇಲಾಖೆ; ಹೊಸ ಬೆಳಕಿನ ನಿರೀಕ್ಷೆಯಲ್ಲಿ ಸುಜಾತಾ ಸಾರವಾಡ

01/10/2021, 19:49

ಭೀಮಣ್ಣ ಪೂಜಾರಿ ಶಿರನಾಳ ಬೆಂಗಳೂರು

info.reporterkarnataka@gmail.com

ರಾಜ್ಯ ಶಿಕ್ಷಣ ಇಲಾಖೆಯಲ್ಲಿ ದುಡಿಯುತ್ತಿರುವ ಮಹಿಳಾ ಸಿಬ್ಬಂದಿಯೊಬ್ಬರು ವಿಜಯಪುರದಿಂದ ದಿನಾ ಇಂಡಿ ತಾಲೂಕಿನ ಹಳಗುಣಕಿಗೆ ನೌಕರಿಗಾಗಿ ಆಗಮಿಸುತ್ತಿದ್ದು, ತನ್ನ ಸೇವೆಯನ್ನು ವಿಜಯಪುರದ ಬಾಲಕರ ಪದವಿಪೂರ್ವ ಕಾಲೇಜಿಗೆ ವಿಲೀನಗೊಳಿಸುವಂತೆ ಆಗ್ರಹಿಸುತ್ತಿದ್ದರೂ ಶಿಕ್ಷಣ ಇಲಾಖೆ ಮಾತ್ರ ಘೋರ ಮೌನ ವಹಿಸಿದೆ. ಪತಿಯನ್ನು ಕಳೆದುಕೊಂಡು ಅನುಕಂಪದ ಆಧಾರದಲ್ಲಿ ದಿನದ ತುತ್ತಿಗಾಗಿ ದುಡಿಯುತ್ತಿರುವ ಮಹಿಳಾ ಸಿಬ್ಬಂದಿಗೆ 45 ಕಿಮೀ ದೂರದ ಹಳಗುಣಕಿಗೆ ಹೋಗುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ.


ವಿಜಯಪುರ ಜಿಲ್ಲೆಯ ಹಳಗುಣಕಿಯ ಸರಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಕಳೆದ ಹಲವು ವರ್ಷಗಳಿಂದ ಡಿ ದರ್ಜೆ ನೌಕರರಾಗಿ ದುಡಿಯುತ್ತಿರುವ ಮಹಿಳೆಯೇ ಸುಜಾತಾ ಶ್ರೀಶೈಲ್ ಸಾರಾವಾಡ ಅವರು. ಕಳೆದ ಎರಡು ವರ್ಷಗಳಿಂದ ಹಳಗುಣಕಿಯ ಸರಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಡಿ ದರ್ಜೆ ನೌಕರರಾಗಿ ದುಡಿಯುತ್ತಿದ್ದಾರೆ. ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಗಂಡನ ಆಕಸ್ಮಿಕ ಸಾವಿನಿಂದ ಕಂಗೆಟ್ಟ ಸುಜಾತಾ ಅವರಿಗೆ ಅನುಕಂಪದ ಆಧಾರದ ಮೇಲೆ ನೌಕರಿ ಸಿಕ್ಕಿತ್ತು. ಆದರೆ ಗಂಡನ ಮನೆ ವಿಜಯಪುರದಲ್ಲಿರುವ ಕಾರಣ ಅವರಿಗೆ ಹಳಗುಣಕಿಯಲ್ಲಿ ಕೆಲಸ ನಿರ್ವಹಿಸುವುದು ಕಷ್ಟಸಾಧ್ಯವಾಗಿದೆ. ದಿನಾ ಅವರು 45 ಕಿಮೀ. ದೂರದ ಇಂಡಿ ತಾಲೂಕಿನಲ್ಲಿರುವ ಹಳಗುಣಕಿಗೆ ತೆರಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ವಿಜಯಪುರದ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಖಾಲಿ ಇರುವ ಡಿ ದರ್ಜೆಯ ಹುದ್ದೆಗೆ ತನ್ನನ್ನು ವಿಲೀನಗೊಳಿಸುವಂತೆ ಕೋರಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಅಂದಿನ ಶಿಕ್ಷಣ ಸಚಿವ ಸುರೇಶ್ ಕುಮಾರ್, ಸಂಸದ ರಮೇಶ್ ಜಿಗಜಿಣಗಿ ಅವರಿಗೆ ಮನವಿ ಕೂಡ ಸಲ್ಲಿಸಿದ್ದರು. ಸಚಿವರು ಹಾಗೂ ಸಂಸದರು ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ಶಿಕ್ಷಣ ಇಲಾಖೆಗೆ ಆಗ್ರಹಿಸಿದ್ದಾರೆ. ಸಂಸದ ಜಿಗಜಿಣಗಿ ಅವರು ಸಚಿವರಿಗೆ ಪತ್ರ ಕೂಡ ಬರೆದಿದ್ದರು. ಶಿಕ್ಷಣ ಸಚಿವರು ಇಲಾಖೆಗೆ ಬರೆದಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರು ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರಿಗೆ ಪದವಿಪೂರ್ವ ಶಿಕ್ಷಣ ಇಲಾಖೆಗೆ ನಿಯುಕ್ತಿಗೊಳಿಸಲು ನಿಯಮದಲ್ಲಿ ಅವಕಾಶವಿದೆಯೇ ಎಂದು ಕೇಳಿದ್ದಾರೆ. ಕಾನೂನು ಪ್ರಕಾರ ಅವಕಾಶವಿದೆ ಎಂದು ತಿಳಿದು ಬಂದಿದೆ. ಆದರೆ ಈ ಫೈಲ್ ಮಾತ್ರ ಬೆಂಗಳೂರಿನ ವಿಧಾನಸೌಧ ಪಕ್ಕದಲ್ಲಿರುವ ವಿಕಾಸಸೌಧ ಬಳಿ ಇರುವ ಎಂ.ಎಸ್. ಬಿಲ್ಡಿಂಗ್ ನಲ್ಲಿ ಗಟ್ಟಿಯಾಗಿ ಕುಳಿತಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರ ಕಚೇರಿ ಇರುವುದು ಇದೇ ಕಟ್ಟಡದಲ್ಲಿ. ಇಲ್ಲಿ ಈ ಫೈಲಿಗೆ ಮೋಕ್ಷ ದೊರೆತರೆ ಬಡಪಾಯಿ ಸುಜಾತಾ ಸಾರಡ್ಕ ಅವರ ಬದುಕಿನಲ್ಲಿ ಹೊಸಬೆಳಕು ಚೆಲ್ಲಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು