10:36 PM Thursday18 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ…

ಇತ್ತೀಚಿನ ಸುದ್ದಿ

ಮೀನು ವ್ಯಾಪಾರಿಯ ಕಿಡ್ನಾಪ್: 15 ಲಕ್ಷ ರೂ. ಬೇಡಿಕೆ; ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲು

03/10/2021, 23:48

ಮಲ್ಪೆ(reporterkarnataka.com):  ಮೀನು ವ್ಯಾಪಾರಿಯೊಬ್ಬರನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಸಾಧೀಕ್ ಎಂಬವವರು ಈ ಕುರಿತು ದೂರು ನೀಡಿದ್ದಾರೆ.

ಚಿಕ್ಕಮಗಳೂರಿನ ಕೊಪ್ಪದಿಂದ ತನ್ನ ತಮ್ಮ ಸುಲೈಮಾನ್  ಮೀನು ಲಾರಿಯ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. ಸೆ.30ರಂದು ಬೆಳಗ್ಗೆ 9.00 ಗಂಟೆಗೆ ಕೊಪ್ಪದ ಮನೆಯಿಂದ ಮಲ್ಪೆಗೆ ಮೀನು ಲಾರಿಯ ಚಾಲಕ ಕೆಲಸಕ್ಕೆ ಬಂದಿದ್ದ. ಅ.1ರಂದು ತನ್ನ ಇನ್ನೊಬ್ಬ ತಮ್ಮ ಶಂಶುದ್ದೀನ್ ಎಂಬಾತ ಸುಲೈಮಾನ್ ಗೆ ಕರೆ ಮಾಡಿದಾಗ ಪೋನ್ ಕರೆ ಸ್ವೀಕರಿಸಲಿಲ್ಲ. ಸೆ.2ರಂದು ಬೆಳಗ್ಗೆ 9.00 ಗಂಟೆಗೆ ಸುಲೈಮಾನ್ ನ ಮೊಬೈಲ್ ನಂಬ್ರದಿಂದ ಶಂಶುದ್ದೀನ್ ಗೆ ಕರೆ ಬಂತು. ಆ ಕಡೆಯಿಂದ ಸಮೀರ್ ಎಂಬವನು ಮಾತನಾಡಿ, ಸುಲೈಮಾನ್ ನಮ್ಮ ಜೊತೆಗೆ ಇದ್ದಾನೆ. ಆತನನ್ನು ಬಿಡಬೇಕಾದರೆ ನಮಗೆ 15 ಲಕ್ಷ ಹಣ ಕೊಡಬೇಕು. ಆತನನ್ನು ನಾವು ಸೆ.1ರಂದು ಮಲ್ಪೆಯಿಂದ ಅಪಹರಣ ಮಾಡಿದ್ದೇವೆ ಎಂದು ಹೇಳಿದ್ದನು. ನಂತರ ನಾವು ಮಲ್ಪೆಗೆ ಬಂದು ತಮ್ಮ ಸುಲೈಮಾನ್ ಬಗ್ಗೆ ವಿಚಾರಿಸಿದಾಗ ಸುಲೈಮಾನ್ ಮೀನು ಲಾರಿ ಚಾಲಕ ಕೆಲಸದ  ಜೊತೆಗೆ ಮೀನನ್ನು ಮಲ್ಪೆಯಲ್ಲಿ ತೆಗೆದುಕೊಂಡು ಕೇರಳಕ್ಕೆ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವುದಾಗಿ ತಿಳಿಸಿದರು.

ನಂತರ ಸುಲೈಮಾನ್ ಮೊಬೈಲಿಗೆ ಕರೆ ಮಾಡಿದಾಗ ಆಕರೆಯನ್ನು ಸಮೀರ್ ಎಂಬವನು ಸ್ವೀಕರಿಸಿ, ನಮಗೆ ಸುಲೈಮಾನ್ ಮೀನು ವ್ಯವಹಾರದಲ್ಲಿ 15 ಲಕ್ಷ ಹಣ ಕೊಡಬೇಕು. ಆ ಕಾರಣದಿಂದ ಅವನನ್ನು ಕೇರಳದ ಹನಸ್ ಮತ್ತು ಅವರ ಸಹೋದರರು ಅಪಹರಣ ಮಾಡಿರುತ್ತಾರೆ. ನೀವು ಬಂದು 15 ಲಕ್ಷ ಹಣ ಕೊಟ್ಟು ಕರೆದುಕೊಂಡು ಹೋಗಿ. ಇಲ್ಲದಿದ್ದರೆ ಆತನನ್ನು ಕೊಂದು ಸಮುದ್ರಕ್ಕೆ ಬಿಸಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ಸಾದಿಕ್ ಮಲ್ಪೆ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು  ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು