8:40 AM Saturday20 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ಸಂಗೀತ ವಿದ್ವಾನ್ ನಾಗನವಳಚಿಲು ಸೋಮಶೇಖರ ಮಯ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ

03/10/2021, 16:39

ಬೆಂಗಳೂರು(reporterkarnataka.com):.ಸಂಗೀತ ಕ್ಷೇತ್ರದಲ್ಲಿ ವಿಷೇಶ ಸಾಧನೆಗೈದು ನಾಡಿನ ಜನಮನ ದಲ್ಲಿ ಶಾಂತಿಯನ್ನು ಸಾರುವಲ್ಲಿ ಸುಧೀರ್ಘ ಕಾಲದಿಂದಲೂ ಕಾರ್ಯಕ್ರಮ ಗಳನ್ನು ನೀಡುತ್ತಾ ಜನಮನ್ನಣೆ ಗಳಿಸಿದ ಬಂಟ್ವಾಳ ನಾಗನವಳಚಿಲು ಸೋಮಶೇಖರ ಮಯ್ಯರಿಗೆ INDIAN EMPIRE UNIVERSITY ಯು  ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದೆ.

ಈ ಬಾರಿ ಗಾಂಧಿ ಜಯಂತಿಯಂದು ಬೆಂಗಳೂರಿನ ಸಮೀಪದ ಹೊಸೂರಿನಲ್ಲಿ ಕಾರ್ಯಕ್ರಮವು ಯುನಿವರ್ಸಿಟಿಯ ಮುಖ್ಯಸ್ಥರ ಸಮ್ಮುಖದಲ್ಲಿ ನೆರವೇರಿತು. ಪ್ರಧಾನಿ ನರೇಂದ್ರ ಮೋದಿ ಅವರು ಅಧ್ಯಕ್ಷ ರಾಗಿರುವ ಭಾರತ ಸರಕಾರದ NITI ನೀತಿ ಆಯೋಗದಡಿ ಇಂಡಿಯನ್ ಎಂಪಾಯರ್ ಯುನಿವರ್ಸಿಟಿ ಕಾರ್ಯನಿರ್ವಹಿಸುತ್ತಿದ್ದು, ಈ ಬಾರಿ ಕರ್ನಾಟಕದ 22 ಸಾಧಕರನ್ನು ಗುರುತಿಸಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದೆ. 

ಸೋಮಶೇಖರ್ ಮಯ್ಯ ಅವರು ಈಗಾಗಲೇ ಹಿಂದೂಸ್ತಾನಿ ಸಂಗೀತದಲ್ಲಿ ಕರ್ನಾಟಕ ಸರ್ಕಾರ ದಿಂದ ನಡೆಸಿರುವ ಗಾಯನ ಮತ್ತು ತಾಳ ವಾದ್ಯ ವಿಷಯಗಳೆರಡರಲ್ಲಿಯೂ ವಿದ್ವತ್ ಪದವಿ , ಅಖಿಲ ಗಂಧರ್ವ ಮಹಾವಿದ್ಯಾಲಯ ಮುಂಬಯಿ ಸಂಸ್ಥೆ ಯಿಂದ  ಗಾಯನ ಸಂಗೀತದಲ್ಲಿ ವಿಶಾರದ ಹಾಗೂ ಸ್ನಾತಕೋತ್ತರ ಪದವಿಗಳನ್ನು ಪಡೆದಿದ್ದಾರೆ. ಕರ್ನಾಟಕ ಸರ್ಕಾರ ನಡೆಸುತ್ತಿರುವ ಸಂಗೀತ ಪರೀಕ್ಷೆ ಗಳಿಗೆ ಪ್ರಾಯೋಗಿಕ ಪರೀಕ್ಷಕರಾಗಿ 1991 ರಿಂದಲೂ ನಿರಂತರವಾಗಿ  ಸೇವೆ ಸಲ್ಲಿಸುತ್ತಿದ್ದುದಲ್ಲದೇ ಸಂಗೀತ ಕಾರ್ಯಕ್ರಮಗಳನ್ನು ನೀಡುತ್ತಾ ಜನಮನ್ನಣೆಗೆ ಪಾತ್ರರಾಗಿದ್ದಾರೆ.  ಜಿಲ್ಲಾ ಹಾಗೂ  ರಾಜ್ಯ ಮಟ್ಟದಲ್ಲೂ ಪ್ರಶಸ್ತಿಗಳನ್ನು ಗೆಲ್ಲುತ್ತಾ ಬಂದಿರುತ್ತಾರೆ.

ಅನೇಕ ಪ್ರಶಸ್ತಿ ಪುರಸ್ಕಾರಗಳನ್ನು ಪಡೆದ ಇವರಿಗೆ ಕಲಾಭಿಮಾನಿ ನಾಗರಿಕ ಪುರ ಜನರು  ‘ ಗಾನಕೇಸರಿ ‘ ಬಿರುದು ನೀಡಿ ಗೌರವಿಸಿರುತ್ತಾರೆ. ಮೂಡಬಿದ್ರೆ ಯಲ್ಲಿ ಕಂದಾಯ ಅಧಿಕಾರಿ ಯಾಗಿಯೂ ಸೇವೆ ಸಲ್ಲಿಸಿದ್ದ ಇವರು ಪ್ರಸ್ತುತ ಮೂಡಬಿದ್ರೆ ಯಲ್ಲಿ ನೆಲೆಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು