11:42 AM Thursday25 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

ಮಾರಿಕುಪ್ಪಂ ಸರಕಾರಿ ಜಮೀನು ಅತಿಕ್ರಮಣ ಆರೋಪ: ನೆಲದಲ್ಲೇ ಕುಳಿತು ಜನರ ಸಮಸ್ಯೆ ಆಲಿಸಿದ ಶಾಸಕಿ ರೂಪಕಲಾ ಶಶಿಧರ್ 

04/10/2021, 12:17

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com  

ಜಿಲ್ಲೆಯ ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್‌ ಜನರ ಸಮಸ್ಯೆ ಆಲಿಸಲು ಖುದ್ದು ಗ್ರಾಮಗಳಿಗೆ ತೆರಳಿ ಜನರ ನಡುವೆ ಬರಿನಲದಲ್ಲಿ ಕುಳಿತು ಕುಂದುಕೊರತೆ ಆಲಿಸಿ ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ.

ಶಾಸಕರು, ಸಂಸದರು, ಸಚಿವರುಗಳು ಎಸಿ ರೂಮಿನಲ್ಲಿ ಕುಳಿತು ಅಲ್ಲಿಂದಲೇ ದೂರವಾಣಿ ಮೂಲಕ ಅಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆ ಪರಿಹಾರಕ್ಕೆ ಯತ್ನಿಸುವುದು ಮಾಮೂಲಿ. ಆದರೆ ಶಾಸಕರೊಬ್ಬರು ಕ್ಷೇತ್ರದ ಕಟ್ಟಕಡೆಯ ಗ್ರಾಮಕ್ಕೂ ಖುದ್ದು ತೆರಳಿ ಸಾಮಾನ್ಯರಲ್ಲಿ ಸಾಮಾನ್ಯರಂತೆ ಜನರ ನಡುವೆ ಕುಳಿತು ಸಮಸ್ಯೆ ಆಲಿಸುವುದು ಶ್ಲಾಘನೀಯ ಎಂದು ಗ್ರಾಮಸ್ಥರು ತಿಳಿಸಿದರು . 

ಸರಕಾರಿ ಜಾಗ ಅತಿಕ್ರಮ ಪರಾಮರ್ಶ: ಜಿಲ್ಲೆಯ ಮಾರಿಕುಪ್ಪಂ ಗ್ರಾಮದಲ್ಲಿ ಆಂಧ್ರ ಮೂಲದ ವ್ಯಕ್ತಿಯೊಬ್ಬರು ಸರ್ಕಾರಿ ಜಮೀನು ಅತಿಕ್ರಮಿಸಿರುವ ದೂರಿನ ಹಿನ್ನಲೆಯಲ್ಲಿ ಖುದ್ದು ಗ್ರಾಮಕ್ಕೆ ತೆರಳಿ ಜನರ ನಡುವೆ ಬರಿ ನೆಲದಲ್ಲೇ ಕುಳಿತು ಸಮಸ್ಯೆಗೆ ಪರಿಹಾರದ ಭರವಸ ನೀಡಿದ ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಕಾರ್ಯಕ್ಕೆ ಜನರಿಂದ ಪ್ರಶಂಸೆ ವ್ಯಕ್ತವಾಯಿತು. ಮಾರಿಕುಪ್ಪ ಗ್ರಾಮ ಪಂಚಾಯಿತಿಯ ನೀಲಿಗಿರಿಹಳ್ಳಿ ಗ್ರಾಮದ ಸರ್ಕಾರಿ ಸ.ನಂ .45ರಲ್ಲಿ ಸುಮಾರು 20 ಎಕರೆ ಜಮೀನನ್ನು ಆಂಧ್ರ ಮೂಲದ ವ್ಯಕ್ತಿಯೊಬ್ಬರು ಅಕ್ರಮವಾಗಿ ಅತಿಕ್ರಮಿಸಿಕೊಂಡಿರುವ ಬಗ್ಗೆ ದೂರುಗಳು ಬಂದಿದ್ದು, ಗ್ರಾಮಸ್ಥರು ಶಾಸಕರಿಗೆ ಮನವಿ ಮಾಡಿ ಗ್ರಾಮದ ಬಡವರಿಗೆ ಅನುಕೂಲ ಮಾಡಿಕೊಡಲು ಕೋರಿದ್ದರು. ಈ ಹಿನ್ನಲೆಯಲ್ಲಿ ಇಂದು ಗ್ರಾಮಕ್ಕೆ ಆಗಮಿಸಿದ ಶಾಸಕಿ ರೂಪಕಲಾ ಎಂ. ಶಶಿಧರ್‌, ನೀಲಿಗಿರಿಹಳ್ಳಿ ಗ್ರಾಮದ ವಿವಾದಿತ ಜಮೀನಿಗೆ ತೆರಳಿ ಆ ಜಮೀನಿನ ಮರವೊಂದರ ಕೆಳಗೆ ಬರಿ ನೆಲ್ಲದಲ್ಲೇ ಕುಳಿತು ಗ್ರಾಮಸ್ಥ
ರಿಂದ ವಾಸ್ತವ ಸ್ಥಿತಿಯ ಪರಾಮರ್ಶೆ ನಡೆಸಿದರು .

ಈ ಸಂದರ್ಭದಲ್ಲಿ ಗ್ರಾಮಸ್ಥರು ಸರ್ಕಾರಿ ಜಮೀನು ಬೇರೆ ರಾಜ್ಯದವರು ಅಕ್ರಮವಾಗಿ ಅತಿಕ್ರಮಿಸಿಕೊಂಡಿರುವ ಬಗ್ಗೆ ದಾಖಲೆಗಳ ಸಮೇತ ವಿವರಿಸಿದರು. ಈ ಜಮೀನಿನಲ್ಲಿ ಪುರಾತನ ದೇವಸ್ಥಾನ ಇದ್ದು ಅದನ್ನು ಬಳಸಲು ಸಹ ಆಗುತ್ತಿಲ್ಲ ಎಂದು ನೋವು ತೋಡಿಕೊಂಡರು . ಮಹಿಳೆಯರು ಮಾತನಾಡಿ ಗ್ರಾಮದಲ್ಲಿ ಸುಮಾರು ಕುಟುಂಬಗಳಿಗೆ ಸ್ವಂತ ಮನೆ ನಿವೇಶನ ಇರುವುದಿಲ್ಲ. ಈ ಸರ್ಕಾರಿ ಜಮೀನಿನಲ್ಲಿ ನಿವೇಶನ ವಿಂಗಡಿಸಿ ಪರಿಶಿಷ್ಟ ಜನಾಂಗದವರಿಗೆ ಹಾಗೂ ಬಡವರಿಗೆ ಅನುಕೂಲ ಮಾಡಿಕೊಡಲು ಕೋರಿದರು. ಶಾಸಕರು ಗ್ರಾಮಸ್ಥರ ಸಮಸ್ಯೆ ಆಲಿಸಿ ಗ್ರಾಮದ ಸರ್ಕಾರಿ ಜಮೀನನ್ನು ಯಾರೋ ಸಂಬಂಧವಿಲ್ಲದ ವ್ಯಕ್ತಿ ಅತಿಕ್ರಮಿಸಿಕೊಂಡಿದ್ದರೆ ಕಾನೂನು ರೀತಿ ಕ್ರಮ ಕೈಗೊಂಡು ಅವರನ್ನು ಹೊರ ಹಾಕಲಾಗುವುದು ಎಂದು ಭರವಸೆ ನೀಡಿದರು.

ಈ ಸರ್ಕಾರಿ ಜಮೀನನ್ನು ಅಳತೆ ಮಾಡಿಸಿ ಗಡಿ ಗರುತಿಸಲು ತಹಶೀಲ್ದಾರ್ ರವರಿಗೆ ಸೂಚಿಸಲಾಗುವುದು ಎಂದು ತಿಳಿಸಿದ ಅವರು , ನಂತರ ನಿಯಮಾನುಸಾರ ನಿವೇಶನಗಳನ್ನು ವಿಂಗಡಿಸಿ ನಿವೇಶನ ರಹಿತರಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು . ಜಮೀನು ಮಂಜೂರಿಗಾಗಿ ಅರ್ಜಿ ಹಾಕಿಕೊಂಡಿರುವವರಿಗೆ ದರಖಾಸ್ತು ಸಮಿತಿ ಸಭೆಯಲ್ಲಿ ಕಡತ ಮಂಡಿಸಿ ಜಮೀನು ಮಂಜೂರು ಮಾಡಲಾಗುವುದು ಎಂದು ತಿಳಿಸಿದರು.

ಈಗ ಉದ್ಭವವಾಗಿರುವ ಸಮಸ್ಯೆ ಬಗೆಹರಿಸಲು ಪ್ರತಿ ಹಂತದಲ್ಲೂ ತಮ್ಮ ಜೊತೆ ನಿಲ್ಲುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರುಗಳು ಹಾಗೂ ಪ್ರಮುಖ ಮುಖಂಡರು ಹಾಜರಿದ್ದರು . 

ವಂಗಸಂದ್ರ ರೈತರ ಸಮಸ್ಯೆಗೆ ಸ್ಪಂದನ; ಶಾಸಕಿ ರೂಪಕಲಾ ಎಂ ಶಶಿಧರ್‌ ಇದೇ ದಿನ ವೆಂಗಸಂದ್ರ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ರೈತರಿಂದ ಸಮಸ್ಯೆ ಆಲಿಸಿದರು. ಭೇಟಿ ಸಂದರ್ಬದಲ್ಲಿ ಬೆಂಗಳೂರು – ಚನ್ನೈ ಎಕ್ಸ್‌ಪ್ರೆಸ್‌ ರಸ್ತೆಗೆ ಭೂಸ್ವಾಧೀನವಾಗಿರುವ ರೈತರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು . ಜೀವನಾಧಾರವಾಗಿದ್ದ ಜಮೀನು ಕಳೆದುಕೊಂಡಿದ್ದು ಪರಿಹಾರ ಮೊತ್ತ ತೀರ ಕಡಿಮೆ ನೀಡಿದ್ದು , ಇದರ ಬಗ್ಗೆ ಸಂಬಂಧಪಟ್ಟವರಿಗೆ ಮಾತನಾಡಲು ರೈತರು ಕೋರಿದರು. ಇನ್ನು ಹಲವರದು ಖಾತೆ ಬದಲಾವಣೆಯಾಗದ ಪರಿಹಾರ ಹಣ ಬಂದಿಲ್ಲ ಎಂಬುದನ್ನೂ ಗಮನಕ್ಕೆ ತಂದರು . 

ಶಾಸಕರು ರೈತರ ಸಮಸ್ಯೆ ಆಲಿಸಿ ಭೂಸ್ವಾಧೀನವಾದ ಜಮೀನಿಗೆ ಪರಿಹಾರದ ಹಣ ಕಡಿಮೆ ಬಂದಿರುವ ರೈತರ ಸಂಪೂರ್ಣ ವಿವರಗಳೊಂದಿಗೆ ಮಾನ್ಯ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಪರಿಸ್ಥಿತಿ ವಿವರಿಸಿ ಪರಿಹಾರ ಹಣವನ್ನು ಹೆಚ್ಚಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ಖಾತೆ ಬದಲಾವಣೆ ಆಗದೆ ಇರುವ ಪ್ರಕರಣಗಳನ್ನು ಕೂಡಲೆ ಬಗೆಹರಿಸಲು ತಹಶಿಲ್ದಾರ್ ರವರಿಗೆ ದೂರವಾಣಿ ಕರೆ ಮಾಡಿ ಸೂಚಿಸಿದ ಅವರು , ರೈತರನ್ನು ಕಚೇರಿಗೆ ಅಲೆದಾಡಿಸಬೇಡಿ ಎಂದು ತಾಕೀತು ಮಾಡಿದರು .

ಈ ಸಂದರ್ಭದಲ್ಲಿ ವಂಗಸಂದ್ರ ಪಂಚಾಯಿತಿ ಅಧ್ಯಕ್ಷ ಶಂಕರ್‌ , ಎಪಿಎಂಸಿ ಅಧ್ಯಕ್ಷ ವಿಜಯರಾಘವ ರೆಡ್ಡಿ , ಗ್ರಾಪಂ ಸದಸ್ಯರಾದ ಅಪ್ಪಾಜಿ ಗೌಡ , ಮುರಳೀಕೃಷ್ಣ , ವೆಂಕಟರಾಮ್ , ಮುಖಂಡರಾದ ರಾಜೇಂದ್ರ , ವೆಂಕಟಾಚಲಪತಿ , ಎಚ್.ಕೃಷ್ಣಪ್ಪ , ಚಂದ್ರಶೇಖರ್ , ರವಿಕುಮಾರ್ , ರಮೇಶ್ , ವೆಂಕಟರಾಮಪ್ಪ ಸುಧಾಕರ್‌ , ಲಕ್ಷ್ಮೀಪತಿ , ಅಣ್ಣಯ್ಯ , ರಡ್ಡಪ್ಪ , ಕೃಷ್ಣಮೂರ್ತಿ , ಎಂ.ಡಿ. ನಾರಾಯಣ್ , ಬಾಲಕೃಷ್ಣ , ಪದ್ಮನಾಭರಡ್ಡಿ , ಶ್ರೀನಿವಾಸರಡ್ಡಿ , ಶ್ರೀಧರ್‌ ರೆಡ್ಡಿ , ರಾಮಕೃಷ್ಣಪ್ಪ , ಮುನಿಸ್ವಾಮಿ ಮತ್ತಿತರ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು