4:20 AM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ದಲಿತ ಹೆಣ್ಣು ಮಗಳ ಅತ್ಯಾಚಾರಗೈದು ಹತ್ಯೆ: ನಾಳೆ ಮಸ್ಕಿಯಲ್ಲಿ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

07/10/2021, 19:49

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಸುರಪುರ ತಾಲೂಕಿನ ಚೌಡೇಶ್ವರಿಹಾಳ ಗ್ರಾಮದಲ್ಲಿ ಮಾದಿಗ ಸಮುದಾಯದ ಹೆಣ್ಣು ಮಗಳ ಮೇಲೆ ಅತ್ಯಾಚಾರ ನಡೆಸಿ ಪೆಟ್ರೋಲ್ ಹಾಕಿ ಸುಟ್ಟಿರುವ ಘಟನೆಯ ವಿರುದ್ಧ ಭಾರಿ ಪ್ರತಿಭಟನೆಗೆ ಸಿದ್ಧತೆ ನಡೆಸಲಾಗಿದೆ.

ರಾಜ್ಯ ಸರ್ಕಾರದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಮಾದಿಗರಿಗೆ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸಲಾಗುತ್ತಿದೆ. ಅಸ್ಪೃಶ್ಯತೆ ಆಚರಣೆ, ಮಾರಣಾಂತಿಕ ಹಲ್ಲೆ, ಕೊಲೆ, ಅತ್ಯಾಚಾರ ನಡೆಯುತ್ತಿರುವುದು ಕಂಡು ಬರುತ್ತಿದೆ. ಆದರೆ ಸರ್ಕಾರ ಇಂತಹ ಪ್ರಕರಣಗಳು ನಡೆದರೂ ಯಾವುದೇ ರೀತಿಯ ಕಠಿಣ ಕ್ರಮ ತೆಗೆದುಕೊಳ್ಳದೆ ಅಸಡ್ಡೆ, ಅಲಕ್ಷ್ಯ ತೋರುತ್ತಿದೆ. ಆಡಳಿತ ಪಕ್ಷದಲ್ಲಿ ಇರುವ ಮಾದಿಗ ಶಾಸಕರು ಈ ಕುರಿತು ಮಾತನಾಡಬೇಕು. ಹಾಗೆ ಪ್ರತಿಪಕ್ಷದಲ್ಲಿರುವ ಶಾಸಕ ಸರ್ಕಾರದ ಗಮನ ಸೆಳೆದು ಇಂತಹ ಘಟನಾವಳಿಗಳು ನಿಯಂತ್ರಿಸಲು ಒತ್ತಾಯ ಮಾಡಬೇಕು.

ಸೆ. 8ರಂದು ಸಂಜೆ 6 ಗಂಟೆಗೆ ಮಸ್ಕಿಯ ದಲಿತ, ಪ್ರಗತಿಪರ ರೈತರ, ಕನ್ನಡಪರ ಹಾಗೂ ಇನ್ನುಳಿದ ಹಲವಾರು ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದು ಎಂದು ದಲಿತ ಸಾಹಿತಿ ಸಿ.ದಾನಪ್ಪ ನಿಲೋಗಲ ಹಾಗೂ ದಲಿತ ಮುಖಂಡ   ದೊಡ್ಡಪ್ಪ ಮುರಾರಿ  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು