5:34 PM Saturday20 - April 2024
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಕರ್ಕಶ ಹಾರ್ನ್ ಗಳ ಕಿರಿಕಿರಿ ತಪ್ಪಿಸಲು ಪೊಲೀಸ್ ಕಾರ್ಯಾಚರಣೆ: ಹಾರ್ನ್ ಕಿತ್ತೆಸೆದು… ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ…

ಇತ್ತೀಚಿನ ಸುದ್ದಿ

ಕೋಮು ಪ್ರಚೋದನೆ ಆರೋಪ: ಚೈತ್ರಾ ಕುಂದಾಪುರ ವಿರುದ್ದ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲು

08/10/2021, 16:10

ಮಂಗಳೂರು(reporterkarnataka.com):

ಸುರತ್ಕಲ್‌ನಲ್ಲಿ ಭಜರಂಗದಳ ಮತ್ತು ದುರ್ಗಾವಾಹಿನಿ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಚೈತ್ರಾ ಕುಂದಾಪುರ ಎಂಬವರ ಮೇಲೆ ಸುರತ್ಕಲ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಮಾವೇಶದಲ್ಲಿ ಚೈತ್ರಾ ಅವರು ಮುಸ್ಲಿಂ ಮಹಿಳೆಯರನ್ನು ಮತ್ತು ತುಳುನಾಡಿನ ದೈವಗಳಾದ ಕೋಟಿಚೆನ್ನಯ್ಯ ಅವರನ್ನು ಕೆಟ್ಟದಾಗಿ ಉದಾಹರಿಸಿ ಕೋಮುಗಲಭೆಗೆ ಪ್ರಚೋದಿಸಿದ್ದರು ಎಂದು ರಾಜ್ಯ ಕಾಂಗ್ರೆಸ್ ಸಂಯೋಜಕ ಬೊಂಡಾಲ ಚಿತ್ತರಂಜನ್‌ ಶೆಟ್ಟಿ ಅವರು ಸುರತ್ಕಲ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.

ಚೈತ್ರಾ ಕುಂದಾಪುರ ಮತ್ತು ಕಾರ್ಯಕ್ರಮ ಸಂಘಟಿಸಿದವರನ್ನು ಬಂಧಿಸಬೇಕು ಎಂದು ದೂರಿನಲ್ಲಿ ವಿನಂತಿಸಿದ್ದಾರೆ.
ಕೋಟಿ ಚೆನ್ನಯ್ಯ ಅವರನ್ನು ಕಾರ್ಯಕ್ರಮದಲ್ಲಿ ಅವಮಾನಿಸಿದ್ದಾರೆ. ದೈವಗಳ ಕೈಯ್ಯಲ್ಲಿ ಇರುವುದು ಸುರಿಯ ಎಂಬ ಆಯುಧವೇ ಹೊರತು, ತಲವಾರು ಅಲ್ಲ. ತಲವಾರು ಹಿಡಿಯುವುದು ರೌಡಿಗಳು, ದುಷ್ಟರು. ತುಳುನಾಡಿನ ಮಹಾಪುರುಷರು ಹೋರಾಡಿದ್ದು ಆಗಿನ ಜಮೀನ್ದಾರಿ ವಿರುದ್ದವೆ ಹೊರತು ಮುಸ್ಲಿಮರ ವಿರುದ್ದ ಅಲ್ಲ. ಆದರೆ ಇವರು ದೈವಗಳ ಕುರಿತು ತಪ್ಪು ಕಲ್ಪನೆಯನ್ನು ಜನರ ತಲೆಗೆ ತುಂಬಿಸಿ ಕೋಮುಗಲಭೆಗೆ ಪ್ರಚೋದಿಸಿದ್ದಾರೆ ಎಂದು ಚಿತ್ತರಂಜನ್ ಶೆಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು