12:34 PM Tuesday23 - April 2024
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ಸೃಷ್ಟಿ ಕಲಾ ವಿದ್ಯಾಲಯದಲ್ಲಿ ಯಕ್ಷೋತ್ಸವ: ಸುಬ್ರಹ್ಮಣ್ಯ ಧಾರೇಶ್ವರ ಸೃಷ್ಟಿ ಕಲಾಭೂಷಣ ಪ್ರಶಸ್ತಿಗೆ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು… ಕೊಲ್ಯದಿಂದ ಅಬ್ಬಕ್ಕ ರಾಣಿ ಸರ್ಕಲ್‌ ವರೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ… 91ರ ಹರೆಯದ ಮಾಜಿ ಪ್ರಧಾನಿ ದೇವೇಗೌಡರು ಮೋದಿ ಗೆಲ್ಲಿಸಿ ಎನ್ನುತ್ತಿದ್ದಾರೆ; ದಿನಬಳಕೆ ವಸ್ತುಗಳ…

ಇತ್ತೀಚಿನ ಸುದ್ದಿ

ಬೆಸೆಂಟ್ ಕಾಲೇಜಿನಲ್ಲಿ ಏಡ್ಸ್ ಸಂಬಂಧಿತ ರಸ ಪ್ರಶ್ನೆ ಕಾರ್ಯಕ್ರಮ: ಮನೀಶ್ ಬಿ. ಕೆ., ಜಯಶ್ರೀ ಎಂ.ಸಿ. ಪ್ರಥಮ

13/10/2021, 17:58

ಮಂಗಳೂರು(reporterkarnataka.com):  ದ. ಕ.  ಜಿಲ್ಲಾ ಏಡ್ಸ್  ನಿಯಂತ್ರಣ ಇಲಾಖೆ ಹಾಗೂ  ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಬೆಸೆಂಟ್ ಕಾಲೇಜಿನ ಎನ್ ಎಸ್ ಎಸ್ ಘಟಕದ  ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆ ಸ್ವಯಂಸೇವಕರಿಗೆ ಏಡ್ಸ್ ಸಂಬಂಧಿತ ರಸ ಪ್ರಶ್ನೆ ಕಾರ್ಯಕ್ರಮ ಬೆಸೆಂಟ್ ಕಾಲೇಜಿನಲ್ಲಿ ಜರುಗಿತು. 

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಏಡ್ಸ್ ನಿಯಂತ್ರಣ ಇಲಾಖೆಯ ಅಧಿಕಾರಿ ಡಾ. ಬದ್ರುದ್ದೀನ್ ಮಾತನಾಡಿದರು.

ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ, ಸಾಮಾಜಿಕ ಜವಾಬ್ದಾರಿಯನ್ನು ನಿಭಾಯಿಸುವ ಶಕ್ತಿಯೇ ರಾಷ್ಟ್ರೀಯ ಸೇವಾ ಯೋಜನೆ ಎಂದರು.





ಕಾಲೇಜಿನ ಪ್ರಾಂಶುಪಾಲ ಡಾ.ಸತೀಶ್ ಶೆಟ್ಟಿ ಮಾತನಾಡಿ, ವ್ಯಕ್ತಿತ್ವ ಮತ್ತು ಸೇವಾ ಮನೋಭಾವನೆಯನ್ನು ಬೆಳೆಸುವ ರಾ. ಸೇ. ಯೋ ಇಂದು ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿರುವುದು  ಶ್ಲಾಘನೀಯ ಎಂದರು.

ಕಾಲೇಜಿನ ಕರೆಸ್ಪಾಂಡೆಂಟ್ ದೇವಾನಂದ ಪೈ, ಹಾಗೂ ಸಂಚಾಲಕ ಗಣೇಶ್ ಭಟ್, ಯೋಜನಾಧಿಕಾರಿ ರವಿ ಪ್ರಭಾ  ಉಪಸ್ಥಿತರಿದ್ದರು. 


ಏಡ್ಸ್ ನಿಯಂತ್ರಣ ಇಲಾಖೆಯ ಮೇಲ್ವಿಚಾರಕ ಮಹೇಶ್ ಹಾಗೂ ಸಿಬ್ಬಂದಿಗಳು ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು. 

ರಸಪ್ರಶ್ನೆ ಕಾರ್ಯಕ್ರಮದಲ್ಲಿ ಸುಬ್ರಮಣ್ಯ ಕಾಲೇಜಿನ ಮನೀಶ್ ಬಿ. ಕೆ. , ಜಯಶ್ರೀ ಎಂ.ಸಿ.  ಪ್ರಥಮ ಬಹುಮಾನ ಪಡೆದರು. ವಿಶ್ವವಿದ್ಯಾನಿಲಯ ಕಾಲೇಜಿನ ರಾಧಿಕಾ ಹಾಗೂ ಅಕ್ಷಿತ ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ಬೆಟ್ಟಂಪ್ಪಾಡಿ ಸ. ಪ್ರ. ದರ್ಜೆ ಕಾಲೇಜಿನ ಸಾರ್ಥಕ್. ಟಿ ,ರಕ್ಷಿತ್.ಎ. ರೈ ಪಡೆದು ಕೊಂಡಿದ್ದಾರೆ.

ಕಾಲೇಜಿನ ರಾ.ಸೇ.ಯೋ ಸ್ವಯಂ ಸೇವಕರಾದ ಅಮೃತಾ, ಭೂಮಿಕಾ, ಕಾರ್ಯಕ್ರಮ ನಿರೂಪಿದರು.

ಇತ್ತೀಚಿನ ಸುದ್ದಿ

ಜಾಹೀರಾತು