5:49 AM Thursday25 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ಮಹೋತ್ಸವ: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಹರಿದು ಬಂದ ಭಕ್ತಸಾಗರ; ಶಾರದೆ, ನವದುರ್ಗೆಯರ ದರ್ಶನ

14/10/2021, 18:54

ಮಂಗಳೂರು(reporterkarnataka.com): ಮಂಗಳೂರು ದಸರಾ ಎಂದೇ ಖ್ಯಾತಿ ಪಡೆದಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಪ್ರತಿ ವರ್ಷ ನಡೆಯುವ ನವರಾತ್ರಿ ಉತ್ಸವದ ಆಯುಧ ಪೂಜೆಯ ದಿನವಾದ ಇಂದು ಕುದ್ರೋಳಿ ದೇಗುಲದಲ್ಲಿ ಭಕ್ತಜನರ ದಟ್ಟಣೆ ವಿಪರೀತವಾಗಿತ್ತು. ಸರಕಾರಿ ರಜೆ ಹಾಗೂ ಶಾಲಾ-ಕಾಲೇಜುಗಳಿಗೆ ರಜೆ ಇರುವುದರಿಂದ ಬೃಹತ್ ಜನಸಾಗರವೇ ನೆರೆದಿತ್ತು.

ಕುದ್ರೋಳಿ ದೇಗುಲಕ್ಕೆ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದರು. ಸಿಎಂ ಅವರು ಸಂಜೆ 5 ಗಂಟೆಗೆ ಭೇಟಿ ನೀಡುವುದರಿಂದ ಭದ್ರತಾ ಕಾರಣಗಳಿಗಾಗಿ ಮಧ್ಯಾಹ್ನ 3 ಗಂಟೆಯಿಂದ ಸಂಜೆ ವರೆಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಆಯುಧ ಪೂಜೆಯ ದಿನವಾದ ಇಂದು ಯಾವುದೇ ವಿವಿಐಪಿಗಳು ಇಲ್ಲದ ಕಾರಣ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಾರದೆ ಹಾಗೂ ನವದುರ್ಗೆಯರನ್ನು ಕಣ್ತುಂಬಿಸಿಕೊಂಡರು. 

ಇಂದು ಬೆಳಗ್ಗಿನಿಂದಲೇ ಭಾರಿ ಸಂಖ್ಯೆಯಲ್ಲಿ ಭಕ್ತರು ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಶಾರದೆ, ನವದುರ್ಗೆ ಹಾಗೂ ವಿಘ್ನನಿವಾರಕನ ಕಂಡು ಪುನೀತರಾದರು.

ಮಂಗಳೂರು ದಸರಾ ಮಹೋತ್ಸವ ನವದುರ್ಗೆ, ಶಾರದೆ ಹಾಗೂ ಗಣಪತಿಯನ್ನು ಪ್ರತಿಷ್ಠಾಪಿಸುವ ಮೂಲಕ ಕಳೆದ ಗುರುವಾರ

ಆರಂಭವಾಯಿತು. ಗುರುವಾರ ಬೆಳಗ್ಗೆ  9 ಗಂಟೆಗೆ ಗುರುಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಮುನ್ನುಡಿ ಬರೆಯಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು