11:44 AM Friday19 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ…

ಇತ್ತೀಚಿನ ಸುದ್ದಿ

ಅಥಣಿ: ಕೃಷ್ಣಾ ನದಿ ಪ್ರವಾಹ ಸಂತ್ರಸ್ತರಿಗೆ ಈಗ ಮೊಸಳೆ, ವಿಷ ಜಂತುಗಳ ಕಾಟ: ಇನ್ನೂ ಕೈಗೆಟಕದ ಪರಿಹಾರದ ಬಿಡಿಗಾಸು !

15/10/2021, 18:23

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಪ್ರವಾಹ ಪೀಡಿತ ಗ್ರಾಮಗಳಿಗೆ ಸದ್ಯ ಬೃಹದಾಕಾರದ ಮೊಸಳೆಗಳು ಬರುತ್ತಿದ್ದು, ಈ ಮೊದಲು ಜೀವ ಭಯದಿಂದ ಕೃಷ್ಣಾ ನದಿಯ ಪ್ರವಾಹದ ವೇಳೆ ತಮ್ಮ ಮನೆಗಳನ್ನು ತೊರೆದಿದ್ದ ಸಂತ್ರಸ್ತರಿಗೆ ಮತ್ತೆ  ಆತಂಕದ ಪರಿಸ್ಥಿತಿ ಎದುರಾಗಿದೆ.

ಹಲ್ಯಾಳ ಗ್ರಾಮದ ಸೇತುವೆಯ ಮೇಲೆ ನಿತ್ಯವೂ ಸಾವಿರಾರು ವಾಹನಗಳು ಓಡಾಡುತ್ತಿದ್ದರೂ ಕೂಡ ಹದಿನೈದು ಅಡಿಯಷ್ಟು ಉದ್ದದ ಮೊಸಳೆ ಜತ್ತ ಜಾಂಬೋಟಿ ಹೆದ್ದಾರಿಯಲ್ಲಿ ಪತ್ತೆಯಾಗಿತ್ತು.

ಇದರಿಂದ ಭಯಗೊಂಡ ವಾಹನ ಸವಾರರು ಕೆಲಹೊತ್ತು ಸಂಚಾರ ಸ್ಥಗಿತಗೊಳಿಸಿದ್ದರು.

ಮೊಸಳೆ ರಸ್ತೆ ದಾಟಿದ ಬಳಿಕ ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನು ಪರಿಹಾರ ವಿಳಂಬವಾಗಿದ್ದು ಬೀಳುವ ಸ್ಥಿತಿಯಲ್ಲಿ ಇರುವ ಮನೆಗಳಲ್ಲೆ ಸಂತ್ರಸ್ತರು ಜೀವ ಕೈಯಲ್ಲಿ ಹಿಡಿದುಕೊಂಡು ಬದುಕು ಸಾಗಿಸುತ್ತಿದ್ದಾರೆ.


ಕೃಷ್ಣಾ ನದಿಯಲ್ಲಿ  ನೀರಿನ ಇಳಿಮುಖವಾಗಿದ್ದರೂ ಕೂಡ ಆಗಾಗ ಕಾಣಿಸಿಕೊಳ್ಳುತ್ತಿರುವ ವಿಷ ಜಂತುಗಳು ಮತ್ತು ಬೃಹದಾಕಾರದ ಮೊಸಳೆಗಳಿಂದಾಗಿ ಪ್ರವಾಹ ಸಂತ್ರಸ್ತರು ರಾತ್ರಿ ನಿದ್ದೆ ಇಲ್ಲದೆ ದಿನ ಕಳೆಯುವಂತಾಗಿದೆ. ಸರಕಾರ ತಕ್ಷಣ ಎಚ್ಚೆತ್ತುಕೊಳ್ಳುವ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು