12:45 AM Thursday18 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಅಗಸಗಟ್ಟೆ ತಿಂದಪ್ಪರಿಗೆ ‘ಕರುನಾಡ ಹರಿಕಾರಶ್ರೀ’ ಪ್ರಶಸ್ತಿ ಪ್ರದಾನ

15/10/2021, 19:05

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಯುವ ಪುರಾಣ ಪ್ರವಚನಕಾರ ಹಾಗೂ ರಂಗಕಲಾವಿದ ಅಗಸಗಟ್ಟೆ ತಿಂದಪ್ಪ ಅವರಿಗೆ ಮಂಡ್ಯ ಜಿಲ್ಲೆಯ ಕರುನಾಡ ಸೇವಾ ಟ್ರಸ್ಟ್  ಕರುನಾಡ ಹರಿಕಾರಶ್ರೀ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ. 

ಮಂಡ್ಯ ಜಿಲ್ಲೆಯ ಕರುನಾಡ ಸೇವಾ ಟ್ರಸ್ಟ್ ವತಿಯಿಂದ ಜರುಗಿದ ಕಾರ್ಯಕ್ರಮದಲ್ಲಿ, ವಿವಿಧ ಕ್ಷೇತ್ರಗಳಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ರಾಜ್ಯದ ವಿವಿಧ ಜಿಲ್ಲೆಗಳ ಗಣ್ಯಮಾನ್ಯರನ್ನು ಗುರುತಿಸಿ ಸನ್ಮಾನಿಸಿದೆ. ಟ್ರಸ್ಟ್‌ ವತಿಯಿಂದ ಗಣ್ಯಮಾನ್ಯರನ್ನು  ಕಾರ್ಯಕ್ರಮಕ್ಕೆ ಬರಮಾಡಿಕೊಂಡು,ಅವರನ್ನ ಸತ್ಕರಿಸಿ ಗೌರವ ಪೂರ್ವಕವಾಗಿ ಅಭಿನಂದಿಸಿದೆ. ತಿಂದಪ್ಪರ ಕಲಾ ಸೇವೆಯನ್ನು ಪರಿಗಣಿಸಿ ಅವರಿಗೆ ರಾಜ್ಯಮಟ್ಟದ “ಕರುನಾಡ  ಹರಿಕಾರಶ್ರೀ” ಪ್ರಶಸ್ತಿ ಗೌರವಿಸಿದೆ. ಅಕ್ಟೋಬರ್ 9ರಂದು ಮಂಡ್ಯದಲ್ಲಿ ಟ್ರಸ್ಟ್‌ ವತಿಯಿಂದ ಆಯೋಜಿಸಿದ್ದ, ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರಿಗೆ ಪ್ರಶಸ್ತಿ ನೀಡಲಾಯಿತು.

ಅಭಿನಂದನೆ: ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನ ಹಿರಿಯ ರಂಗಕಲಾವಿದರು. ವಿವಿಧ ಸಮುದಾಯಗಳ ಮುಖಂಡರು, ವಿವಿಧ ಪಕ್ಷಗಳ ಪ್ರಮುಖರು, ವಿವಿದ  ಕಲಾವಿದರ ಸಂಘಟನೆಗಳ ಪ್ರಮುಖರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ನಾಗರೀಕರು ಹಾಗೂ ಜನಪ್ರತಿನಿಧಿಗಳು ಪ್ರಶಸ್ತಿ ಪಡೆದ ಯುವ ರಂಗಕಲಾವಿದ ಅಗಸಗಟ್ಟೆ ತಿಂದಪ್ಪರವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

 

ಇತ್ತೀಚಿನ ಸುದ್ದಿ

ಜಾಹೀರಾತು