5:44 PM Saturday20 - April 2024
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಕರ್ಕಶ ಹಾರ್ನ್ ಗಳ ಕಿರಿಕಿರಿ ತಪ್ಪಿಸಲು ಪೊಲೀಸ್ ಕಾರ್ಯಾಚರಣೆ: ಹಾರ್ನ್ ಕಿತ್ತೆಸೆದು… ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ…

ಇತ್ತೀಚಿನ ಸುದ್ದಿ

ಇಂಧನ ಇಲಾಖೆಯಲ್ಲಿ ವಿದ್ಯುತ್ ಚಾಲಿತ ವಾಹನ ಬಳಕೆಗೆ ಚಿಂತನೆ: PIAGGIO ಸಂಸ್ಥೆಯ ವಿದ್ಯುತ್ ಚಾಲಿತ‌ ತ್ರಿಚಕ್ರ ವಾಹನ‌ ಶೋ ರೂಂ ಉದ್ಘಾಟಿಸಿ ಸಚಿವ ಸುನಿಲ್ 

16/10/2021, 18:43

ಮಂಗಳೂರು(reporterkarnataka.com): ರಾಜ್ಯ ಸರಕಾರದ ಇಂಧನ ಇಲಾಖೆಯಲ್ಲಿ ಬಳಕೆ ಮಾಡುತ್ತಿರುವ ಸರ್ಕಾರಿ ವಾಹನಗಳು‌ ವಿದ್ಯುತ್ ಚಾಲಿತ ವಾಹನಗಳಾಗಬೇಕು‌ ಎನ್ನುವ ಚಿಂತನೆಯಿದೆ ಎಂದು ಇಂಧನ ಸಚಿವ ವಿ‌. ಸುನಿಲ್‌ ಕುಮಾರ್ ಹೇಳಿದರು.

ಅವರು ಶನಿವಾರ ನಗರದ ಪಂಪ್ ವೆಲ್ ಬಳಿ ನೂತನ PIAGGIO ಸಂಸ್ಥೆಯ ವಿದ್ಯುತ್ ಚಾಲಿತ‌ ತ್ರಿಚಕ್ರ ವಾಹನ‌ ಶೋ ರೂಂ ಉದ್ಘಾಟಿಸಿ ಮಾತನಾಡಿದರು.

ಇಂದು‌ ದೇಶಾದ್ಯಂತ ವಿದ್ಯುತ್ ‌ಚಾಲಿತ ವಾಹನ‌ಗಳ‌ ಬೇಡಿಕೆ ಹೆಚ್ಚಾಗುತ್ತಿದೆ. ಸರ್ಕಾರವೂ ಕೂಡ ಎಲ್ಲ ಹಂತದಲ್ಲಿ ವಿದ್ಯುತ್ ಚಾಲಿತ ವಾಹಗಳಿಗೆ ಹೆಚ್ಚಿನ ಒತ್ತು‌ ನೀಡುತ್ತಿದೆ‌ ಎಂದರು. ಪೆಟ್ರೋಲ್ ಹಾಗೂ ಡೀಸಲ್ ವಾಹನಗಳಿಂದಾಗಿ ವಾಯು ಮಾಲಿನ್ಯ, ಶಬ್ದ ಮಾಲಿನ್ಯ ಹಾಗೂ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ‌, ಬೆಲೆಯೂ ಹೆಚ್ಚು ಎನ್ನು‌ವ ಕೂಗುಗಳು ಕೇಳಿ ಬರುತ್ತವೆ. ಹೀಗಿರುವಾಗ ವಿದ್ಯುತ್ ಚಾಲಿತ ವಾಹನಗಳು ಇಂದಿನ ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಮಾರುಕಟ್ಟೆಗೆ ಬರುತ್ತಿದೆ.

ಇಂಧನ ಇಲಾಖೆ‌ ವಹಿಸಿಕೊಂಡ‌ ನಂತರ ವಿದ್ಯುತ್ ಚಾಲಿತ ವಾಹನ ತಯಾರಕ ಕಂಪನಿಗಳ‌ ಸಭೆ‌ ನಡೆಸಲಾಗಿತ್ತು. ವಿದ್ಯುತ್ ಚಾಲಿತ ವಾಹನಗಳು ಮುನ್ನಲೆಗೆ ಬರಬೇಕು, ಜನರು ಹೆಚ್ಚು ಆಕರ್ಷಿತರಾಗಬೇಕು. ಇಂದಿನ‌ ವ್ಯವಸ್ಥೆಯಿಂದ‌ ಸುಧಾರಣೆ ಹೊಂದಬೇಕೆಂದು.  ಪೆಟ್ರೋಲ್‌, ಡೀಸಲ್ ವಾಹನಗಳಿಂದ ವಿದ್ಯುತ್ ಚಾಲಿತ ವಾಹನಗಳ‌ ಕಡೆ‌ ಮುಖ ಮಾಡೋದು ಸುಧಾರಣೆಯ ಒಂದು ಭಾಗ, ಜನರು ಬದಲಾವಣೆ ಕಡೆಗೆ ಹೆಜ್ಜೆಯನ್ನ‌ ಇಡಬೇಕು ಎಂದರು.

ವಿದ್ಯುತ್ ಚಾಲಿತ ವಾಹನಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ೨೦-೪೦% ಸಬ್ಸಿಡಿ ನೀಡಲಾಗುತ್ತಿದೆ. ತ್ರಿಚಕ್ರ ವಾಹನಗಳಿಗೆ ಸುಮಾರು 60 ಸಾವಿರ ರೂ. ಸಬ್ಸಿಡಿ‌ ದೊರೆಯುವುದರಿಂದ ಗ್ರಾಹಕರಿಗೆ‌‌ ಹೆಚ್ಚಿನ‌ ಅನುಕೂಲವಾಗಲಿದೆ ಎಂದು‌ ಸಚಿವರು ಅಭಿಪ್ರಾಯ ಪಟ್ಟರು. 

ಇನ್ನು‌ ಇಲಾಖೆ ರಾಜ್ಯದ ವಿವಿಧ ಭಾಗಗಳಲ್ಲಿ ಒಂದು ಸಾವಿರ ವಿದ್ಯುತ್ ವಾಹನ‌ ಚಾರ್ಜಿಂಗ್ ಕೇಂದ್ರ ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದರು.


ವಾಹನಗಳ ವಿಚಾರದಲ್ಲಿ ವಿದ್ಯುತ್ ವಾಹನಗಳು‌ ಮುಂದಿನ‌ ಭವಿಷ್ಯ,ಹಾಗಾಗಿ ಆ ನಿಟ್ಟಿನಲ್ಲಿ ಆಲೋಚನೆ‌ ಮಾಡಬೇಕಿದೆ. ವಿದ್ಯುತ್ ಚಾಲಿತ ವಾಹನಗಳ‌ ಬಳಕೆಗೆ ಉತ್ತೇಜನ‌ ಇಂಧನ ಇಲಾಖೆಯಿಂದಲೇ‌ ಆರಂಭವಾಗಲೆಂದು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಬಳಸುವ ಸರ್ಕಾರಿ ವಾಹನಗಳು ವಿದ್ಯುತ್ ಚಾಲಿತ ವಾಹನಗಳಾಗಬೇಕು ಎನ್ನುವ ಚಿಂತನೆ‌ ಇದೆ ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು