1:22 PM Thursday25 - April 2024
ಬ್ರೇಕಿಂಗ್ ನ್ಯೂಸ್
ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ…

ಇತ್ತೀಚಿನ ಸುದ್ದಿ

ಕಾರ್ಕಳ: ವಿವಾಹಿತ ಮಹಿಳೆ ಇಬ್ಬರು ಮಕ್ಕಳೊಂದಿಗೆ ನಾಪತ್ತೆ; ತಮ್ಮನಿಗೆ ಕರೆ ಮಾಡಿದ್ದ ಆಕೆ ಹೇಳಿದ್ದೇನು?

16/10/2021, 17:52

ಕಾರ್ಕಳ(reporterkarnataka.com): ಇಬ್ಬರು‌ ಮಕ್ಕಳೊಂದಿಗೆ ಮಹಿಳೆಯೊಬ್ಬರು ನಾಪತ್ತೆಯಾದ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೋಳ ಪದವು ನಿವಾಸಿ ಸವಿತಾ ಪೂಜಾರಿ (36) ಅವರು ತಮ್ಮ ಇಬ್ಬರು ಮಕ್ಕಳಾದ ವಿಷ್ಣು (10) ಹಾಗೂ ಆಶ್ಮಿತಾ ಎಂಬ ಇಬ್ಬರು ಮಕ್ಕಳೊಂದಿಗೆ ಕಾಣೆಯಾಗಿದ್ದಾರೆ. ಇವರು ಗಂಡನನ್ನು ಬಿಟ್ಟು ತಾಯಿ ಮನೆಯಾದ ಬೋಳ ಪದವು ಎಂಬಲ್ಲಿ ವಾಸಿಸುತ್ತಿದ್ದರು. ಬೀಡಿ ಕಟ್ಟಿಕೊಂಡು ಜೀವನ ನಡೆಸುತ್ತಿದ್ದರು. ಅಕ್ಟೋಬರ್ 12ರಂದು ಸಂಜೆ 4.30ಕ್ಕೆ ಇಬ್ಬರು ಮಕ್ಕಳೊಂದಿಗೆ ಮುಂಡ್ಕೂರಿನ ನಾನಿಲ್ತಾರಿನಲ್ಲಿರುವ ಅಜ್ಜಿ‌ ಮನೆಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದರು. ಆದರೆ ಬಳಿಕ ಅಲ್ಲಿಗೂ ಹೋಗದೆ ಮನೆಗೂ ವಾಪಸ್ಸು ಬಾರದೆ ಕಾಣೆಯಾಗಿದ್ದಾರೆ. ಸವಿತಾ ಪೂಜಾರಿ ಒಂದು ವಾರದ ಹಿಂದೆ ತಮ್ಮನಿಗೆ ಪೋನ್ ಮಾಡಿ

ನಾನು ಉಮೇಶ್ ಎಂಬವರನ್ನು ಮದುವೆಯಾಗುತ್ತೇನೆ ಎಂದು ಹೇಳಿದ್ದರಂತೆ. ಅದಕ್ಕೆ ತಮ್ಮ ಒಪ್ಪಿರಲಿಲ್ಲ. ಹೀಗಾಗಿ ಉಮೇಶ್ ಎಂಬವರೊಂದಿಗೆ ಸವಿತಾ ಹೋಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು